Breaking: ನಕಲಿ,ದೇಶ ವಿರೋಧಿ ವಿಷಯ; 8 ಯೂಟ್ಯೂಬ್ ಚಾನೆಲ್ ಬ್ಲಾಕ್
ನವದೆಹಲಿ, ಆಗಸ್ಟ್ 18: "ನಕಲಿ ಭಾರತ-ವಿರೋಧಿ ವಿಷಯ"ಗಳನ್ನು ಪ್ರಸಾರ ಮಾಡುತ್ತಿರುವ ಆರೋಪದ ಮೇಲೆ ಸರಕಾರ ಗುರುವಾರ ದೇಶದ ಏಳು ಯೂಟ್ಯೂಬ್ ಸುದ್ದಿ ಚಾನೆಲ್ಗಳಿಗೆ ನಿರ್ಬಂಧ ಹೇರಿದೆ. ಕಳೆದ ವರ್ಷ ಡಿಸೆಂಬರ್ನಿಂದ ಬ್ಲಾಕ್ ಮಾಡಲಾದ ಚಾನೆಲ್ಗಳ ಸಂಖ್ಯೆ 102 ಕ್ಕೆ ಏರಿಕೆಯಾಗಿದೆ.
ಇದರ ಜೊತೆಗೆ ಪಾಕಿಸ್ತಾನ ಮೂಲದ ಒಂದು ಯೂಟ್ಯೂಬ್ ಚಾನೆಲ್ ಅನ್ನು ನಿರ್ಬಂಧಿಸಿದೆ. 2021 ರ ಐಟಿ ನಿಯಮಗಳ ಅಡಿಯಲ್ಲಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಈ ಕ್ರಮ ಕೈಗೊಂಡಿದೆ.
ನಿರ್ಬಂಧಿಸಲಾಗಿರುವ ಈ ಎಂಟು ಚಾನಲ್ಗಳು ಒಟ್ಟು 85 ಲಕ್ಷ 73 ಸಾವಿರಕ್ಕೂ ಹೆಚ್ಚು ಚಂದಾದಾರರನ್ನು ಹೊಂದಿದ್ದವು ಎಂದು ಕೇಂದ್ರ ಸರಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಐಟಿ ನಿಯಮಗಳು 2021 ರ ಅಡಿಯಲ್ಲಿ ತುರ್ತು ಅಧಿಕಾರವನ್ನು ಬಳಸಿಕೊಂಡು ಒಂದು ಫೇಸ್ಬುಕ್ ಖಾತೆ ಮತ್ತು ಅದರಲ್ಲಿನ ಎರಡು ಪೋಸ್ಟ್ಗಳನ್ನು ಕೂಡ ನಿರ್ಬಂಧಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ನಿರ್ಬಂಧಿಸಲಾದ ಚಾನೆಲ್ಗಳೆಂದರೆ ಲೋಕತಂತ್ರ ಟಿವಿ, U&V TV, ಆಮ್ ರಜ್ವಿ (AM Razvi), ಗೌರವಶಾಲಿ ಪವನ್ ಮಿಥಿಲಾಂಚಲ್, SeeTop5TH, Sarkari Update, Sab Kuch Dekho ಮತ್ತು ಪಾಕಿಸ್ತಾನ ಮೂಲದ ನ್ಯೂಸ್ ಕಿ ದುನ್ಯಾ (News ki Dunya).
ಈ ಎಂಟು ಯೂಟ್ಯೂಬ್ ಚಾನೆಲ್ಗಳು ಸುಮಾರು 86 ಲಕ್ಷ ಚಂದಾದಾರರನ್ನು ಹೊಂದಿದ್ದವು. 114 ಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಹೊಂದಿತ್ತು. "ತಪ್ಪು ಮಾಹಿತಿಗಳಿಂದ ಭಾರತದ ಧಾರ್ಮಿಕ ಸಮುದಾಯಗಳ ನಡುವೆ ದ್ವೇಷವನ್ನು ಹರಡುತ್ತಿವೆ" ಎಂದು ಸಚಿವಾಲಯ ಹೇಳಿದೆ.
ಸರಕಾರವು "ಅಧಿಕೃತ, ವಿಶ್ವಾಸಾರ್ಹ ಮತ್ತು ಸುರಕ್ಷಿತ ಆನ್ಲೈನ್ ಸುದ್ದಿ ಮಾಧ್ಯಮದ ಪರಿಸರವಿರುವಂತೆ ನೋಡಿಕೊಳ್ಳಲು ಬದ್ಧವಾಗಿದೆ. ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆ, ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಯನ್ನು ದುರ್ಬಲಗೊಳಿಸುವ ಯಾವುದೇ ಪ್ರಯತ್ನಗಳನ್ನು ವಿಫಲಗೊಳಿಸುವುದಕ್ಕಾಗಿ ಕೆಲವು ಸಾಮಾಜಿಕ ಮಾಧ್ಯಮ ಚಾನೆಲ್ಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ" ಎಂದು ಹೇಳಿದೆ.

ಕಳೆದ ಏಪ್ರಿಲ್ 25 ರಂದು ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿರುವ ಆರು ಯೂಟ್ಯೂಬ್ ಚಾನೆಲ್ಗಳು ಮತ್ತು ಫೇಸ್ಬುಕ್ ಖಾತೆ ಸೇರಿದಂತೆ 16 ಯೂಟ್ಯೂಬ್ ಚಾನೆಲ್ಗಳನ್ನು ಕೇಂದ್ರ ಸರಕಾರ ನಿರ್ಬಂಧಿಸಿತ್ತು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications