ಭಾರತೀಯ ಸೇನೆಗೆ ಬಲ ತಂದ ಸ್ವದೇಶಿ ಆಕಾಶ್ ಕ್ಷಿಪಣಿ
ನವದೆಹಲಿ, ಮೇ 5: ನೆಲದಿಂದ ಆಗಸದೆಡೆಗೆ ಚಿಮ್ಮುವ ಭಾರತದ ಮಹತ್ವಾಕಾಂಕ್ಷೆಯ ಆಕಾಶ್ ಕ್ಷಿಪಣಿ ಭಾರತೀಯ ಸೇನೆಗೆ ಮಂಗಳವಾರ ಸೇರ್ಪಡೆಗೊಂಡಿದೆ. ಸ್ವದೇಶಿ ನಿರ್ಮಿತ ಆಕಾಶ್ ಕ್ಷಿಪಣಿಗೆ ಅಗತ್ಯ ತಂತ್ರಜ್ಞಾನವನ್ನು ಡಿಆರ್ ಡಿಒ ಒದಗಿಸಿದೆ.
ಯುದ್ಧ ವಿಮಾನಗಳು, ಹೆಲಿಕಾಪ್ಟರ್ಗಳು, ಡ್ರೋಣ್ಗಳು ಮತ್ತು ಮಾನವ ರಹಿತ ವಾಯುದಾಳಿಗಳನ್ನು ಸಮರ್ಥವಾಗಿ ಎದುರಿಸಿ ಅವುಗಳನ್ನು ನಾಶ ಮಾಡಬಲ್ಲ ಸಾಮರ್ಥ್ಯ ಆಕಾಶ್ ಕ್ಷಿಪಣಿ ಹೊಂದಿದೆ.
ಇನ್ನೂ ಎರಡು ಕ್ಷಿಪಣಿಗಳನ್ನು ಬರುವ ಎರಡು ವರ್ಷಗಳಲ್ಲಿ ಸಿದ್ಧಪಡಿಸಿ ಸೇನೆಗೆ ಸೇರ್ಪಡೆ ಮಾಡಲಾಗುವುದು ಎಂದು ಡಿಆರ್ಡಿಒ ವಿಜ್ಞಾನಿಗಳು ತಿಳಿಸಿದ್ದಾರೆ. ಆಕಾಶ್ ಕ್ಷಿಪಣಿ ಸೇರ್ಪಡೆಯಿಂದ ಭಾರತೀಯ ಸೇನಾಪಡೆಯ ಶಕ್ತಿ ಗಣನೀಯವಾಗಿ ಹೆಚ್ಚಿದಂತಾಗಿದೆ ಎಂದು ಸೇನೆಯ ಡೈರೆಕ್ಟರ್ ಜನರಲ್ (ಆರ್ಮಿ ಏರ್ ಡಿಫೆನ್ಸ್) ಲೆ.ಜ.ವಿ.ಕೆ.ಸಕ್ಸೇನಾ ಹೇಳಿದ್ದಾರೆ

* 25ಕಿ.ಮೀ. ವ್ಯಾಪ್ತಿಯಲ್ಲಿ 20 ಕಿ.ಮೀ. ಎತ್ತರಕ್ಕೆ ಹಾರಿ ವೈರಿ ವಿಮಾನಗಳನ್ನು ನೆಲಕ್ಕುರುಳಿಸುವ ಸಾಮರ್ಥ್ಯ ಹೊಂದಿದೆ.
* ಸುಮಾರು 32 ವರ್ಷಗಳ ಸುದೀರ್ಘ ಅವಧಿಯ ಬಳಿಕ ಸೇನೆಗೆ ಸೇರ್ಪಡೆ ಮಾಡಲಾಗಿದೆ.
* ಎರಡು ಮೂರು ಟಾರ್ಗೆಟ್ ಗಳನ್ನು ಏಕ ಕಾಲಕ್ಕೆ ನಿಭಾಯಿಸಬಲ್ಲ ವ್ಯವಸ್ಥೆ ಹೊಂದಿದೆ.
* ಸುಸಜ್ಜಿತ ರೆಡಾರ್ ವ್ಯವಸ್ಥೆ ಜೊತೆಗೆ ಆಕಾಶ್ ಕ್ಷಿಪಣಿ ನಿರ್ವಹಿಸುವುದರಿಂದ ನಿಖರ ಗುರಿ ತಲುಪುತ್ತದೆ.
* ಡಿಆರ್ ಡಿಒ ನಿಂದ ವಿನ್ಯಾಸ ಹಾಗೂ ಅಭಿವೃದ್ಧಿ ಹೊಂದಿದ ವ್ಯವಸ್ಥೆ ಇದಾಗಿದೆ.
* ಭಾರತ್ ಡೈನಾಮಿಕ್ಸ್ ಲಿಮಿಟೆಡ್ ಸೇನೆಯ ಅಗತ್ಯಕ್ಕೆ ತಕ್ಕಂತೆ ಆಕಾಶ್ ಕ್ಷಿಪಣಿ ರೂಪಿಸಿದೆ.
* ಬಿಇಎಲ್, ಇಸಿಐಎಲ್, ಎಚ್ಎಎಲ್, ಟಾಟಾ ಪವರ್ ಎಸ್ ಇಡಿ ಹಾಗೂ ಎಲ್ ಅಂಡ್ ಟಿ ಕೂಡಾ ಕ್ಷಿಪಣಿ ನಿರ್ಮಾಣದಲ್ಲಿ ಕೈ ಜೋಡಿಸಿವೆ.
* ಒಟ್ಟಾರೆ ಭಾರತದ 61 ಪಬ್ಲಿಕ್ ಹಾಗೂ ಪ್ರೈವೇಟ್ ವಲಯದ ಸಂಸ್ಥೆಗಳು ಆಕಾಶ್ ಕ್ಷಿಪಣಿ ವ್ಯವಸ್ಥೆ ನಿರ್ಮಿಸುವಲ್ಲಿ ಯಶಸ್ವಿಯಾಗಿವೆ. (ಒನ್ ಇಂಡಿಯಾ ಸುದ್ದಿ)
More From
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications