ಪೂರ್ವ ಲಡಾಖ್: ಹಿಮಪಾತದ ನಡುವೆಯೂ ರೊಟೇಷನ್ ಪದ್ಧತಿಯಲ್ಲಿ ಸೈನಿಕರ ಪಹರೆ
ನವದೆಹಲಿ, ನವೆಂಬರ್ 03: ಇದೀಗ ಚಳಿಗಾಲ ಆರಂಭವಾಗಿದೆ. ಪೂರ್ವ ಲಡಾಖ್ನಲ್ಲಿ ರಕ್ತಹೆಪ್ಪುಗಟ್ಟುವ ಸ್ಥಿತಿಯಲ್ಲಿದ್ದರೂ ಭಾರತೀಯ ಸೈನಿಕರು ಎದೆಗುಂದದೆ ರೊಟೇಷನ್ ಪದ್ಧತಿಯಲ್ಲಿ ಪಹರೆ ತಿರುಗುತ್ತಿದ್ದಾರೆ.
ಇದರ ಜೊತೆಗೆ ಅತಿ ಜೋರಾಗಿ ಬೀಸುವ ಶೀತಗಾಳಿ ಸೈನಿಕರನ್ನು ಹಿಂಡಿ ಹಿಪ್ಪೆ ಮಾಡುತ್ತದೆ. ಇದರ ಜೊತೆ ಹಿಮಪಾತದ ಭೀತಿ ಬೇರೆ. ಈಗಾಗಲೇ ಲಡಾಖ್ ನಲ್ಲಿ ಉಷ್ಣಾಂಶ ಮೈನಸ್ 20 ಡಿಗ್ರಿಗೆ ಕುಸಿದಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಕುಸಿಯಲಿದೆ.
ಹೀಗಾಗಿ ಸೈನಿಕರ ರಕ್ಷಣೆ ಮತ್ತು ಗಡಿ ನಿರ್ವಹಣೆ ಹಿನ್ನಲೆಯಲ್ಲಿ ಸೇನೆ ಈ ರೊಟೇಷನ್ ಪದ್ಧತಿಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ನಿರ್ಧರಿಸಿದೆ.
ಸೇನೆಯ ಒಂದು ಭಾಗ ಈಗಾಗಲೇ ಲಡಾಖ್ ಗಡಿಯಲ್ಲಿ ಸೇನೆಗೆ ನಿಯೋಜನೆಗೊಂಡಿದ್ದು, ರೊಟೇಷನ್ ಪದ್ಧತಿಯ ಆಧಾರದ ಮೇರೆಗೆ ಸೈನಿಕರು ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

ವೈದ್ಯರಿಂದ ಕಾರ್ಯ ನಿರ್ವಹಣೆ
ಇದರ ಜೊತೆಗೆ ಇಲ್ಲಿ ವೈದ್ಯರು ಕೂಡ ಕಾರ್ಯ ನಿರ್ವಹಿಸಲಿದ್ದು, ಗಡಿಯಲ್ಲಿ ಕೊರೆಯುವ ಚಳಿಯಲ್ಲಿ ಕರ್ತವ್ಯ ನಿರ್ವಹಿಸುವ ಸೈನಿಕರ ಆರೋಗ್ಯ ರಕ್ಷಣೆಗಾಗಿ ಇಲ್ಲಿ ವೈದ್ಯರ ತಂಡವೊಂದು ಸದಾ ಸರ್ವ ಸನ್ನದ್ಧ ಸ್ಥಿತಿಯಲ್ಲಿರುತ್ತದೆ. ಸಿಯಾಚಿನ್ ಲಾಜಿಸ್ಟಿಕ್ಸ್ ಯಂತ್ರೋಪಕರಣಗಳು 1984 ರಿಂದ ಅಸ್ತಿತ್ವದಲ್ಲಿವೆ ಮತ್ತು ಪಡಿತರ ಪೂರೈಕೆ, ಮದ್ದುಗುಂಡು ಮತ್ತು ವಿಶೇಷವಾಗಿ ಅತೀ ಎತ್ತರದ ಕಣಿವೆಗಳಲ್ಲಿ ಧರಿಸುವ ಬಟ್ಟೆಗಳನ್ನು ಖರೀದಿಸುವ ಬಗ್ಗೆ ನಾವು ಸಾಕಷ್ಟು ಮಾಹಿತಿ ಹೊಂದಿದ್ದೇವೆ.

90 ದಿನಗಳ ಕಾಲ ಪಾಳಿಯಲ್ಲಿ ಕೆಲಸ
ಲಢಾಖ್ ನಲ್ಲಿ ಓರ್ವ ಸೈನಿಕ 90 ದಿನಗಳ ಕಾಲ ಪಾಳಿಯಲ್ಲಿ ಕೆಲಸ ಮಾಡಲಿದ್ದು, 90 ದಿನಗಳ ಬಳಿಕ ಬೇರೆ ಪ್ರದೇಶಕ್ಕೆ ನಿಯೊಜನೆಗೊಳ್ಳುತ್ತಾರೆ. ಈ 90 ದಿನಗಳ ಅವಧಿಯಲ್ಲಿ ಸೈನಿಕರ ಪ್ರಯಾಣದ ಅವಧಿ ಕೂಡ ಸೇರಿರುತ್ತದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಹೆಚ್ಚುವರಿ ವಸ್ತುಗಳ ಸಂಗ್ರಹಣೆ
ಇದಲ್ಲದೆ, ಪ್ರತಿ ಕಾರ್ಯಾಚರಣಾ ಸ್ಥಳದಲ್ಲಿ ಕನಿಷ್ಠ ಒಂದು ವಾರದ ಅವಶ್ಯಕತೆಗಾಗಿ ಹೆಚ್ಚುವರಿ ಅಗತ್ಯ ವಸ್ತುಗಳನ್ನು ಸಂಗ್ರಹಿಸಲಾಗಿದೆ. ಪ್ರತಿ ಅವಶ್ಯಕತೆಯ ವಸ್ತುಗಳನ್ನು ಗರಿಷ್ಠ ಬಳಕೆ ಮಾಡಲಾಗುತ್ತಿದೆ ಎಂದು ಸೇನಾಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಅಗತ್ಯ ವಸ್ತುಗಳ ಸರಬರಾಜು ಕಷ್ಟ
ಆದರೆ ಲಡಾಖ್ ನಂತಹ ಕಠಿಣ ಕಣಿವೆ ಪ್ರದೇಶದಲ್ಲಿ ಅಗತ್ಯ ವಸ್ತುಗಳ ಸರಬರಾಜು ಕೂಡ ಸವಾಲಿನ ಕೆಲಸವಾಗಿದ್ದು, ಮಂಜಿನಿಂದ ಮುಚ್ಚಿಹೋಗಿರುವ ಮಾರ್ಗಗಳ ನಡುವೆಯೇ ಪ್ರಾಣವನ್ನು ಅಂಗೈಯಲ್ಲಿ ಹಿಡಿದು ಕೆಲಸ ನಿರ್ವಹಿಸಬೇಕಾಗುತ್ತದೆ. ಈಗಾಗಲೇ ಅಮೆರಿಕದಿಂದ 15000 ವಿಶೇಷ ಬಟ್ಟೆಗಳನ್ನು ಮತ್ತು ಪರ್ವತಾರೋಹಣ ಸಾಧನಗಳನ್ನು ತರಿಸಿಕೊಳ್ಳಲಾಗಿದೆ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications