ನೇಪಾಳ ಸೇನೆಗೆ 1 ಲಕ್ಷ ಡೋಸ್ ಕೊರೊನಾ ಲಸಿಕೆ ಉಡುಗೊರೆ ಕೊಟ್ಟ ಭಾರತ
ನವದೆಹಲಿ, ಮಾರ್ಚ್ 29: ನೆರೆರಾಷ್ಟ್ರಗಳೊಂದಿಗೆ ಸಹಭಾಗಿತ್ವದ ಭಾಗವಾಗಿ ಭಾರತೀಯ ಸೇನೆಯು ಭಾರತ ಅಭಿವೃದ್ಧಿಪಡಿಸಿದ ಒಂದು ಲಕ್ಷ ಡೋಸ್ ಕೊರೊನಾ ಲಸಿಕೆಗಳನ್ನು ನೇಪಾಳ ಸೈನ್ಯಕ್ಕೆ ಸೋಮವಾರ ಉಡುಗೊರೆಯಾಗಿ ನೀಡಿದೆ.
ತ್ರಿಭುವನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರತೀಯ ಸೇನಾಧಿಕಾರಿಗಳು ನೇಪಾಳ ಸೇನೆಗೆ ಲಸಿಕೆಗಳನ್ನು ಹಸ್ತಾಂತರಿಸಿದ್ದಾಗಿ ಕಠ್ಮಂಡುವಿನ ಭಾರತೀಯ ರಾಯಭಾರಿ ಟ್ವೀಟ್ ಮಾಡಿದ್ದಾರೆ.

ಈ ಮುನ್ನವೂ ಭಾರತ ಒಂದು ಮಿಲಿಯನ್ ಮೇಡ್ ಇನ್ ಇಂಡಿಯಾ ಡೋಸ್ ಕೊರೊನಾ ಲಸಿಕೆಗಳನ್ನು ತುರ್ತು ಬಳಕೆಗೆಂದು ನೇಪಾಳಕ್ಕೆ ನೀಡಿತ್ತು. ಇದೀಗ ಸೇನೆಗೆ ಮತ್ತೆ ಒಂದು ಲಕ್ಷ ಡೋಸ್ ಲಸಿಕೆ ನೀಡಿದ್ದು, ಇದರಿಂದ ಭಾರತ- ನೇಪಾಳ ದ್ವಿಪಕ್ಷೀಯ ಸಂಬಂಧ ಗಟ್ಟಿಗೊಳ್ಳುವ ನಿರೀಕ್ಷೆ ವ್ಯಕ್ತಗೊಂಡಿದೆ. ಭಾರತದ ಸೇನೆ ನೇಪಾಳದ ಸೇನೆಗೆ ಉಡುಗೊರೆಯಾಗಿ ಲಸಿಕೆ ನೀಡಿರುವ ಕುರಿತು ಭಾರತೀಯ ರಾಯಭಾರ ಕಚೇರಿ ಟ್ವಿಟ್ಟರ್ನಲ್ಲಿ ಫೋಟೊ ಹಂಚಿಕೊಳ್ಳುವ ಮೂಲಕ ಧನ್ಯವಾದ ತಿಳಿಸಿದೆ.
100,000 doses of #MadeInIndia Covid-19 vaccine gifted by Indian Army to the Nepali Army were received at Tribhuwan Airport today.
— IndiaInNepal (@IndiaInNepal) March 28, 2021
#VaccineMaitri #IndiaNepalFriendship #NeighbourhoodFirst #COAS
@adgpi @pmoindia @meaindia @thenepalesearmy pic.twitter.com/TtlWWvV4UH
ನೇಪಾಳದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಏರಿಕೆಯಾಗಿದೆ. ಚೀನಾ ಕೂಡ ನೇಪಾಳಕ್ಕೆ ಎಂಟು ಲಕ್ಷ ಡೋಸ್ ಲಸಿಕೆಗಳನ್ನು ನೀಡಿದೆ. ಪ್ರಸ್ತುತ ನೇಪಾಳದಲ್ಲಿ 276,839 ಕೊರೊನಾ ಪ್ರಕರಣಗಳಿದ್ದು, ಇದುವರೆಗೂ ಸೋಂಕಿನಿಂದ 3,027 ಮಂದಿ ಸಾವನ್ನಪ್ಪಿದ್ದಾರೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications