ಅಗತ್ಯಬಿದ್ದರೆ ಮತ್ತೆ ಸರ್ಜಿಕಲ್ ದಾಳಿ: ಸೇನೆ ಸ್ಪಷ್ಟನೆ
ನವದೆಹಲಿ, ಅಕ್ಟೋಬರ್, 15: ಉಗ್ರರ ಉಪಟಳ ಹೆಚ್ಚಾದಲ್ಲಿ ಮತ್ತೊಮ್ಮೆ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಸರ್ಜಿಕಲ್ ದಾಳಿ ನಡೆಸಲಾಗುವುದು ಎಂದು ಭಾರತೀಯ ಸೇನೆ ಉನ್ನತಾಧಿಕಾರಿಗಳು ಸಂಸದೀಯ ಸ್ಥಾಯಿ ಸಮಿತಿಗೆ ಶುಕ್ರವಾರ (ಅ.14) ತಿಳಿಸಿದ್ದಾರೆ.
ಸೆ.29ರಂದು ಸರ್ಜಿಕಲ್ ದಾಳಿ ನಡೆಸಿರುವ ಬಗ್ಗೆ ಪುರಾವೆಗನ್ನು ಒದಗಿಸಬೇಕೆಂದು ವಿಪಕ್ಷಗಳು ಒತ್ತಾಯಿಸಿದ ಹಿನ್ನೆಲೆಯಲ್ಲಿ ಭಾರತ ಸೇನೆ ಪ್ರಥಮ ಬಾರಿಗೆ ದಾಳಿ ಕುರಿತ ಮಾಹಿತಿಯನ್ನು ಸಂಸದೀಯ ಸ್ಥಾಯಿ ಸಮಿತಿಗೆ ತಿಳಿಸಿದೆ. ['ಸರ್ಜಿಕಲ್ ಆಪರೇಷನ್' ಅಂದರೆ ಏನು ಗೊತ್ತಾ?]

ಸರ್ಜಿಕಲ್ ದಾಳಿ ನಡೆದ ನಂತರ ಇದೇ ಮೊದಲ ಬಾರಿಗೆ ಭಾರತ ಸೇನೆ ಡಿಜಿಎಂಒ ರಣಬೀರ್ ಸಿಂಗ್ ಅವರು ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.
"ಭಾರತೀಯ ಸೇನೆ ವೈಸ್ ಚೀಫ್ ಲೆಫ್ಟಿನೆಂಟ್ ಜನರಲ್ ಬಿಪಿನ್ ರಾವತ್ ಅವರೇ ಸ್ವಯಂ ಆಗಿ ಸಂಸದೀಯ ಸ್ಥಾಯಿ ಸಮಿತಿಗೆ ಸರ್ಜಿಕಲ್ ದಾಳಿ ಕುರಿತು ಮಾಹಿತಿ ನೀಡಿದ್ದಾರೆ" ಎಂದು ಅವರು ಮಾಧ್ಯಮಗಳಿಗೆ ಮಾಹಿತಿ ತಿಳಿಸಿದರು.[ಉಗ್ರರ ದಾಳಿಯಲ್ಲಿ ಯೋಧ ಸಾವು, ಎಂಟು ಮಂದಿಗೆ ಗಾಯ]
"ಗಡಿರೇಖೆಯ ಕೆಲವು ಪ್ರದೇಶಗಳಲ್ಲಿ ಪಾಕಿಸ್ತಾನದ ಕೆಲವು ಉಗ್ರರು ಬೀಡುಬಿಟ್ಟಿದ್ದು, ಭಾರತದೊಳಗೆ ನುಸುಳಲು ಯತ್ನಿಸಿದ್ದರಿಂದ ದಾಳಿ ಮಾಡಬೇಕಾದ ಅನಿವಾರ್ಯತೆ ಎದುರಾಯಿತು" ಎಂದು ಅವರು ತಿಳಿಸಿದ್ದಾರೆ.
"ಉಗ್ರರ ಉಪಟಳ ಹೆಚ್ಚಾದರೆ ಅಗತ್ಯ ಬಿದ್ದಲ್ಲಿ ಮತ್ತೊಮ್ಮೆ ದಾಳಿ ಮಾಡಲು ಸಿದ್ದರಾಗಿದ್ದೇವೆ" ಎಂದು ಭಾರತದ ಡಿಜಿಎಂಒ ರಣಬೀರ್ ಸಿಂಗ್ ಪಾಕಿಸ್ತಾನದ ಡಿಜಿಎಂಒಗೆ ಎಚ್ಚರಿಕೆ ನೀಡಿದ್ದಾರೆ ಎಂದು ಲೆಫ್ಟಿನೆಂಟ್ ಜನರಲ್ ರಾವತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ದಾಳಿ ಕುರಿತು ಮಾಹಿತಿ ನೀಡುವಂತೆ ಕಾಂಗ್ರೆಸ್ ಸಂಸದರು ಒತ್ತಾಯಿಸಿದ್ದರಿಂದ ರಾವತ್ ಅವರೇ ಸ್ವತಃ ದಾಳಿಯ ಸಂಪೂರ್ಣ ಮಾಹಿತಿ ನೀಡಿದ್ದಾರೆ.
ಸರ್ಜಿಕಲ್ ಆಪರೇಷನ್ ಹೇಗೆ ನಡೆಯಿತು. ದಾಳಿಯಿಂದ ಉಗ್ರರ ಶಿಬಿರಗಳಿಗೆ ಎಷ್ಟು ನಷ್ಟ ಸಂಭವಿಸಿದೆ ಎಂಬ ಮಾಹಿತಿಯನ್ನೂ ಸಹ ತಿಳಿಸಲಾಗಿದ್ದು, ದಾಳಿ ನಂತರ ಭಾರತ ಸೇನೆಯ ಎಲ್ಲ ಸೈನಿಕರು ಕ್ಷೇಮವಾಗಿ ಹಿಂತುರಿಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಪಠಾಣ್ ಕೋಟ್ ವಾಯು ನೆಲೆ ಮೇಲಿನ ದಾಳಿ, ಉರಿ ಸೇನಾ ಶಿಬಿರದ ಮೇಲೆ ಉಗ್ರರು ದಾಳಿ ನಡೆಸಿದ ನಂತರ ಹೆಚ್ಚು ಸಶಕ್ತರಾಗಿದ್ದರು, ಇದು ದೇಶಕ್ಕೆ ಹೆಚ್ಚು ಮಾರಕ ಎಂದು ಪರಿಗಣಿಸಿ ಸರ್ಜಿಕಲ್ ದಾಳಿಗೆ ಸಿದ್ಧತೆ ನಡೆಸಲಾಗಿತ್ತು ಎಂದು ರಾವತ್ ತಿಳಿಸಿದರು.
-
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Viral Video: 'ಓಂಕಾರ' ಚಿತ್ರದ ಬೀಡಿ ಜಲೈಲೆ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಬ್ರೆಜಿಲ್ ಬೆಡಗಿಯರು -
400 ಜನರ ಜೀವ ತೆಗೆದ ಪಾಪಿ ಪಾಕಿಸ್ತಾನ, ಅಫ್ಘಾನಿಸ್ತಾನ ವಿರುದ್ಧ ದಾಳಿ | Pakistan And Afghanistan -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್












Click it and Unblock the Notifications