ಆರ್ಥಿಕ ಹಿಂಜರಿತದತ್ತ ದೇಶದ ಆರ್ಥಿಕತೆ : ಸುಬ್ರಮಣಿಯನ್ ಸ್ವಾಮಿ
ನವದೆಹಲಿ, ಸೆಪ್ಟೆಂಬರ್ 19: ದೇಶದ ಆರ್ಥಿಕತೆ 'ಮಹಾ ಹಿಂಜರಿತ'ದತ್ತ ತೆರಳುತ್ತಿದೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
'ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳದೇ ಇದ್ದಲ್ಲಿ ಸದ್ಯದಲ್ಲೇ ಆರ್ಥಿಕ ಹಿಂಜರಿತಕ್ಕೆ ಗುರಿಯಾಗಬೇಕಾಗುತ್ತದೆ' ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಇಷ್ಟೇ ಅಲ್ಲದೆ ಭಾರತದ ಆರ್ಥಿಕತೆ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂಬುದಾಗಿ ಒಂದೂವರೆ ವರ್ಷ ಹಿಂದೆಯೇ ಪ್ರಧಾನಿ ನರೇಂದ್ರ ಮೋದಿಗೆ 16 ಪುಟಗಳ ಪತ್ರವನ್ನೂ ಬರೆದಿದ್ದೆ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
"ಸದ್ಯದಲ್ಲೇ ಆರ್ಥಿಕ ಹಿಂಜರಿತಕ್ಕೆ ಗುರಿಯಾಗಬೇಕಾಗಬಹುದು. ದೇಶದ ಆರ್ಥಿಕತೆಯನ್ನು ಮೇಲೆತ್ತಲು ಹಲವು ಉತ್ತಮ ಕೆಲಸಗಳನ್ನು ಮಾಡಬೇಕಾಗಿದೆ. ಒಂದೊಮ್ಮೆ ಇದನ್ನು ಮಾಡದೇ ಹೋದರೆ ಭಾರೀ ಆರ್ಥಿಕ ಹಿಂಜರಿತ ಎದುರಿಸಲಿದ್ದೇವೆ. ಇದರಿಂದ ಬ್ಯಾಂಕಿಂಗ್ ವ್ಯವಸ್ಥೆ ನಾಶವಾಗಬಹುದು. ಕೈಗಾರಿಕೆಗಳು ಬಾಗಿಲೆಳೆದುಕೊಳ್ಳಬಹುದು," ಎಂದು ಅವರು ಗಂಭೀರ ಎಚ್ಚರಿಕೆ ನೀಡಿದ್ದಾರೆ.
"ಆರ್ಥಿಕತೆಯನ್ನು ಮೇಲೆತ್ತಲು ಜನರನ್ನು ಉತ್ತೇಜಿಸುವುದು ಅನಿವಾರ್ಯ. ಇದಕ್ಕಾಗಿ ಆದಾಯ ತೆರಿಗೆಯನ್ನು ರದ್ದುಗೊಳಿಸಬೇಕು," ಎಂದು ಅವರು ಹೇಳಿದ್ದಾರೆ. ಜತೆಗೆ ಸಣ್ಣ ಮತ್ತು ಮಧ್ಯಮ ವರ್ಗದ ಕೈಗಾರಿಗಳಿಗೆ ನೀಡುತ್ತಿರುವ ಸಾಲದ ಮೇಲಿನ ಬಡ್ಡಿದರವನ್ನು ಶೇಕಡಾ 9ಕ್ಕಿಂತಲೂ ಕಡಿಮೆಗೊಳಿಸಬೇಕು. ಜತೆಗೆ ಫಿಕ್ಸೆಡ್ ಡೆಪಾಸಿಟ್ ಗಳ ಮೇಲೆಯೂ ಶೇ. 9 ರವರೆಗೆ ಬಡ್ಡಿ ನೀಡಬೇಕು," ಎಂದು ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.
ಮಾಜಿ ಪ್ರಧಾನಿ ಮತ್ತು ಹಿರಿಯ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ದೇಶದ ಜಿಡಿಪಿ ಮತ್ತಷ್ಟು ಕುಸಿತವಾಗಲಿದೆ ಎಂದು ಸೋಮವಾರ ಹೇಳಿದ್ದರು. ಇದಾದ ಬೆನ್ನಿಗೆ ಇದೀಗ ಸ್ವತಃ ಬಿಜೆಪಿಯ ಸುಬ್ರಮಣಿಯನ್ ಸ್ವಾಮಿ ಆರ್ಥಿಕ ಹಿಂಜರಿತದ ಎಚ್ಚರಿಕೆಯನ್ನು ನೀಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications