ಜಮ್ಮು-ಕಾಶ್ಮೀರದಲ್ಲಿ ಸೆರೆಸಿಕ್ಕ ಉಗ್ರ ಉಸ್ಮಾನ್ ಖಾನ್ ಯಾರು?
ನವದೆಹಲಿ, ಆಗಸ್ಟ್ 5 : ಜಮ್ಮು-ಕಾಶ್ಮೀರದ ಹೆದ್ದಾರಿಯಲ್ಲಿ ಬುಧವಾರ ಬಿಎಸ್ಎಫ್ ಪಡೆಯ ಶಿಬಿರದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರ ಪೈಕಿ ಒಬ್ಬನನ್ನು ಸೆರೆಹಿಡಿಯಲಾಗಿದೆ. ಸೆರೆಹಿಡಿದ ಉಗ್ರ ಪಾಕಿಸ್ತಾನ ಮೂಲದವನು ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ.
ಉಸ್ಮಾನ್ ಖಾನ್ ಅಲಿಯಾಸ್ ಕಾಸಿಂ ಖಾನ್ನನ್ನು ಭದ್ರತಾ ಪಡೆಗಳು ಸೆರೆಹಿಡಿದಿವೆ. ಸುಮಾರು 20 ವರ್ಷದ ಉಸ್ಮಾನ್ ಇಂದು ಬೆಳಗ್ಗೆ ಇತರ ಉಗ್ರರ ಜೊತೆ ಸೇರಿ ಉದಾಮ್ ಪುರ್ ಬಳಿ ಬಿಎಸ್ಎಫ್ ಶಿಬಿರದ ಮೇಲೆ ದಾಳಿ ಮಾಡಿದ್ದ ಮತ್ತು ಮೂವರನ್ನು ಒತ್ತೆಯಾಳಾಗಿ ಇಟ್ಟುಕೊಂಡಿದ್ದ. [ಕಾಶ್ಮೀರದಲ್ಲಿ ಉಗ್ರರ ದಾಳಿ, ಜೀವಂತವಾಗಿ ಸೆರೆಸಿಕ್ಕ ಉಗ್ರ]

ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು, ಉಸ್ಮಾನ್ ಮಾತ್ರ ಸೆರೆ ಸಿಕ್ಕಿದ್ದಾನೆ. ಪಾಕಿಸ್ತಾನದ ಫೈಸ್ಲಾಬಾದ್ನಿಂದ ಉಸ್ಮಾನ್ ಆಗಮಿಸಿದ್ದ ಎಂಬ ಮಾಹಿತಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪೊಲೀಸರು ಮತ್ತು ಗುಪ್ತಚರ ಇಲಾಖೆ ಅಧಿಕಾರಿಗಳು ಉಸ್ಮಾನ್ ವಿಚಾರಣೆಯನ್ನು ನಡೆಸುತ್ತಿದ್ದಾರೆ. [ಪಂಜಾಬಿನಲ್ಲಿ ಉಗ್ರರನ್ನು ಕೊಂದ ಯೋಧರು : ಚಿತ್ರಗಳು]
ಯಾರು ಉಸ್ಮಾನ್ ಖಾನ್? : ಪಾಕಿಸ್ತಾನ ಮೂಲದ ಉಸ್ಮಾನ್ ಲಷ್ಕರ್ ಎ ತೋಯ್ಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿ ನಡೆಸುತ್ತಿರುವ ಸಂಘಟನೆಯ ಸದಸ್ಯನಾಗಿದ್ದಾನೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಫೋಟ ನಡೆಸುವ ಉದ್ದೇಶದಿಂದ ಉಸ್ಮಾನ್ 10 ದಿನಗಳ ಹಿಂದೆಯೇ ಗಡಿ ನುಸುಳಿ ಬಂದಿದ್ದ.

ಪಂಜಾಬಿನ ಗುರುದಾಸ್ ಪುರ್ನಲ್ಲಿ ಗುಂಡಿನ ದಾಳಿ ನಡೆಸಿದ ಉಗ್ರರ ತಂಡದೊಂದಿಗೆ ಉಸ್ಮಾನ್ ಭಾರತಕ್ಕೆ ಆಗಮಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಒಂದು ತಂಡ ಪಂಜಾಬ್ಗೆ ಬಂದರೆ ಮತ್ತೊಂದು ಉಗ್ರರ ತಂಡ ಅರಮನಾಥ ಯಾತ್ರಿಗಳ ಮೇಲೆ ದಾಳಿ ನಡೆಸಲು ಕಾಶ್ಮೀರದಲ್ಲಿ ಉಳಿದಿತ್ತು ಎಂದು ಶಂಕಿಸಲಾಗಿದೆ. ಪಿಟಿಐ ಚಿತ್ರ
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications