ಪಠಾಣ್ಕೋಠ್ ದಾಳಿ : ಪಾಕ್ಗೆ ಮೂರು ದಿನಗಳ ಗಡುವು
ಬೆಂಗಳೂರು, ಜನವರಿ 04 : ಪಂಜಾಬ್ನ ಪಠಾಣ್ ಕೋಠ್ ವಾಯುನೆಲೆ ಮೇಲೆ ದಾಳಿ ಮಾಡಿದ ಜೈಶ್-ಏ-ಮೊಹಮದ್ ಉಗ್ರ ಸಂಘಟನೆ ವಿರುದ್ಧ ಮೂರು ದಿನಗಳಲ್ಲಿ ಕ್ರಮ ಕೈಗೊಳ್ಳುವಂತೆ ಭಾರತ ಪಾಕಿಸ್ತಾನಕ್ಕೆ ಸೂಚನೆ ನೀಡಲಿದೆ. ಇಲ್ಲವಾದಲ್ಲಿ ಪಾಕ್ ಜೊತೆಗಿನ ಶಾಂತಿ ಮಾತುಕತೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.
ಪಠಾಣ್ ಕೋಟ್ ಉಗ್ರರ ದಾಳಿಯ ನಂತರ ದೆಹಲಿಯಲ್ಲಿ ನಡೆದ ಎರಡು ಉನ್ನತ ಮಟ್ಟದ ಸಭೆಗಳಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎರಡು ಸಭೆಗಳು ನಡೆದಿವೆ. [ಪಠಾಣ್ ಕೋಟ್ ದಾಳಿ : ಬೆಂಗಳೂರಿನ ನಿರಂಜನ್ ಹುತಾತ್ಮ]

ಪಂಜಾಬ್ ಪೊಲೀಸ್, ಕೇಂದ್ರ ಗುಪ್ತಚರ ಇಲಾಖೆ, ರಾಷ್ಟ್ರೀಯ ತನಿಖಾ ದಳ ಪಠಾಣ್ ಕೋಟ್ ದಾಳಿಯ ಹಿಂದೆ ಜೈಶ್-ಏ-ಮೊಹಮದ್ ಉಗ್ರ ಸಂಘಟನೆ ಕೈವಾಡವಿರುವ ಕುರಿತು ಸಾಕ್ಷಿಗಳನ್ನು ಸಂಗ್ರಹಣೆ ಮಾಡಿವೆ. ಇವುಗಳನ್ನು ಪಾಕಿಸ್ತಾನಕ್ಕೆ ನೀಡಿ, ಸಂಘಟನೆ ವಿರುದ್ಧ ಮೂರು ದಿನಗಳಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಭಾರತ ಒತ್ತಾಯಿಸಲಿದೆ. [ವಾಯುನೆಲೆಗೆ ಉಗ್ರರು ನುಗ್ಗಿದ್ದು ಹೇಗೆ?]
ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿರುವ ಜೈಶ್-ಏ-ಮೊಹಮದ್ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ, ಪಾಕ್ ಜೊತೆಗಿನ ಶಾಂತಿ ಮಾತುಕತೆಯನ್ನು ಸ್ಥಗಿತಗೊಳಿಸಲು ಭಾರತ ನಿರ್ಧರಿಸಿದೆ. ಪಠಾಣ್ ಕೋಟ್ನಲ್ಲಿ ದಾಳಿ ಮಾಡಿದ ಉಗ್ರರ ದೂರವಾಣಿ ಕರೆ, ಡಿಎನ್ಎ ಸ್ಯಾಂಪಲ್ಗಳನ್ನು ಸಂಗ್ರಹಣೆ ಮಾಡಲಾಗಿದೆ.
ಜೈಷ್-ಏ-ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮೌಲನಾ ಮಸೂದ್ ಅಜರ್ ಬಂಧನಕ್ಕೆ ಭಾರತ ಬೇಡಿಕೆ ಇಡಲಿದೆ. ಕಂದಹಾರ್ ವಿಮಾನ ಅಪಹರಣವಾದಾಗ ಭಾರತ ಮಸೂದ್ನನ್ನು ಬಿಡುಗಡೆ ಮಾಡಿತ್ತು. ಪಾಕಿಸ್ತಾನಕ್ಕೆ ತೆರಳಿದ ಆತ, ಉಗ್ರ ಸಂಘಟನೆ ಹುಟ್ಟು ಹಾಕಿದ್ದ. ಸಂಸತ್ ಭವನದ ಮೇಲೆ ನಡೆದ ದಾಳಿಯ ಸಂಚು ರೂಪಿಸಿದ್ದು ಇದೇ ಅಜರ್.
-
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ












Click it and Unblock the Notifications