ಭಾರತ ಎಂದಿದ್ದರೂ ಅತುಲ್ಯ ಎಂದ ಅಮೀರ್ ಖಾನ್
ನವದೆಹಲಿ, ಜ. 07: ಭಾರತ ಎಂದಿದ್ದರೂ ಅತುಲ್ಯ(ಇನ್ ಕ್ರೆಡಿಬಲ್). ಭಾರತದ ಹೆಮ್ಮೆಯನ್ನು ಸಾರುವ ಅಭಿಯಾನದ ಭಾಗವಾಗಿ ನಾನು ಕಾರ್ಯ ನಿರ್ವಹಿಸಿದ್ದು ನನ್ನ ಪುಣ್ಯ ಎಂದು ಬಾಲಿವುಡ್ ನಟ ಅಮೀರ್ ಖಾನ್ ಹೇಳಿದ್ದಾರೆ. ಇನ್ ಕ್ರೆಡಿಬಲ್ ಇಂಡಿಯಾದ ನೂತನ ರಾಯಭಾರಿಯಾಗಿ ಬಿಗ್ ಬಿ ಅಮಿತಾಬ್ ಬಚ್ಚನ್ ಹೆಸರು ಅಂತಿಮವಾಗಿದೆ. ಗುಜರಾತಿನ ಪ್ರವಾಸೋದ್ಯಮ
ಇನ್ ಕ್ರೆಡಿಬಲ್ ಇಂಡಿಯಾ ಅಭಿಯಾನದೊಂದಿಗಿನ ಆಮೀರ್ ಖಾನ್ ಅವರ ಒಪ್ಪಂದದ ಅವಧಿ ಮುಗಿದಿದ್ದರಿಂದ ಅವರನ್ನು ಕೈಬಿಟ್ಟು ಮತ್ತೊಬ್ಬರನ್ನು ನೇಮಿಸಲಾಗುತ್ತಿದೆ. ಅಭಿಯಾನದಿಂದ ಅಮೀರ್ ಅವರನ್ನು ತೆಗೆದು ಹಾಕಲಾಗಿದೆ ಎಂಬ ಸುದ್ದಿ ಸರಿಯಲ್ಲ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ಸ್ಪಷ್ಟಪಡಿಸಿದೆ.[ಅಸಹಿಷ್ಣುತೆ ಬಗ್ಗೆ ಸೊಲ್ಲೆತ್ತಿದ್ದ ಅಮೀರ್ ಗೆ ಬಹಿರಂಗ ಪತ್ರ]

ನಾನು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದರ ಬಗ್ಗೆ ಹೆಮ್ಮೆಯಿದೆ. ನಾನು ಇದುವರೆವಿಗೂ ಸಾಮಾಜಿಕ ಸಂದೇಶ ಸಾರುವ ಅಥವಾ ದೇಶ ಭಕ್ತಿ ಸಾರುವ ಚಿತ್ರಗಳನ್ನು ಯಾವುದೇ ಸಂಭಾವನೆ ಪಡೆಯದೆ ನಟಿಸಿದ್ದೇನೆ.[ಖಾನ್ ನನ್ನು 'ಅಮೀರ'ನನ್ನಾಗಿಸಿದ ಬ್ರ್ಯಾಂಡ್ ಗಳು]
ಕಳೆದ 10 ವರ್ಷಗಳಿಂದ 'ಇನ್ಕ್ರೆಡಿಬಲ್ ಇಂಡಿಯಾ' ಅಭಿಯಾನದ ರಾಯಭಾರಿಯಾಗಿ ನಾನು ಪ್ರಚಾರ ಮಾಡಿದ್ದೇನೆ. ಅದಕ್ಕಾಗಿ ನಾನು ಸರ್ಕಾರದಿಂದ ಹಣ ಪಡೆದಿಲ್ಲ. ಉಚಿತವಾಗಿ ಅಭಿಯಾನಕ್ಕೆ ಬೆಂಬಲ ನೀಡಿದ್ದೇನೆ. ನನ್ನನ್ನು ಅಭಿಯಾನದಿಂದ ಕೈ ಬಿಟ್ಟಿರುವುದಕ್ಕೆ ನನಗೆ ಬೇಸರವಿಲ್ಲ ಎಂದಿದ್ದಾರೆ.[ಎಲ್ಲಿಯ ಶಾಶ್ವತಿ, ಎಲ್ಲಿಯ ಕಿರಣ್; ಎಲ್ಲಿಯ ಅಕ್ಷಯ್, ಎಲ್ಲಿಯ ಅಮೀರ್!]
ಬಿಗ್ ಬಿ ಬದಲಿಗೆ ಯಾರು 'ಅತಿಥಿ ದೇವೋ ಭವ' ಎನ್ನುತ್ತಾ ಅತುಲ್ಯ ಭಾರತದ ಅಭಿಯಾನದ ರಾಯಭಾರಿಯಾಗಬೇಕು ಎಂಬುದರ ಬಗ್ಗೆ ಗುರುವಾರದಿಂದ ಭಾರಿ ಚರ್ಚೆ ಶುರುವಾಗಿತ್ತು. ಮೊದಲಿಗೆ ಈ ಬಾರಿ ಮಹಿಳೆಯರಿಗೆ ಸ್ಥಾನ ನೀಡಲು ಸಚಿವಾಲಯ ಬಯಸಿತ್ತು ಎಂಬುದರ ಬಗ್ಗೆ ಕೂಡಾ ಸಿಎನ್ಎನ್ ಐಬಿಎನ್ ವರದಿ ಮಾಡಿತ್ತು.
Snapped deal !!!! So @aamir_khan dumped from #IncredibleIndia campaign. Proof of #Intolerance established. Again.
— Sanjay Jha (@JhaSanjay) January 6, 2016 ಅಕ್ಷಯ್ ಕುಮಾರ್ ಅವರು ರಾಯಭಾರಿಯಾಗಲು ಸೂಕ್ತ ವ್ಯಕ್ತಿ ಎಂದು ಟೈಮ್ಸ್ ನೌ ತನ್ನ ಅಭಿಮತ ಹೇಳಿತ್ತು. ಇನ್ನೊಂದೆಡೆ ಭಾರತದಲ್ಲಿ ಅಸಹಿಷ್ಣುತೆ ಪರಿಸ್ಥಿತಿ ಬಗ್ಗೆ ಅಮೀರ್ ಖಾನ್ ಮಾತನ್ನಾಡಿದ್ದರಿಂದ ಅವರನ್ನು ಈ ಅಭಿಯಾನದಿಂದ ಕೈ ಬಿಡಲಾಗಿದೆ ಎಂದು ಕಾಂಗ್ರೆಸ್ ಸೇರಿದಂತೆ ಅನೇಕ ಪಕ್ಷಗಳು ಕೂಗೆತ್ತಿದ್ದವು. ಸಾಮಾಜಿಕ ಜಾಲ ತಾಣಗಳಲ್ಲಿ ಭಾರಿ ಚರ್ಚೆ ಕೂಡಾ ನಡೆದಿತ್ತು.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications