ಪಾಕಿಸ್ತಾನದ 11 ಖೈದಿಗಳನ್ನು ಬಿಡುಗಡೆ ಮಾಡಲಿರುವ ಭಾರತ
ನವದೆಹಲಿ, ಜೂನ್ 12: ಮಹತ್ವದ ಬೆಳವಣಿಗೆಯೊಂದರಲ್ಲಿ ಶಿಕ್ಷೆಯ ಅವಧಿಯನ್ನು ಮುಗಿಸಿದ ಪಾಕಿಸ್ತಾನದ 11 ಖೈದಿಗಳನ್ನು ಭಾರತ ಸೋಮವಾರ (ಜೂನ್ 12) ಬಿಡುಗಡೆ ಮಾಡಲಿದೆ.
ಕಜಕಿಸ್ತಾನದ ರಾಜಧಾನಿಯಾದ ಆಸ್ತಾನಾದಲ್ಲಿ ನಡೆಯುತ್ತಿರುವ ಶಾಂಘೈ ಒಕ್ಕೂಟ ಶೃಂಗಸಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್, ಪರಸ್ಪರ ಭೇಟಿಯಾಗಿ ಉಭಯ ಕುಶಲೋಪರಿ ನಡೆಸಿದ ನಂತರ ನಡೆದ ಈ ಬೆಳವಣಿಗೆ ಉಭಯ ದೇಶದ ಜನರಲ್ಲೂ ಕುತೂಹಲ ಮೂಡಿಸಿದೆ.

ಇದರೊಂದಿಗೆ, ಪಾಕಿಸ್ತಾನದಲ್ಲಿರುವ ಭಾರತೀಯ ಖೈದಿಗಳಿಗೂ ಬಿಡುಗಡೆಯ ಭಾಗ್ಯ ಸಿಗುವ ನಿರೀಕ್ಷೆಯನ್ನು ಭಾರತ ವ್ಯಕ್ತಪಡಿಸಿದೆ. ಮೂಲಗಳ ಪ್ರಕಾರ ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದ ನವಾಜ್ ಷರೀಫ್ ಅವರ ಆರೋಗ್ಯದ ಕುರಿತು ಪ್ರಧಾನಿ ಮೋದಿ ವಿಚಾರಿಸಿದ್ದಾರರೆ. ಹಾಗೆಯೇ ಅವರ ತಾಯಿ ಮತ್ತು ಕುಟುಂಬದ ಬಗ್ಗೆಯೂ ವಿಚಾರಿಸಿದ್ದಾರೆ.
ಪಾಕಿಸ್ತಾನದ ಜೈಲಿನಲ್ಲಿ ಈಗಾಗಲೇ 132 ಖೈದಿಗಳಿದ್ದು, ಅವರಲ್ಲಿ 57 ಜನರ ಶಿಕ್ಷಾ ಅವಧಿ ಮುಕ್ತಾಯಗೊಂಡಿದೆ. ಆದರೆ ಆ ಎಲ್ಲ ಖೈದಿಗಳ ರಾಷ್ಟ್ರೀಯತೆಯನ್ನು ಸಾಬೀತುಪಡಿಸದೆ, ಅವರನ್ನು ಬಿಡುವುದಿಲ್ಲ ಎಂದು ಪಾಕಿಸ್ತಾನ ಹೇಳಿದೆ. ಜೊತೆಗೆ ಕುಲಭೂಷಣ್ ಜಾಧವ್ ಪ್ರಕರಣ ಸಹ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಿಚಾರಣೆಗೊಳಪಡುತ್ತಿರುವಾಗ ಭಾರತದ ಈ ನಡೆ ಹಲವರಲ್ಲಿ ಬೇಸರ ಮೂಡಿಸಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications