ಪಾಕಿಸ್ತಾನದ 11 ಖೈದಿಗಳನ್ನು ಬಿಡುಗಡೆ ಮಾಡಲಿರುವ ಭಾರತ
ನವದೆಹಲಿ, ಜೂನ್ 12: ಮಹತ್ವದ ಬೆಳವಣಿಗೆಯೊಂದರಲ್ಲಿ ಶಿಕ್ಷೆಯ ಅವಧಿಯನ್ನು ಮುಗಿಸಿದ ಪಾಕಿಸ್ತಾನದ 11 ಖೈದಿಗಳನ್ನು ಭಾರತ ಸೋಮವಾರ (ಜೂನ್ 12) ಬಿಡುಗಡೆ ಮಾಡಲಿದೆ.
ಕಜಕಿಸ್ತಾನದ ರಾಜಧಾನಿಯಾದ ಆಸ್ತಾನಾದಲ್ಲಿ ನಡೆಯುತ್ತಿರುವ ಶಾಂಘೈ ಒಕ್ಕೂಟ ಶೃಂಗಸಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್, ಪರಸ್ಪರ ಭೇಟಿಯಾಗಿ ಉಭಯ ಕುಶಲೋಪರಿ ನಡೆಸಿದ ನಂತರ ನಡೆದ ಈ ಬೆಳವಣಿಗೆ ಉಭಯ ದೇಶದ ಜನರಲ್ಲೂ ಕುತೂಹಲ ಮೂಡಿಸಿದೆ.

ಇದರೊಂದಿಗೆ, ಪಾಕಿಸ್ತಾನದಲ್ಲಿರುವ ಭಾರತೀಯ ಖೈದಿಗಳಿಗೂ ಬಿಡುಗಡೆಯ ಭಾಗ್ಯ ಸಿಗುವ ನಿರೀಕ್ಷೆಯನ್ನು ಭಾರತ ವ್ಯಕ್ತಪಡಿಸಿದೆ. ಮೂಲಗಳ ಪ್ರಕಾರ ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದ ನವಾಜ್ ಷರೀಫ್ ಅವರ ಆರೋಗ್ಯದ ಕುರಿತು ಪ್ರಧಾನಿ ಮೋದಿ ವಿಚಾರಿಸಿದ್ದಾರರೆ. ಹಾಗೆಯೇ ಅವರ ತಾಯಿ ಮತ್ತು ಕುಟುಂಬದ ಬಗ್ಗೆಯೂ ವಿಚಾರಿಸಿದ್ದಾರೆ.
ಪಾಕಿಸ್ತಾನದ ಜೈಲಿನಲ್ಲಿ ಈಗಾಗಲೇ 132 ಖೈದಿಗಳಿದ್ದು, ಅವರಲ್ಲಿ 57 ಜನರ ಶಿಕ್ಷಾ ಅವಧಿ ಮುಕ್ತಾಯಗೊಂಡಿದೆ. ಆದರೆ ಆ ಎಲ್ಲ ಖೈದಿಗಳ ರಾಷ್ಟ್ರೀಯತೆಯನ್ನು ಸಾಬೀತುಪಡಿಸದೆ, ಅವರನ್ನು ಬಿಡುವುದಿಲ್ಲ ಎಂದು ಪಾಕಿಸ್ತಾನ ಹೇಳಿದೆ. ಜೊತೆಗೆ ಕುಲಭೂಷಣ್ ಜಾಧವ್ ಪ್ರಕರಣ ಸಹ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಿಚಾರಣೆಗೊಳಪಡುತ್ತಿರುವಾಗ ಭಾರತದ ಈ ನಡೆ ಹಲವರಲ್ಲಿ ಬೇಸರ ಮೂಡಿಸಿದೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications