Breaking: ಮಧ್ಯಪ್ರದೇಶದಲ್ಲಿ ಭಾರತೀಯ ವಾಯಪಡೆ ಯುದ್ಧ ವಿಮಾನಗಳ ಡಿಕ್ಕಿ, ಪತನ
ಗ್ವಾಲಿಯರ್ ಏರ್ ಫೋರ್ಸ್ ಬೇಸ್ನಿಂದ ಟೇಕಾಫ್ ಆಗಿದ್ದ ಯುದ್ಧ ವಿಮಾನಗಳಾದ ಸುಖೋಯ್ ಸು -30 ಮತ್ತು ಮಿರಾಜ್ 2000 ತರಬೇತಿ ಅಭ್ಯಾಸದ ವೇಳೆ ಮಧ್ಯಪ್ರದೇಶದಲ್ಲಿ ಪತನಗೊಂಡಿವೆ.
ಇಂಧೋರ್, ಜನವರಿ 28: ಭಾರತೀಯ ವಾಯುಪಡೆಯ ಎರಡು ಯುದ್ಧ ವಿಮಾನಗಳಾದ ಸುಖೋಯ್ ಸು -30 ಮತ್ತು ಮಿರಾಜ್ 2000 ತರಬೇತಿ ಅಭ್ಯಾಸದ ವೇಳೆ ಮಧ್ಯಪ್ರದೇಶದಲ್ಲಿ ಪತನಗೊಂಡಿವೆ ಎಂದು ಶನಿವಾರ ವರದಿಗಳು ತಿಳಿಸಿವೆ.
ಈ ಎರಡೂ ಯುದ್ಧವಿಮಾನಗಳು ಗ್ವಾಲಿಯರ್ ಏರ್ ಫೋರ್ಸ್ ಬೇಸ್ನಿಂದ ಟೇಕಾಫ್ ಆಗಿದ್ದವು. ಈ ಹಿನ್ನೆಲೆಯಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಸಾವು ನೋವುಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.

ಮಧ್ಯಪ್ರದೇಶದ ಮೊರೆನಾದಲ್ಲಿ ನಡೆದ ಈ ದುರ್ಘಟನೆಯನ್ನು ಸ್ಥಳೀಯರು ಚಿತ್ರೀಕರಿಸಿದ ದೃಶ್ಯದ ವೀಡಿಯೊಗಳು ನೆಲದ ಮೇಲೆ ವಿಮಾನದ ಅವಶೇಷಗಳನ್ನು ತೋರಿಸಿದೆ. ಈ ಮಧ್ಯೆ ರಾಜಸ್ಥಾನದ ಭರತ್ಪುರದಲ್ಲಿ ಚಾರ್ಟರ್ಡ್ ವಿಮಾನವೊಂದು ಪತನಗೊಂಡಿದೆ. ಪೊಲೀಸರು ಮತ್ತು ಆಡಳಿತ ಮಂಡಳಿ ಸ್ಥಳಕ್ಕೆ ದೌಡಾಯಿಸಿದೆ.ಅಪಘಾತದ ಸಮಯದಲ್ಲಿ ಸುಖೋಯ್-30 ಯುದ್ಧ ವಿಮಾನ ಇಬ್ಬರು ಪೈಲಟ್ಗಳನ್ನು ಮತ್ತು ಮಿರಾಜ್ 2000 ಒಬ್ಬ ಪೈಲಟ್ ಅನ್ನು ಹೊತ್ತೊಯ್ಯುತ್ತಿತ್ತು. ರಕ್ಷಣಾ ಮೂಲಗಳ ಪ್ರಕಾರ, ಇಬ್ಬರು ಪೈಲಟ್ಗಳು ಸುರಕ್ಷಿತವಾಗಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಆದರೆ ಮೂರನೇ ಪೈಲಟ್ನ ಸ್ಥಿತಿಯನ್ನು ಕಂಡುಹಿಡಿಯಲು ಐಎಎಫ್ ತಂಡವು ಚಾಪರ್ನಲ್ಲಿ ಶೀಘ್ರದಲ್ಲೇ ಸ್ಥಳಕ್ಕೆ ಕಳುಹಿಸಲಾಗಿದೆ.
ಐಎಎಫ್ ವಿಚಾರಣೆಯ ನ್ಯಾಯಾಲಯವು ಮಧ್ಯ ಗಾಳಿ ಡಿಕ್ಕಿಯಿಂದ ಅಪಘಾತ ಸಂಭವಿಸಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲಿದೆ. "ಎರಡು ವಿಮಾನಗಳು ಗ್ವಾಲಿಯರ್ ವಾಯುನೆಲೆಯಿಂದ ಟೇಕ್ ಆಫ್ ಆಗಿದ್ದು, ಅಲ್ಲಿ ತರಬೇತಿ ವ್ಯಾಯಮ ನಡೆಸುತ್ತಿದ್ದವು ಎಂದು ರಕ್ಷಣಾ ಮೂಲಗಳು ತಿಳಿಸಿವೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಜನರಲ್ ಅನಿಲ್ ಚೌಹಾಣ್ ಮತ್ತು ಐಎಎಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಅವರೊಂದಿಗೆ ಅಪಘಾತದ ವಿವರಗಳನ್ನು ಸಂಗ್ರಹಿಸಲು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications