ಮಹಿಳಾ ಅಧಿಕಾರಿಗಳಿಗೆ ಕರ್ನಲ್ ಶ್ರೇಣಿಯನ್ನು ನೀಡಿದ ಭಾರತೀಯ ಸೇನೆ
ನವದೆಹಲಿ, ಆಗಸ್ಟ್ 23: ಭಾರತೀಯ ಸೇನೆಯ ಆಯ್ಕೆ ಮಂಡಳಿಯು 26 ವರ್ಷ ಸೇವೆ ಪೂರೈಸಿದ ಐವರು ಮಹಿಳಾ ಅಧಿಕಾರಿಗಳಿಗೆ ಕರ್ನಲ್ (ಸೇವಾವಧಿ ಆಧರಿತ - ಟೈಮ್ ಸ್ಕೇಲ್) ಶ್ರೇಣಿಗೆ ಬಡ್ತಿ ನೀಡಲು ಹಾದಿಯನ್ನು ಮುಕ್ತಗೊಳಿಸಿದೆ. ʻಕಾರ್ಪ್ಸ್ ಆಫ್ ಸಿಗ್ನಲ್ಸ್ʼ, ʻಕಾರ್ಪ್ಸ್ ಆಫ್ ಎಲೆಕ್ಟ್ರಾನಿಕ್ʼ ಮತ್ತು ʻಮೆಕ್ಯಾನಿಕಲ್ ಎಂಜಿನಿಯರ್ಸ್ʼ (ಇಎಂಇ) ಹಾಗೂ ʻಕಾರ್ಪ್ಸ್ ಆಫ್ ಎಂಜಿನಿಯರ್ಸ್ʼನೊಂದಿಗೆ ಸೇವೆ ಸಲ್ಲಿಸುತ್ತಿರುವ ಮಹಿಳಾ ಅಧಿಕಾರಿಗಳಗೆ ಕರ್ನಲ್ ಶ್ರೇಣಿಗೆ ಬಡ್ತಿ ಪಡೆಯಲು ಅನುಮೋದಿಸಿರುವುದು ಇದೇ ಮೊದಲು. ಈ ಹಿಂದೆ, ʻಸೇನಾ ವೈದ್ಯಕೀಯ ಪಡೆʼ (ಎಎಂಸಿ), ʻನ್ಯಾಯಾಧೀಶ ಅಡ್ವೊಕೇಟ್ ಜನರಲ್ʼ (ಜೆಎಜಿ) ಮತ್ತು ʻಸೇನಾ ಶಿಕ್ಷಣ ಪಡೆʼ (ಎಇಸಿ) ಮಹಿಳಾ ಅಧಿಕಾರಿಗಳಿಗೆ ಮಾತ್ರ ಕರ್ನಲ್ ಹುದ್ದೆಗೆ ಬಡ್ತಿ ಅನ್ವಯವಾಗಿಗುತ್ತಿತ್ತು.
ಭಾರತೀಯ ಸೇನೆಯ ಹೆಚ್ಚಿನ ಶಾಖೆಗಳಿಗೆ ಬಡ್ತಿ ಮಾರ್ಗಗಳ ವಿಸ್ತರಣೆಯು ಮಹಿಳಾ ಅಧಿಕಾರಿಗಳಿಗೆ ವೃತ್ತಿ ಅವಕಾಶಗಳು ಹೆಚ್ಚಾಗಿರುವುದನ್ನು ಸೂಚಿಸುತ್ತದೆ. ಈಗಾಗಲೇ ಭಾರತೀಯ ಸೇನೆಯ ಬಹುಪಾಲು ಶಾಖೆಗಳ ಮಹಿಳಾ ಅಧಿಕಾರಿಗಳಿಗೆ ಕಾಯಂ ಸೇವಾವಧಿ ನೀಡುವ ನಿರ್ಧಾರ ಕೈಗೊಳ್ಳಲಾಗಿತ್ತು. ಇದರೊಂದಿಗೆ, ಈಗಿನ ಕ್ರಮವು ಭಾರತೀಯ ಸೇನೆಯ ಲಿಂಗ-ತಟಸ್ಥ ನಿಲುವನ್ನು ವ್ಯಾಖ್ಯಾನಿಸುತ್ತದೆ.
ಸೇವಾವಧಿ ಆಧರಿತವಾಗಿ ಕರ್ನಲ್ ಶ್ರೇಣಿಗೆ ಆಯ್ಕೆಯಾದ ಐದು ಮಹಿಳಾ ಅಧಿಕಾರಿಗಳಗಳೆಂದರೆ ʻಕಾರ್ಪ್ಸ್ ಆಫ್ ಸಿಗ್ನಲ್ಸ್ʼನ ಲೆಫ್ಟಿನೆಂಟ್ ಕರ್ನಲ್ ಸಂಗೀತಾ ಸರ್ದಾನ, ʻಇಎಂಇ ಕಾರ್ಪ್ಸ್ʼನ ಲೆಫ್ಟಿನೆಂಟ್ ಕರ್ನಲ್ ಸೋನಿಯಾ ಆನಂದ್ ಮತ್ತು ಲೆಫ್ಟಿನೆಂಟ್ ಕರ್ನಲ್ ನವನೀತ್ ದುಗ್ಗಲ್ ಮತ್ತು ʻಕಾರ್ಪ್ಸ್ ಆಫ್ ಎಂಜಿನಿಯರ್ಸ್ʼನ ಲೆಫ್ಟಿನೆಂಟ್ ಕರ್ನಲ್ ರೀನು ಖನ್ನಾ ಹಾಗೂ ಲೆಫ್ಟಿನೆಂಟ್ ಕರ್ನಲ್ ರಿಚಾ ಸಾಗರ್.

ಎನ್ಡಿಎ ಪರೀಕ್ಷೆಗೆ ಅನುಮತಿ: ರಾಷ್ಟ್ರೀಯ ರಕ್ಷಣಾ ಅಕಾಡೆಮಿ (NDA) ಸೆಪ್ಟೆಂಬರ್ 5ರಂದು ನಡೆಸುತ್ತಿರುವ ಪ್ರವೇಶ ಪರೀಕ್ಷೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲು ಸುಪ್ರೀಂ ಕೋರ್ಟ್ ಇತ್ತೀಚೆಗೆ ಅನುಮತಿ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹಾಗೂ ನೌಕಾಪಡೆ ಅಕಾಡೆಮಿ ಪರೀಕ್ಷೆ, ಎನ್ಡಿಎಯಲ್ಲಿ ತರಬೇತಿಗಾಗಿ ಅರ್ಹ ಮಹಿಳೆಯರಿಗೆ ಅವಕಾಶ ಕಲ್ಪಿಸಿದೆ.
ರಾಷ್ಟ್ರೀಯ ಭದ್ರತಾ ಪಡೆಯಲ್ಲಿ ಲಿಂಗಸಮಾನತೆ ಸಾಧಿಸಲು ಇದು ಮಹತ್ವದ ಹೆಜ್ಜೆ ಎನ್ನಲಾಗಿದೆ. ಈ ಪರೀಕ್ಷೆಯ ಫಲಿತಾಂಶ ಅರ್ಜಿಯ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ. ಮಹಿಳಾ ಅಭ್ಯರ್ಥಿಗಳು ನ್ಯಾಯಾಲಯದ ಮುಂದಿನ ಆದೇಶಗಳಿಗೆ ಒಳಪಟ್ಟು ಪರೀಕ್ಷೆ ಬರೆಯಬಹುದು ಎಂದು ಸ್ಪಷ್ಟನೆ ನೀಡಿದೆ.
ಎನ್ಡಿಎ ಹಾಗೂ ನೌಕಾದಳ ಅಕಾಡೆಮಿ ಪರೀಕ್ಷೆಗಳಿಗೆ ಹಾಜರಾಗಲು ಮಹಿಳಾ ಅಭ್ಯರ್ಥಿಗಳಿಗೆ ಅನುಮತಿ ನೀಡದ ಕೇಂದ್ರದ ನೀತಿಯನ್ನು ಪ್ರಶ್ನಿಸಿ ಈ ಮುನ್ನ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿತ್ತು.
ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಹಾಗೂ ಹೃಷಿಕೇಶ್ ರಾಯ್ ಅವರನ್ನೊಳಗೊಂಡ ನ್ಯಾಯಪೀಠ, "ಭೂಸೇನೆ ಹಾಗೂ ನೌಕಾಪಡೆಯಲ್ಲ ಮಹಿಳೆಯರನ್ನು ಕಾಯಂ ಸೇವೆಗೆ ನಿಯೋಜಿಸಲು ಅವಕಾಶ ನೀಡಬೇಕು ಎಂದು ನ್ಯಾಯಾಲಯ ತೀರ್ಪು ನೀಡಿದೆ. ಹೀಗಿದ್ದರೂ ಸರ್ಕಾರ ಈ ನೀತಿ ಅನುಸರಿಸಲು ಕಾರಣವೇನು" ಎಂದು ಪ್ರಶ್ನಿಸಿದೆ.
-
ನಿಮ್ಮ ಸ್ಕಿನ್ ಟೋನ್ ಗೆ ಮ್ಯಾಚ್ ಆಗುವ ಲಿಪ್ಸ್ಟಿಕ್ ಶೇಡ್ ಕಂಡುಹಿಡಿಯಲು 7 ಟಿಪ್ಸ್ -
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
Gold Price Update: ಆಭರಣಪ್ರಿಯರೇ ಗಮನಿಸಿ, ಇಂದು ಚಿನ್ನದ ಬೆಲೆ ಏರಿಕೆ- ಬೆಳ್ಳಿ ಸ್ಥಿರ, ಮಾರುಕಟ್ಟೆ ದರ ವಿವರ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications