ಪಿಒಕೆ ಮರಳಿ ಪಡೆಯಲು ಭಾರತೀಯ ಸೇನೆ ಸಿದ್ಧ: ಸೇನಾ ಕಮಾಂಡರ್
ಶ್ರೀನಗರ, ನವೆಂಬರ್ 22: ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಕುರಿತು ಉತ್ತರ ಕಮಾಂಡಿಂಗ್ ಇನ್-ಚೀಫ್, ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಮಹತ್ವದ ಹೇಳಿಕೆ ನೀಡಿದ್ದಾರೆ.
ಉಪೇಂದ್ರ ದ್ವಿವೇದಿ ಅವರು "ಭಾರತ ಸರ್ಕಾರವು ಆದೇಶಿಸಿದಾಗ ಪಿಒಕೆ ಮೇಲೆ ದಾಳಿ ಮಾಡಿ ಮರಳಿ ಭಾರತದ ವಶ ಮಾಡಿಕೊಳ್ಳಲು ಸೇನೆಯು ಸಿದ್ಧವಾಗಿದೆ. ಪಿಒಕೆ ವಿಷಯದ ಬಗ್ಗೆ ಸಂಸತ್ತಿನಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿದೆ'' ಎಂದು ಅವರು ಹೇಳಿದ್ದಾರೆ.
ಸರ್ಕಾರದ ಪ್ರತಿಯೊಂದು ಆದೇಶಕ್ಕೂ ಭಾರತೀಯ ಸೇನೆ ಸಂಪೂರ್ಣ ಸನ್ನದ್ಧವಾಗಿದೆ. ಸರ್ಕಾರ ಆದೇಶ ನೀಡಿದಾಗಲೆಲ್ಲ ಸೇನೆ ಸಂಪೂರ್ಣ ಸಿದ್ಧತೆಯೊಂದಿಗೆ ಮುನ್ನಡೆಯಲಿದೆ. ಭಾರತದೊಳಗೆ ನುಸುಳಲು ಪಾಕಿಸ್ತಾನದ ಲಾಂಚ್ಪ್ಯಾಡ್ಗಳಲ್ಲಿ ಸುಮಾರು 160 ಭಯೋತ್ಪಾದಕರು ಸಕ್ರಿಯರಾಗಿದ್ದಾರೆ. ಆದರೆ ನಾವು ಅವರ ಯೋಜನೆಗಳನ್ನು ಯಶಸ್ವಿಯಾಗಲು ಬಿಡುವುದಿಲ್ಲ ಎಂದು ಅವರು ಮಾಹಿತಿ ನೀಡಿದರು.

ಲಾಂಚ್ಪ್ಯಾಡ್ನಲ್ಲಿ ಸುಮಾರು 160 ಉಗ್ರರು ಅಡಗಿ ಕುಳಿತಿದ್ದಾರೆ. ಪಿರ್ ಪಂಜಾಲ್ನ ಉತ್ತರದಲ್ಲಿ 130 ಮತ್ತು ಪೀರ್ ಪಂಜಾಲ್ನ ದಕ್ಷಿಣದಲ್ಲಿ 30 ಭಯೋತ್ಪಾದಕರು ಇದ್ದಾರೆ. ಇಡೀ ಒಳನಾಡಿನಲ್ಲಿ ಒಟ್ಟು 82 ಪಾಕಿಸ್ತಾನಿ ಭಯೋತ್ಪಾದಕರು ಮತ್ತು 53 ಸ್ಥಳೀಯ ಭಯೋತ್ಪಾದಕರು ಅಡಗಿಕೊಂಡಿದ್ದಾರೆ. ಇದಲ್ಲದೇ ಪಾಕಿಸ್ತಾನ ನಿರಂತರವಾಗಿ ಡ್ರಗ್ಸ್ ಕಳುಹಿಸಲು ಯತ್ನಿಸುತ್ತಿದೆ. ಇತ್ತೀಚೆಗೆ ಕೋಟ್ಯಂತರ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದೇವೆ. ನಾವು ಗಡಿಯಲ್ಲಿ ಕೊಲ್ಲುತ್ತಿರುವ ಭಯೋತ್ಪಾದಕರನ್ನೂ, ನೀವು ಕಳ್ಳಸಾಗಾಣಿಕೆದಾರರನ್ನು ಕೊಲ್ಲುತ್ತಿದ್ದೀರಿ ಎಂದು ಈ ಜನರು ಹೇಳುತ್ತಾರೆ. ಪಾಕಿಸ್ತಾನ ಪ್ರತಿದಿನ ಡ್ರಗ್ಸ್ ಕಳುಹಿಸುವ ಪ್ರಯತ್ನ ಮಾಡುತ್ತಿರುವುದು ಸ್ಪಷ್ಟವಾಗಿದೆ ಎಂದು ಅವರು ಹೇಳಿದರು.

"ದೇಶವು 25 ವರ್ಷಕ್ಕಿಂತ ಕಡಿಮೆ ವಯಸ್ಸಿನ 50 ಪ್ರತಿಶತದಷ್ಟು ಜನರನ್ನು ಹೊಂದಿದೆ. ನಾವು ಅವರನ್ನು ಅಗ್ನಿವೀರ್ಗಳಾಗಿ ಸ್ವೀಕರಿಸಿದರೆ, ಅವರಿಗೆ ಯುದ್ಧ ಕೌಶಲ ಕಲಿಸಿ ಅವರನ್ನು ಮರಳಿ ಕಳುಹಿಸುತ್ತೇವೆ. ನಾವು ಕೆಲವರನ್ನು ಅರೆಸೈನಿಕ ಮತ್ತು ಪೊಲೀಸ್ ಪಡೆಗಳಾಗಿ ನೇಮಿಸಿಕೊಳ್ಳುತ್ತೇವೆ. ಇಲ್ಲಿ ಉಳಿದವರು ಸ್ವಯಂ ಉದ್ಯೋಗಿಗಳಾಗುತ್ತಾರೆ ಎಂದು ಅವರು ಹೇಳಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications