ಪಾಕಿಸ್ತಾನದ ಕಂಟೆಂಟ್ಗಳನ್ನು ತೆಗೆದುಹಾಕಿ: ಒಟಿಟಿ, ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ಗಳಿಗೆ ಕೇಂದ್ರದ ಆದೇಶ
ಭಾರತ-ಪಾಕಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಕಳೆದ ತಿಂಗಳು ಪಾಕ್ ಮೂಲದ ಉಗ್ರರು ಕಾಶ್ಮೀರದ ಪೆಹಲ್ಗಾಮ್ನಲ್ಲಿ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಭಾರತದ 25 ಪ್ರವಾಸಿಗಳು ಹತರಾಗಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಪ್ರದೇಶಗಳಲ್ಲಿ ಭಾರತ ಆಪರೇಷನ್ ಸಿಂಧೂರ ಕೈಗೊಂಡಿದೆ. ಈ ಕಾರ್ಯಾಚರಣೆಯಲ್ಲಿ 70 ರಿಂದ 100 ಭಯೋತ್ಪಾದಕರು ಹತರಾಗಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.
ಭಾರತದ ದಾಳಿಗೆ ಪ್ರತಿಯಾಗಿ ಯುದ್ಧ ನಿಯಮಗಳನ್ನು ಉಲ್ಲಂಘಿಸಿ ಪಾಕ್ ದಾಳಿ ನಡೆಸಿದೆ ಎಂದು ಭಾರತೀಯ ಸೇನಾ ವಕ್ತಾರರು ಹೇಳಿದ್ದಾರೆ. ಸೇನಾ ವಕ್ತಾರರ ಪ್ರಕಾರ, ಭಾರತದ ಗಡಿಯಲ್ಲಿ ಪಾಕಿಸ್ತಾನ ಸೇನೆ ಗುಂಡಿನ ದಾಳಿ ನಡೆಸಿದ್ದು, ಹದಿನೈದು ಭಾರತೀಯರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಸಾವಿಗೀಡಾದವರಲ್ಲಿ ಮೂವರು ಮಹಿಳೆಯರು ಹಾಗೂ ಮೂವರು ಮಕ್ಕಳು ಸೇರಿದ್ದಾರೆ ಎಂದು ತಿಳಿದುಬಂದಿದೆ.

ಪಾಕ್ ನಡೆಸಿದ ಅಪ್ರಚೋದಿತ ದಾಳಿಗೆ ಪ್ರತಿಯಾಗಿ ಭಾರತ ಸೇನೆ ಪಾಕಿಸ್ತಾನದ ಒಳಗೆ ನುಗ್ಗಿ ದಾಳಿ ನಡೆಸಿದೆ. ಲಾಹೋರ, ರಾವಲಪಿಂಡಿ, ಕರಾಚಿ ಸೇರಿದಂತೆ ಪಾಕಿಸ್ತಾನದ ಪ್ರಮುಖ ನಗರಗಳ ಮೇಲೆ ಭಾರತ ಡ್ರೋನ್ ದಾಳಿ ನಡೆಸಿದೆ. ಲಾಹೋರದ ಸೇನಾ ನೆಲೆಯನ್ನು ಗುರಿಯಾಗಿಸಿ ಭಾರತ ದಾಳಿ ನಡೆಸಿದೆ. ಸೇನಾ ನೆಲೆಯು ದ್ವಂಸಗೊಂಡಿದೆ ಎಂದು ಭಾರತ ಸೇನೆ ಹೇಳಿದೆ.
ಭಾರತದ ಹದಿನೈದು ನಗರಗಳ ಮೇಲೆಯೂ ಕ್ಷಿಪಣಿ ದಾಳಿ ಮಾಡಲು ಪಾಕಿಸ್ತಾನ ಯತ್ನ ನಡೆಸಿದೆ. ಆದರೆ, ಈ ದಾಳಿಗಳನ್ನು ವಿಫಲಗೊಳಿಸುವಲ್ಲಿ ನಮ್ಮ ಸೇನೆ ಯಶಸ್ವಿಯಾಗಿದೆ ಎಂದು ವಕ್ತಾರರು ಮಾಹಿತಿ ನೀಡಿದ್ದಾರೆ. ಅಮೃತಸರ (ಪಂಜಾಬ್), ಕಪುರ್ತಲಾ (ಪಂಜಾಬ್), ಜಲಂಧರ್ (ಪಂಜಾಬ್), ಲುಧಿಯಾನ (ಪಂಜಾಬ್), ಆದಂಪುರ (ಪಂಜಾಬ್), ಭಟಿಂಡಾ (ಪಂಜಾಬ್), ಅವಂತಿಪುರ (ಜಮ್ಮು ಮತ್ತು ಕಾಶ್ಮೀರ) ಶ್ರೀನಗರ ( ಜಮ್ಮು ಮತ್ತು ಕಾಶ್ಮೀರ), ಜಮ್ಮು ( ಜಮ್ಮು ಮತ್ತು ಕಾಶ್ಮೀರ), ಪಠಾಣ್ಕೋಟ್ ( ಪಂಜಾಬ್), ಚಂಡೀಗಢ ( ಕೇಂದ್ರಾಡಳಿತ ಪ್ರದೇಶ ), ನಲ್ರಾ (ರಾಜಸ್ಥಾನ), ಫಲೋಡಿ (ರಾಜಸ್ಥಾನ), ಉತ್ತರಲೈ (ರಾಜಸ್ಥಾನ), ಭುಜ್ ( ಗುಜರಾತ್ ) ಗಳಲ್ಲಿ ದಾಳಿ ನಡೆಸಲು ಪಾಕಿಸ್ತಾನ ಸೇನೆ ಯತ್ನಿಸಿದೆ ಎಂದು ತಿಳಿದುಬಂದಿದೆ.
ಒಟಿಟಿ ಹಾಗೂ ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ಗಳಿಗೆ ಕೇಂದ್ರದ ಸೂಚನೆ
ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರವು ಒಟಿಟಿಗಳಿಗೆ ಆದೇಶ ನೀಡಿದೆ. ಪಾಕಿಸ್ತಾನಕ್ಕೆ ಸಂಬಂಧಿಸಿದ, ಪಾಕ್ ಮೂಲದ ಯಾವುದೇ ಬಗೆಯ ಕಂಟೆಂಟ್ ಅನ್ನು ಪ್ಲಾಟ್ಪಾರ್ಮ್ನಿಂದ ತೆಗೆದು ಹಾಕುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ. ಪಾಕಿಸ್ತಾನದಕ್ಕೆ ಸಂಬಂಧಿಸಿದ ವೆಬ್ಸಿರೀಸ್ಗಳು, ಸಿನಿಮಾಗಳು, ಹಾಡುಗಳು ಮತ್ತು ಪಾಡ್ಕ್ಯಾಸ್ಟ್ಗಳನ್ನು ಒಟಿಟಿಯಿಂದ ಡಿಲೀಟ್ ಮಾಡುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.
'ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ, ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಒಟಿಟಿಗಳು ಹಾಗೂ ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ಪಾಕಿಸ್ತಾನಕ್ಕೆ ಸಂಬಂಧಿಸಿದ ವೆಬ್ ಸರಣಿಗಳು, ಸಿನಿಮಾಗಳು, ಹಾಡುಗಳು ಹಾಗೂ ಪಾಡ್ಕ್ಯಾಸ್ಟ್ಗಳಂತಹ ಕಂಟೆಂಟ್ಗಳನ್ನು ತೆಗೆದುಹಾಕಬೇಕು. ಇದು ತಕ್ಷಣ ಜಾರಿಗೆ ಬರಬೇಕು' ಎಂದು ವಾರ್ತಾ ಮತ್ತು ಪ್ರಸಾರ ಇಲಾಖೆ ಸಂದೇಶ ರವಾನಿಸಿದೆ.
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications