ಮಧ್ಯರಾತ್ರಿ ನಡೆದ ಪಾಕ್ನ ಡ್ರೋನ್ ದಾಳಿಗಳನ್ನು ಹಿಮ್ಮೆಟ್ಟಿಸಿದ ಭಾರತ: ಸೇನೆಯ ಅಧಿಕೃತ ಹೇಳಿಕೆ!
ಮೇ 8 ಹಾಗೂ 9 ರ ಮಧ್ಯರಾತ್ರಿ ಪಾಕಿಸ್ತಾನದ ಸೇನೆಯು ಭಾರತದ ಮೇಲೆ ಡ್ರೋನ್ ದಾಳಿ ನಡೆಸಿದೆ. ಜಮ್ಮು- ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಸೇರಿದಂತೆ ದೇಶದ ಪಶ್ಚಿಮ ಭಾಗಗಳಲ್ಲಿ ಪಾಕಿಸ್ತಾನ ಸಶಸ್ತ್ರ ಪಡೆಗಳು ಸಂಘಟಿತ ದಾಳಿ ನಡೆಸಿವೆ. ಪಾಕ್ನ ಈ ದಾಳಿಗೆ ಭಾರತ ಸೂಕ್ತ ಪ್ರತ್ಯುತ್ತರ ನೀಡಿದೆ ಎಂದು ಭಾರತೀಯ ಸೇನೆ ಶುಕ್ರವಾರ ಬೆಳಿಗ್ಗೆ ಹೇಳಿಕೆ ನೀಡಿದೆ. ಡ್ರೋನ್ ದಾಳಿಯನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಲಾಗಿದೆ ಎಂದು ಸೇನೆ ಎಕ್ಸ್-ಪೋಸ್ಟ್ನಲ್ಲಿ ಹಂಚಿಕೊಂಡಿದೆ.
ಭಾರತದ ಪಶ್ಚಿಮ ಗಡಿಯಲ್ಲಿ ಪಾಕಿಸ್ತಾನವು ಅನೇಕ ಡ್ರೋನ್ ದಾಳಿಗಳನ್ನು ನಡೆಸಿತು. ಡ್ರೋನ್ಗಳಲ್ಲದೇ ಇತರ ಯುದ್ಧಸಾಮಗ್ರಿಗಳನ್ನು ಬಳಸಿತು ಎಂದು ಭಾರತೀಯ ಸೇನೆಯು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ವೈಮಾನಿಕ ಆಕ್ರಮಣದ ಜೊತೆಗೆ ಹಲವಾರು ಕದನ ವಿರಾಮ ಉಲ್ಲಂಘನೆಗಳನ್ನು ಪಾಕಿಸ್ತಾನ ಮಾಡಿದೆ ಎಂದು ಸೇನೆ ಹೇಳಿದೆ.

'ಪಾಕಿಸ್ತಾನ ಸಶಸ್ತ್ರ ಪಡೆಗಳು ಮೇ 08 ಮತ್ತು 09 ರ ಮಧ್ಯರಾತ್ರಿ ಭಾರತದ ಪಶ್ಚಿಮ ಗಡಿಯಲ್ಲಿ ಡ್ರೋನ್ಗಳನ್ನು ಹಾರಿಸಿವೆ. ಡ್ರೋನ್ಗಳಲ್ಲದೆ ಇತರ ಯುದ್ಧಸಾಮಗ್ರಿಗಳನ್ನು ಬಳಸಿಕೊಂಡು ಅನೇಕ ದಾಳಿಗಳನ್ನು ನಡೆಸಿವೆ. ಜಮ್ಮು- ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕ್ ಪಡೆಗಳು ಹಲವಾರು ಕದನ ವಿರಾಮ ಉಲ್ಲಂಘನೆಗಳನ್ನು ಮಾಡಿದೆ' ಎಂದು ಎಕ್ಸ್-ಪೋಸ್ಟ್ನಲ್ಲಿ ಹಂಚಿಕೊಳ್ಳಲಾಗಿದೆ.
'ಪಾಕ್ನ ಡ್ರೋನ್ ದಾಳಿಗಳನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಲಾಗಿದೆ. ಕದನ ವಿರಾಮ ಉಲ್ಲಂಘನೆಗಳಿಗೆ ಸೂಕ್ತ ಉತ್ತರವನ್ನು ನೀಡಲಾಗಿದೆ. ರಾಷ್ಟ್ರದ ಸಾರ್ವಭೌಮತ್ವ ಮತ್ತು ಸಮಗ್ರತೆಯನ್ನು ಕಾಪಾಡಲು ಭಾರತೀಯ ಸೇನೆಯು ಬದ್ಧವಾಗಿದೆ. ಶತ್ರು ರಾಷ್ಟ್ರದ ದುಷ್ಟ ಉದ್ದೇಶಗಳನ್ನು ಈಡೇರಲು ನಾವು ಬಿಡುವುದಿಲ್ಲ' ಎಂದು ಸೇನೆ ತಿಳಿಸಿದೆ.
ಗಡಿ ನಿಯಂತ್ರಣ ರೇಖೆಯಾದ್ಯಂತ ನಡೆಸಲಾದ ವಾಯುದಾಳಿಯನ್ನು ಹಿಮ್ಮೆಟ್ಟಿಸುವ ವಿಡಿಯೊವೊಂದನ್ನು ಭಾರತೀಯ ಸೇನೆಯು ಹಂಚಿಕೊಂಡಿದೆ.
OPERATION SINDOOR
— ADG PI - INDIAN ARMY (@adgpi) May 9, 2025
Pakistan Armed Forces launched multiple attacks using drones and other munitions along entire Western Border on the intervening night of 08 and 09 May 2025. Pak troops also resorted to numerous cease fire violations (CFVs) along the Line of Control in Jammu and… pic.twitter.com/WTdg1ahIZp
ಆಪರೇಷನ್ ಸಿಂಧೂರ
ಕಳೆದ ತಿಂಗಳು ಕಾಶ್ಮೀರದ ಪೆಹಲ್ಗಾಮ್ನಲ್ಲಿ ಮೂವರು ಉಗ್ರರು ಭಾರತೀಯ ಪ್ರವಾಸಿಗರ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 25 ಪ್ರವಾಸಿಗರು ಮೃತಪಟ್ಟಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತವು ಆಪರೇಷನ್ ಸಿಂಧೂರ ಕಾರ್ಯಚರಣೆಯನ್ನು ಕೈಗೊಂಡಿದೆ. ಬುಧವಾರ ರಾತ್ರಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಉಗ್ರರ ಶಿಬಿರದ ಮೇಲೆ ಭಾರತ ಸೇನೆಯು ದಾಳಿ ನಡೆಸಿತು. ಈ ದಾಳಿಯಲ್ಲಿ ಎಪ್ಪತ್ತಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ ಎಂದು ಸೇನೆ ತಿಳಿಸಿದೆ. ಇದಕ್ಕೆ ಪ್ರತಿಕಾರವಾಗಿ ಶತ್ರು ರಾಷ್ಟ್ರ ಪಾಕಿಸ್ತಾನ ಭಾರತದ ಗಡಿಯಲ್ಲಿ ದಾಳಿ ಆರಂಭಿಸಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications