ಒಟಿಟಿ ಕಂಟೆಂಟ್ ಸೆನ್ಸಾರ್ ಮಾಡಲು ಮುಂದಾದ ಕೇಂದ್ರ ಸರ್ಕಾರ: ವಿರೋಧಿಸಿದ ಕಂಪನಿಗಳು
ಮುಂಬೈ, ಜುಲೈ 15: ಭಾರತದಲ್ಲಿ ಪ್ರಸಾರವಾಗುವ ಒಟಿಟಿ ಕಂಟೆಂಟ್ ಅನ್ನು ಸೆನ್ಸಾರ್ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಲೈಂಗಿಕತೆಯನ್ನು ಪ್ರಚೋದಿಸುವ ಹಾಗೂ ಆಕ್ಷೇಪಾರ್ಹ ವಿಚಾರಗಳನ್ನು ಹೊಂದಿರುವ ಕಂಟೆಂಟ್ಗೆ ಕಡಿವಾಣ ಹಾಕಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ರಾಯಟರ್ಸ್ ವರದಿ ಮಾಡಿದೆ.
ಕಂಟೆಂಟ್ಗಳನ್ನು ಒಟಿಟಿ ಪ್ಲಾಟ್ಫಾರ್ಮ್ಗಳಲ್ಲಿ ಹಾಕುವ ಮೊದಲು ಹಿಂಸಾಚಾರ ಮತ್ತು ಅಶ್ಲೀಲತೆಯ ಬಗ್ಗೆ ಸ್ವತಂತ್ರವಾಗಿ ಪರಿಶೀಲನೆ ಮಾಡಲಾಗುತ್ತದೆ. ಅದಕ್ಕೊಸ್ಕರ ಏಜೆನ್ಸಿಯೊಂದನ್ನು ನೇಮಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ.

ಜೂನ್ 20 ರಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಒಟಿಟಿ ಉದ್ಯಮದ ಪ್ರತಿನಿಧಿಗಳಿಗೆ ಈ ಪ್ರಸ್ತಾಪವನ್ನು ಮಾಡಲಾಗಿದೆ ಎಂದು ವರದಿ ಹೇಳಿದೆ.
ಸಂಸತ್ ಸದಸ್ಯರು ಹಾಗೂ ಸಾರ್ವಜನಿಕರ ಪರವಾಗಿ ಪ್ರಸ್ತಾವನೆಯನ್ನು ಮಾಡಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಸರ್ಕಾರವು 'ನೀತಿಸಂಹಿತೆ' ಕುರಿತು ಮಾತನಾಡಿದ್ದು ಪ್ರಸ್ತಾವಿತ ವಿಚಾರದಲ್ಲಿ ಅಂತರರಾಷ್ಟ್ರೀಯ ಕಂಟೆಂಟ್ಗಳನ್ನು ಸೇರಿಸುವಂತೆಯೂ ಸೂಚಿಸಿದೆ ಎಂದು ವರದಿಯಾಗಿದೆ.
ನೆಟ್ಫ್ಲಿಕ್ಸ್, ಡಿಸ್ನಿ ಮತ್ತು ಇತರ ಆನ್ಲೈನ್ ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ಗಳಿಗೆ ಈ ನೀತಿ ಸಂಹಿತಿಯನ್ನು ಜಾರಿಗೊಳಿಸಲು ಭಾರತ ಸರ್ಕಾರ ಮುಂದಾಗಿದೆ. ಆನ್ಲೈನ್ನಲ್ಲಿ ತೋರಿಸುವ ಮೊದಲು ಅಶ್ಲೀಲತೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದ ಕಂಟೆಂಟ್ ಅನ್ನು ಸ್ವತಂತ್ರವಾಗಿ ಪರಿಶೀಲಿಸುವ ಅಗತ್ಯವಿದೆ ಎಂದು ಸರ್ಕಾರ ಹೇಳಿದೆ.

ಜೂನ್ 20 ರಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯದಲ್ಲಿ ನಡೆದ ಸಭೆಯಲ್ಲಿ ಪ್ರಸ್ತಾಪವನ್ನು ಓವರ್-ದಿ-ಟಾಪ್ (ಒಟಿಟಿ) ವೇದಿಕೆಗಳಿಗೆ ತಲುಪಿಸಲಾಗಿದೆ ಎಂದು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.
ಆದಾಗ್ಯೂ, ಒಟಿಟಿ ಪ್ಲಾಟ್ಫಾರ್ಮ್ಗಳು ಪ್ರಸ್ತಾವನೆಯನ್ನು ವಿರೋಧಿಸಿವೆ. ಯಾವುದೇ ಅಂತಿಮ ನಿರ್ಧಾರವನ್ನು ಒಟಿಟಿ ಕಂಪನಿಗಳು ಹೇಳಿವೆ ಎಂದು ತಿಳಿದುಬಂದಿದೆ.
Amazon, Viacom18, ಮತ್ತು Apple TV ಪ್ರತಿನಿಧಿಗಳು ಸಹ ಈ ಸಭೆಯಲ್ಲಿ ಭಾಗವಹಿಸಿದ್ದವು ಎಂದು ತಿಳಿದುಬಂದಿದೆ. ಒಟಿಟಿ ಕಂಟೆಂಟ್ ಅನ್ನು ಸೆನ್ಸಾರ್ ಮಾಡಲು ಸ್ವತಂತ್ರ ಪ್ಯಾನಲ್ ಅನ್ನು ರಚಿಸುವುದಾಗಿ ಸರ್ಕಾರಿ ಅಧಿಕಾರಿಗಳು ಹೇಳಿದ್ದಾರೆ.

ಒಟಿಟಿ ಪ್ಲಾಟ್ಫಾರ್ಮ್ಗಳು ತೋರಿಸಿರುವ ಅಶ್ಲೀಲತೆ ಈಗ ದೇಶದಲ್ಲಿ ಚರ್ಚೆಯ ವಿಷಯವಾಗಿದೆ. ಸ್ಟ್ರೀಮಿಂಗ್ ಸೇವೆ ಪೂರೈಕೆದಾರರು ತೋರಿಸಿರುವ ಕಂಟೆಂಟ್ ಸೆನ್ಸಾರ್ ಮಾಡಲು ಸಹ ಕರೆಗಳು ಬಂದಿವೆ ಎಂದು ಸರ್ಕಾರ ತಿಳಿಸಿದೆ.
ಭಾರತೀಯ ಚಲನಚಿತ್ರಗಳನ್ನು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ನಿಂದ ಪರಿಶೀಲಿಸಲಾಗುತ್ತದೆ. ಅದೇ ರೀತಿ ಒಟಿಟಿ ಕಂಟೆಂಟ್ಗಳನ್ನು ಸೆನ್ಸಾರ್ ಮಾಡಲು ಸರ್ಕಾರ ಚಿಂತಿಸಿದೆ ಎಂದು ಹೇಳಲಾಗುತ್ತಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications