ಅರುಣಾಚಲ ಪ್ರದೇಶದಲ್ಲಿ ವಾಯುಸೇನೆ ಹೆಲಿಕಾಪ್ಟರ್ ನಾಪತ್ತೆ
ಅರುಣಾಚಲ ಪ್ರದೇಶ, ಜುಲೈ 4: ಭಾರತೀಯ ವಾಯುಸೇನೆಗೆ ಸೇರಿದ ಹೆಲಿಕಾಪ್ಟರೊಂದು ಅರುಣಾಚಲ ಪ್ರದೇಶದಲ್ಲಿ ನಾಪತ್ತೆಯಾಗಿದೆ.
ಅರುಣಾಚಲ ಪ್ರದೇಶದ ಪಪುಂಪಾರೆ ಜಿಲ್ಲೆಯ ಸಗಾಲಿಯಲ್ಲಿ ವಾಯು ಸೇನೆಯ ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ ನಾಪತ್ತೆಯಾಗಿದೆ.
ಈಶಾನ್ಯ ಭಾರತದಲ್ಲಿ ಹವಮಾನ ವೈಪರೀತ್ಯ ಸಂಭವಿಸಿದ್ದು ಬೆಳಿಗ್ಗೆಯಷ್ಟೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿತ್ತು. ಕಿರಣ್ ರಿಜಿಜು ಅಪಾಯದಿಂದ ಪಾರಾಗಿದ್ದರು.
ಹೆಲಿಕಾಪ್ಟರ್ ನಾಪತ್ತೆಯಾದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, "ನಾನು ಸೇಫ್ ಆಗಿದ್ದೇನೆ. ಆದರೆ ಇಡೀ ರಾಜ್ಯವೇ ನಾಪತ್ತೆಯಾದ ಹೆಲಿಕಾಪ್ಟರ್ ಗಾಗಿ ಹುಡುಕಾಟ ನಡೆಸುತ್ತಿದೆ," ಎಂದು ಕಿರಣ್ ರಿಜಿಜು ಹೇಳಿದ್ದಾರೆ.
ನಾಪತ್ತೆಯಾಗಿರುವ ಹೆಲಿಕಾಪ್ಟರ್ ಪತ್ತೆಗೆ ನೆರವಾಗುವಂತೆ ರಾಜ್ಯ ಸರಕಾರ ಮತ್ತು ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪ್ರೇಮ ಖಂಡು ಸ್ಥಳೀಯ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆಗೆ ನಿಯೋಜನೆಯಾಗಿತ್ತು.