Operation Sindoor: ಭಾರತದ ದಾಳಿಯ ಭಯಾನಕತೆ ಬಿಟ್ಟಿಟ್ಟ ಸೇನೆ- ಮಾಧ್ಯಮಗೋಷ್ಠಿಯ ಮುಖ್ಯಾಂಶಗಳು
Indian Army Operation Sindoor: ಭಾರತೀಯ ಸೇನೆಯು ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ವೈಮಾನಿಕ ದಾಳಿ ನಡೆಸಿದೆ. ಈ ಕಾರ್ಯಾಚರಣೆಗೆ 'ಆಪರೇಷನ್ ಸಿಂಧೂರ' ಎಂದು ಹೆಸರಿಡಲಾಗಿದೆ. ಜಮ್ಮು-ಕಾಶ್ಮೀರದ ಪೆಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆಯು ಈ ದಾಳಿಯನ್ನು ನಡೆಸಿದೆ. ಈ ಕುರಿತು ಪತ್ರಿಕಾಗೋಷ್ಠಿಯನ್ನು ನಡೆಸಿರುವ ಭಾರತೀಯ ಸೇನೆಯು ಪಾಕಿಸ್ತಾನವನ್ನು ಕಟುವಾಗಿ ಟೀಕಿಸಿದೆ. ಮಾದ್ಯಮಗೋಷ್ಠಿಯ ಮುಖ್ಯಾಂಶಗಳು ಇಲ್ಲಿವೆ.
1. ಕಾರ್ಯಾಚರಣೆಯ ಪ್ರಮುಖ ಅಂಶಗಳು
ಸಮಯ: ಮೇ 7ರಂದು ಬೆಳಗಿನ ಜಾವ 1:05 ರಿಂದ 1:30ರ ನಡುವೆ ದಾಳಿಗಳು ನಡೆದಿವೆ.
ನೆಲೆಗಳು: ಪಾಕಿಸ್ತಾನದ ಬಹಾವಲ್ಪುರ್ ಸೇರಿದಂತೆ ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿದೆ. ಜೈಷ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೊಯ್ಬಾ ಸಂಘಟನೆಗಳ ತರಬೇತಿ ಕೇಂದ್ರಗಳನ್ನು ನಾಶಪಡಿಸಲಾಗಿದೆ.
ಫಲಿತಾಂಶ: ಈ ಕಾರ್ಯಾಚರಣೆಯಲ್ಲಿ ಸುಮಾರು 70 ಭಯೋತ್ಪಾದಕರು ಹತ್ಯೆಯಾಗಿದ್ದಾರೆ.

2. ಕಾರ್ಯತಂತ್ರ
ನಿಖರ ದಾಳಿಗಳು: ಗುಪ್ತಚರ ಮಾಹಿತಿಯ ಆಧಾರದ ಮೇಲೆ ನೆಲೆಗಳನ್ನು ಆಯ್ಕೆ ಮಾಡಲಾಗಿದೆ. ನಾಗರಿಕ ಪ್ರಾಣಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಲಾಗಿದೆ.
ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ: ಪಾಕಿಸ್ತಾನದ ಸೇನಾ ನೆಲೆಗಳನ್ನು ಗುರಿಯಾಗಿಸದೆ, ಕೇವಲ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿಗಳು ನಡೆಸಲಾಗಿದೆ.
3. ಕಾರ್ಯಾಚರಣೆಯ ಹೆಸರು ಮತ್ತು ಸಂಕೇತ
ಆಪರೇಷನ್ ಸಿಂಧೂರ: ಸಿಂಧೂರ ಎಂಬ ಹೆಸರು ಹಿಂದೂ ವಿವಾಹಿತ ಮಹಿಳೆಯರು ಹಣೆಗೆ ಹಚ್ಚಿಕೊಳ್ಳುವ ಕೆಂಪು ಕುಂಕುಮವನ್ನು ಸೂಚಿಸುತ್ತದೆ. ಪಹಲ್ಗಾವ್ ದಾಳಿಯಲ್ಲಿ ಪತಿಯನ್ನು ಕಳೆದುಕೊಂಡ ಮಹಿಳೆಯರ ನೋವನ್ನು ಪ್ರತಿಬಿಂಬಿಸಲು ಈ ಹೆಸರನ್ನು ಆಯ್ಕೆ ಮಾಡಲಾಗಿದೆ.
4. ಗುಪ್ತಚರ ಮಾಹಿತಿ
ದಾಳಿಕೋರರು: ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಗೆ ಸಂಬಂಧಿಸಿದ 'ದಿ ರೆಸಿಸ್ಟೆನ್ಸ್ ಫ್ರಂಟ್' ಪಹಲ್ಗಾಮ್ ದಾಳಿಗೆ ಹೊಣೆ ಹೊತ್ತಿದೆ.
ಉದ್ದೇಶ: ಕಾಶ್ಮೀರದ ಪ್ರವಾಸೋದ್ಯಮವನ್ನು ಅಸ್ಥಿರಗೊಳಿಸುವುದು ಮತ್ತು ಎರಡು ಸಮುದಾಯಗಳ ನಡುವೆ ಅಶಾಂತಿ ಸೃಷ್ಟಿಸುವುದು ಈ ದಾಳಿಯ ಉದ್ದೇಶವಾಗಿತ್ತು.

5. ಸಂವಹನ
ಪತ್ರಿಕಾಗೋಷ್ಠಿ: ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ, ಕರ್ನಲ್ ಸೋಫಿಯಾ ಕುರೇಶಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮಾದ್ಯಮಗೋಷ್ಠಿಯನ್ನು ನಡೆಸಿದರು. ಮಹಿಳಾ ಅಧಿಕಾರಿಗಳು ಕಾರ್ಯಾಚರಣೆಯ ಕುರಿತು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಮಹತ್ವದ ಕ್ಷಣವಾಗಿದೆ.
ಸರ್ಕಾರದ ನಡೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಈ ಕಾರ್ಯಾಚರಣೆಯನ್ನು ಹತ್ತಿರದಿಂದ ಗಮನಿಸುತ್ತಿದ್ದಾರೆ. ಅಮೆರಿಕಾ, ಬ್ರಿಟನ್, ರಷ್ಯಾ ಮತ್ತು ಸೌದಿ ಅರೇಬಿಯಾ ಸೇರಿದಂತೆ ಪ್ರಮುಖ ರಾಷ್ಟ್ರಗಳಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ.
6. ಪಾಕಿಸ್ತಾನದ ಪ್ರತಿಕ್ರಿಯೆ
ಪಾಕ್ ಹೇಳಿಕೆ: ನಾಗರಿಕರ ಪ್ರಾಣಕ್ಕೆ ಹಾನಿಯುಂಟಾಗಿದೆ. ನಾವು ಭಾರತದ ವಿಮಾನಗಳನ್ನು ಹೊಡೆದು ಉರಿಳಿಸಿದ್ದೇವೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಆದರೆ, ಈ ಹೇಳಿಕೆ ಎಷ್ಟರ ಮಟ್ಟಿಗೆ ನಿಜವೆಂಬುದನ್ನು ಕಾದುನೋಡಬೇಕಿದೆ.
ಪಾಕ್ ನಿಲುವು: ಭಾರತದ ಸೇನೆಯು ಮಾಡಿರುವ ದಾಳಿಗಳನ್ನು 'ಯುದ್ಧ ರೀತಿಯ ಕಾರ್ಯಚರಣೆ' ಎಂದು ಪಾಕ್ ಹೇಳಿದೆ. ಪ್ರತಿದಾಳಿ ಮಾಡುವುದಾಗಿಯೂ ಎಚ್ಚರಿಸಿದೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ












Click it and Unblock the Notifications