India Weather: ಮಾರ್ಚ್ 1ರಂದು ದೇಶದ ಈ ಭಾಗಗಳಲ್ಲಿ ಭಾರೀ ಮಳೆ ಮುನ್ಸೂಚನೆ; ಈ ಭವಿಷ್ಯ ನಿಜವಾಗಲಿದ್ಯಾ?
India weather: ಚಳಿಗಾಲ ಮುಗಿಯುವ ಹಂತದಲ್ಲಿದ್ದು, ಬಿರು ಬಿಸಿಲಿನ ವಾತಾವರಣ ನಿರ್ಮಾಣವಾಗುತ್ತಿದೆ. ಇನ್ನು ಉತ್ತರ ಭಾರತದ ಕಡೆ ಮಾತ್ರ ಚಳಿಯ ಪ್ರಯಾಣ ಇರುತ್ತಿದೆ. ಮತ್ತೊಂದೆಡೆ ಇಂತಹ ವಾತಾವರಣದ ನಡುವೆಯೂ ದೇಶದ ಬಹುತೇಕ ಭಾಗಗಳಲ್ಲಿ (ಮಾರ್ಚ್ 01) ಭಾರೀ ಮಳೆ ಸುರಿಯುವ ಮುನ್ಸೂಚನೆ ಇದೆ. ಹಾಗಾದರೆ ಯಾವೆಲ್ಲ ಕಡೆಗಳಲ್ಲಿ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಇದೀಗ ಫೆಬ್ರವರಿ ತಿಂಗಳು ಮುಗಿದು ಮಾರ್ಚ್ ಎಂಟ್ರಿ ಕೊಡಲು ಇನ್ನು ಕೆಲವೇ ಕ್ಷಣಗಳು ಬಾಕಿಯಿದೆ. ಇನ್ನು ಮಾರ್ಚ್ ತಿಂಗಳ ಆರಂಭದಲ್ಲಿ ಈ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎನ್ನುವ ಹವಾಮಾನ ಇಲಾಖೆಯ ಮುನ್ಸೂಚನೆ ನಿಜವಾಗಲಿದೆಯಾ ಎಂದು ಕಾದುನೋಡಬೇಕಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎಂದು ತಿಳಿಯಿರಿ.

ಮಾರ್ಚ್ 1ರಂದು ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಲೇಹ್ನಲ್ಲಿ ತೀವ್ರ ಹಿಮಪಾತ ಮತ್ತು ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಯಾವ್ಯಾವಾಗ ಮಳೆ?
ಮಾರ್ಚ್ 1ರಂದು ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಲೇಹ್ನಲ್ಲಿ ತೀವ್ರ ಹಿಮಪಾತ ಮತ್ತು ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
1. ಮಾರ್ಚ್ 1ರಂದು ಜಮ್ಮು-ಕಾಶ್ಮೀರ ಮತ್ತು ಲಡಾಖ್ನಲ್ಲಿ ಪ್ರತ್ಯೇಕವಾದ ಭಾರೀ ಮಳೆ/ಹಿಮಪಾತ (64.5-115.5 ಮಿಮೀ) ಮತ್ತು ಮಾರ್ಚ್ 2, 2024ರಂದು ಭಾರೀ ಮಳೆ/ಹಿಮಪಾತ (115.5-204.4 ಮಿಮೀ) ಬೀಳುವ ಸಾಧ್ಯತೆಯಿದೆ.
2. ಮಾರ್ಚ್ 1 ಮತ್ತು 2ರಂದು ಉತ್ತರಾಖಂಡದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆ/ಹಿಮಪಾತ (64.5-115.5 ಮಿಮೀ) ಸಾಧ್ಯತೆ ಇದೆ.
3. ಹಿಮಾಚಲ ಪ್ರದೇಶವು ಮಾರ್ಚ್ 1ರಂದು ಪ್ರತ್ಯೇಕ ಭಾರೀ ಮಳೆ/ಹಿಮಪಾತವನ್ನು (64.5-115.5 ಮಿಮೀ) ಪಡೆಯುವ ಸಾಧ್ಯತೆಯಿದೆ. ಇನ್ನು ಮಾರ್ಚ್ 2ರಂದು ರಾಜ್ಯದಲ್ಲಿ 115.5-204.4 ಮಿಮೀ ಮಳೆ/ಹಿಮಪಾತ ಅನುಭವಿಸುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶವು ಚಳಿಗಾಲದ ಅವಧಿಯಲ್ಲಿ 105 ಸೆಂ.ಮೀ ಮಳೆಯನ್ನು ಪಡೆದಿದೆ. ಸಾಮಾನ್ಯವಾಗಿ ಮಳೆ 166.6 ಮಿಮೀ, ಜನವರಿ 1ರಿಂದ ಫೆಬ್ರವರಿ 24ರವರೆಗೆ 37ರಷ್ಟು ಕೊರತೆಯಾಗಿದೆ.
4. ಇನ್ನು ಹವಾಮಾನ ಇಲಾಖೆಯ ಪ್ರಕಾರ, ಮಾರ್ಚ್ 1 ಮತ್ತು 2ರಂದು ಹಿಮಾಚಲ ಪ್ರದೇಶದಲ್ಲಿ ಅಲ್ಲಲ್ಲಿ ಪ್ರತ್ಯೇಕವಾದ ಆಲಿಕಲ್ಲು ಸಹಿತ ಮಳೆ ಬೀಳುವ ಸಾಧ್ಯೆತೆಯಿದೆ.
5. ಮಾರ್ಚ್ 1 ಮತ್ತು 2ರಂದು ಪಂಜಾಬ್ನಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ.
6. ಮಾರ್ಚ್ 2ರಂದು ಹರಿಯಾಣ ಮತ್ತು ಚಂಡೀಗಢದಲ್ಲಿ ಅಲ್ಲಿ ಆಲಿಕಲ್ಲು ಮಳೆ ಸಾಧ್ಯತೆ.
7. ಮಾರ್ಚ್ 2ರಂದು ಪಶ್ಚಿಮ ಉತ್ತರ ಪ್ರದೇಶದಲ್ಲಿ ಆಲಿಕಲ್ಲು ಸಹಿತ ಮಳೆ ಬೀಳುವ ಸಾಧ್ಯತೆಯಿದೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Summer Walking: ಬೇಸಿಗೆಯಲ್ಲಿ ವಾಕಿಂಗ್ ಮಾಡುವವರು ಈ ನಿಯಮ ತಪ್ಪದೇ ಪಾಲಿಸಿ.. -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications