ಭಾರತ ಎಂದಿದ್ದರೂ ಅತುಲ್ಯ ಎಂದ ಅಮೀರ್ ಖಾನ್
ನವದೆಹಲಿ, ಜ. 07: ಭಾರತ ಎಂದಿದ್ದರೂ ಅತುಲ್ಯ(ಇನ್ ಕ್ರೆಡಿಬಲ್). ಭಾರತದ ಹೆಮ್ಮೆಯನ್ನು ಸಾರುವ ಅಭಿಯಾನದ ಭಾಗವಾಗಿ ನಾನು ಕಾರ್ಯ ನಿರ್ವಹಿಸಿದ್ದು ನನ್ನ ಪುಣ್ಯ ಎಂದು ಬಾಲಿವುಡ್ ನಟ ಅಮೀರ್ ಖಾನ್ ಹೇಳಿದ್ದಾರೆ. ಇನ್ ಕ್ರೆಡಿಬಲ್ ಇಂಡಿಯಾದ ನೂತನ ರಾಯಭಾರಿಯಾಗಿ ಬಿಗ್ ಬಿ ಅಮಿತಾಬ್ ಬಚ್ಚನ್ ಹೆಸರು ಅಂತಿಮವಾಗಿದೆ. ಗುಜರಾತಿನ ಪ್ರವಾಸೋದ್ಯಮ
ಇನ್ ಕ್ರೆಡಿಬಲ್ ಇಂಡಿಯಾ ಅಭಿಯಾನದೊಂದಿಗಿನ ಆಮೀರ್ ಖಾನ್ ಅವರ ಒಪ್ಪಂದದ ಅವಧಿ ಮುಗಿದಿದ್ದರಿಂದ ಅವರನ್ನು ಕೈಬಿಟ್ಟು ಮತ್ತೊಬ್ಬರನ್ನು ನೇಮಿಸಲಾಗುತ್ತಿದೆ. ಅಭಿಯಾನದಿಂದ ಅಮೀರ್ ಅವರನ್ನು ತೆಗೆದು ಹಾಕಲಾಗಿದೆ ಎಂಬ ಸುದ್ದಿ ಸರಿಯಲ್ಲ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ಸ್ಪಷ್ಟಪಡಿಸಿದೆ.[ಅಸಹಿಷ್ಣುತೆ ಬಗ್ಗೆ ಸೊಲ್ಲೆತ್ತಿದ್ದ ಅಮೀರ್ ಗೆ ಬಹಿರಂಗ ಪತ್ರ]

ನಾನು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದರ ಬಗ್ಗೆ ಹೆಮ್ಮೆಯಿದೆ. ನಾನು ಇದುವರೆವಿಗೂ ಸಾಮಾಜಿಕ ಸಂದೇಶ ಸಾರುವ ಅಥವಾ ದೇಶ ಭಕ್ತಿ ಸಾರುವ ಚಿತ್ರಗಳನ್ನು ಯಾವುದೇ ಸಂಭಾವನೆ ಪಡೆಯದೆ ನಟಿಸಿದ್ದೇನೆ.[ಖಾನ್ ನನ್ನು 'ಅಮೀರ'ನನ್ನಾಗಿಸಿದ ಬ್ರ್ಯಾಂಡ್ ಗಳು]
ಕಳೆದ 10 ವರ್ಷಗಳಿಂದ 'ಇನ್ಕ್ರೆಡಿಬಲ್ ಇಂಡಿಯಾ' ಅಭಿಯಾನದ ರಾಯಭಾರಿಯಾಗಿ ನಾನು ಪ್ರಚಾರ ಮಾಡಿದ್ದೇನೆ. ಅದಕ್ಕಾಗಿ ನಾನು ಸರ್ಕಾರದಿಂದ ಹಣ ಪಡೆದಿಲ್ಲ. ಉಚಿತವಾಗಿ ಅಭಿಯಾನಕ್ಕೆ ಬೆಂಬಲ ನೀಡಿದ್ದೇನೆ. ನನ್ನನ್ನು ಅಭಿಯಾನದಿಂದ ಕೈ ಬಿಟ್ಟಿರುವುದಕ್ಕೆ ನನಗೆ ಬೇಸರವಿಲ್ಲ ಎಂದಿದ್ದಾರೆ.[ಎಲ್ಲಿಯ ಶಾಶ್ವತಿ, ಎಲ್ಲಿಯ ಕಿರಣ್; ಎಲ್ಲಿಯ ಅಕ್ಷಯ್, ಎಲ್ಲಿಯ ಅಮೀರ್!]
ಬಿಗ್ ಬಿ ಬದಲಿಗೆ ಯಾರು 'ಅತಿಥಿ ದೇವೋ ಭವ' ಎನ್ನುತ್ತಾ ಅತುಲ್ಯ ಭಾರತದ ಅಭಿಯಾನದ ರಾಯಭಾರಿಯಾಗಬೇಕು ಎಂಬುದರ ಬಗ್ಗೆ ಗುರುವಾರದಿಂದ ಭಾರಿ ಚರ್ಚೆ ಶುರುವಾಗಿತ್ತು. ಮೊದಲಿಗೆ ಈ ಬಾರಿ ಮಹಿಳೆಯರಿಗೆ ಸ್ಥಾನ ನೀಡಲು ಸಚಿವಾಲಯ ಬಯಸಿತ್ತು ಎಂಬುದರ ಬಗ್ಗೆ ಕೂಡಾ ಸಿಎನ್ಎನ್ ಐಬಿಎನ್ ವರದಿ ಮಾಡಿತ್ತು.
Snapped deal !!!! So @aamir_khan dumped from #IncredibleIndia campaign. Proof of #Intolerance established. Again.
— Sanjay Jha (@JhaSanjay) January 6, 2016 ಅಕ್ಷಯ್ ಕುಮಾರ್ ಅವರು ರಾಯಭಾರಿಯಾಗಲು ಸೂಕ್ತ ವ್ಯಕ್ತಿ ಎಂದು ಟೈಮ್ಸ್ ನೌ ತನ್ನ ಅಭಿಮತ ಹೇಳಿತ್ತು. ಇನ್ನೊಂದೆಡೆ ಭಾರತದಲ್ಲಿ ಅಸಹಿಷ್ಣುತೆ ಪರಿಸ್ಥಿತಿ ಬಗ್ಗೆ ಅಮೀರ್ ಖಾನ್ ಮಾತನ್ನಾಡಿದ್ದರಿಂದ ಅವರನ್ನು ಈ ಅಭಿಯಾನದಿಂದ ಕೈ ಬಿಡಲಾಗಿದೆ ಎಂದು ಕಾಂಗ್ರೆಸ್ ಸೇರಿದಂತೆ ಅನೇಕ ಪಕ್ಷಗಳು ಕೂಗೆತ್ತಿದ್ದವು. ಸಾಮಾಜಿಕ ಜಾಲ ತಾಣಗಳಲ್ಲಿ ಭಾರಿ ಚರ್ಚೆ ಕೂಡಾ ನಡೆದಿತ್ತು.
-
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications