ಎಲ್ಎಸಿಯಲ್ಲಿ ಭಾರತವನ್ನು ಪರೀಕ್ಷಿಸಲಾಗುತ್ತಿದೆ: ಜೈಶಂಕರ್
ನವದೆಹಲಿ, ಡಿಸೆಂಬರ್ 12: ಪೂರ್ವ ಲಡಾಖ್ನಲ್ಲಿ ಚೀನಾದೊಂದಿಗಿನ ಗಡಿ ಬಿಕ್ಕಟ್ಟಿನ ವೇಳೆ ಏಳು ತಿಂಗಳಿನಿಂದ ಭಾರತವನ್ನು ಪರೀಕ್ಷಿಸಲಾಗುತ್ತಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ. ಸಂದರ್ಭಕ್ಕೆ ಅನುಗುಣವಾಗಿ ಭಾರತ ಎದ್ದುನಿಂತು ರಾಷ್ಟ್ರೀಯ ಭದ್ರತೆಯ ಸವಾಲನ್ನು ಎದುರಿಸಲಿದೆ ಎಂದು ಅವರು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಎಫ್ಐಸಿಸಿಐ ವಾರ್ಷಿಕ ಸಭೆಯಲ್ಲಿ ಶನಿವಾರ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಭಾರತದ ಸಾರ್ವಜನಿಕ ಭಾವನೆಯ ಮೇಲೆ ದೊಡ್ಡ ಪ್ರಮಾಣದಲ್ಲಿ ಪ್ರಭಾವ ಬೀರಿರುವ ಪೂರ್ವ ಲಡಾಖ್ನಲ್ಲಿನ ಘಟನೆ ವಾಸ್ತವವಾಗಿ ಚೀನಾದ ಆಸಕ್ತಿಯಾಗಿಲ್ಲ ಎಂದಿದ್ದಾರೆ.
ಗಡಿ ವಾಸ್ತವ ನಿಯಂತ್ರಣ ರೇಖೆ (ಎಲ್ಎಸಿ) ಬಳಿ ನಡೆದ ಘಟನೆಗಳು ಬಹಳ ಕಳವಳ ಮೂಡಿಸಿವೆ. ಇವು ಅನೇಕ ಸಾಮಾನ್ಯ ಆತಂಕಗಳನ್ನು ಹುಟ್ಟುಹಾಕಿವೆ ಎಂದು ತಿಳಿಸಿದ್ದಾರೆ.

ಈ ತಿಕ್ಕಾಟಕ್ಕೆ ತಾತ್ಕಾಲಿಕ ಅಥವಾ ಪೂರ್ಣ ವಿರಾಮ ಬೀಳುವ ನಿರೀಕ್ಷೆಗಳು ಇವೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 'ಅಲ್ಲಿ ಸುಲಭವಾಗಿ ಎಲ್ಲವೂ ಮುಗಿಯಲಿದೆಯೇ ಅಥವಾ ಇಲ್ಲವೇ ಎಂದು ಭವಿಷ್ಯ ನುಡಿಯುವ ಸ್ಥಾನದಲ್ಲಿ ನಾನಿಲ್ಲ. ಅದಕ್ಕೆ ಕಾಲವೇ ಉತ್ತರ ನೀಡಲಿದೆ' ಎಂದು ಹೇಳಿದ್ದಾರೆ.
'ಗಡಿಯಲ್ಲಿ ನಡೆದಿರುವುದು ವಾಸ್ತವವಾಗಿ ಚೀನಾದ ಆಸಕ್ತಿಯೂ ಆಗಿಲ್ಲ. ಆದರೆ ಅದು ಅಲ್ಲಿ ಮಾಡಿರುವುದು ಭಾರತದ ಸಾರ್ವಜನಿಕರ ಭಾವನೆಗಳ ಮೇಲೆ ಪ್ರಭಾವ ಬೀರಿದೆ. ಕಳೆದ ಅನೇಕ ದಶಕಗಳಲ್ಲಿ ಭಾರತದ ಜನರು ಚೀನಾ ಬಗ್ಗೆ ಯಾವ ರೀತಿ ಭಾವನೆಯನ್ನು ಬದಲಿಸಿಕೊಂಡಿದ್ದಾರೆ ಎಂದು ನಾನು ನೋಡಿದ್ದೇನೆ. ಬಹು ಕಷ್ಟದ ದಿನಗಳನ್ನು ನೆನಪಿಸಿಕೊಳ್ಳುವಷ್ಟು ನನಗೆ ವಯಸ್ಸಾಗಿದೆ. ಅದರಲ್ಲಿಯೂ ನನ್ನ ಬಾಲ್ಯ ಮತ್ತು ತಾರುಣ್ಯದ ದಿನಗಳ ನೆನಪಿನಲ್ಲಿವೆ' ಎಂದಿದ್ದಾರೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications