ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್ ಅವರಿಗೆ ಟ್ವಿಟ್ಟಿಗರ ನಮನ
ನವದೆಹಲಿ, ಅಕ್ಟೋಬರ್ 31: "ಎಲ್ಲವೂ ಅಂದುಕೊಂಡಂತೇ ಆಗಿದ್ದರೆ ಸರ್ದಾರ್ ವಲ್ಲಭಭಾಯ್ ಪಟೇಲ್ ಎಂಬ ಉಕ್ಕಿನ ಮನುಷ್ಯ ಸ್ವತಂತ್ರ್ಯ ಭಾರತದ ಮೊದಲ ಪ್ರಧಾನಿಯಾಗಬೇಕಿತ್ತು! ಆದರೆ ಮಹಾತ್ಮಾ ಗಾಂಧೀಜಿಯವರಿಗೆ ಜವಾಹರಲಾಲ್ ನೆಹರೂ ಅವರ ಮೇಲಿದ್ದ ಮಮಕಾರ ಪ್ರಧಾನಿ ಹುದ್ದೆಯನ್ನು ಪಟೇಲ್ ರಿಂದ ತ್ಯಾಗ ಮಾಡಿಸಿತು!"
ಅಪ್ರತಿಮ ದೇಶಭಕ್ತ, ಸ್ವಾತಂತ್ರ್ಯ ಹೋರಾಟಗಾರ ಸರ್ದಾರ್ ಪಟೇಲ್(ಅಕ್ಟೋಬರ್ 31, 1875-ಡಿಸೆಂಬರ್ 15 1950) ಅವರ ಬಗ್ಗೆ ಮಾತನಾಡುವಾಗೆಲ್ಲ ಹಲವರು ಹೇಳುವ ಮಾತು ಇದು! ಇತಿಹಾಸ ಕೆಣಕಿದರೆ ಈ ಮಾತು ಸತ್ಯವೂ ಹೌದು ಎಂಬುದು ಸಾಬೀತಾಗುತ್ತದೆ.
ಸ್ವಾತಂತ್ರ್ಯ ಪೂರ್ವದಲ್ಲಿ ಹರಿದು ಹಂಚಿಹೋಗಿದ್ದ ಪ್ರಾಂತಗಳನ್ನು ಒಗ್ಗೂಡಿಸಿ, ಏಕೀಕರಣ ಪರಿಕಲ್ಪನೆಗೆ ನಾಂದಿ ಹಾಡಿದವರು ಪಟೇಲ್. ಇಂದು(ಅ.31) ಅವರ 142ನೇ ಜನ್ಮದಿನ. ಆಧುನಿಕ ಭಾರತಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸುವುದಕ್ಕಾಗಿ ಅವರ ಜನ್ಮದಿನವನ್ನು 'ರಾಷ್ಟ್ರೀಯ ಏಕತಾ ದಿನ'ವನ್ನಾಗಿ ಆಚರಿಸಲಾಗುತ್ತಿದೆ.
ಅಕ್ಟೋಬರ್ 31, 1875 ರಂದು ಗುಜರಾತಿನ ನಡಿಯಾದ್ ನಲ್ಲಿ ಜನಿಸಿದ ಪಟೇಲರ ತಂದೆ ಝವೇರಭಾಯ್ ಮತ್ತು ಲಾಡಬಾ. ವಕೀಲ ವೃತ್ತಿಯಲ್ಲಿ ಸಾಕಷ್ಟು ಹೆಸರು ಗಳಿಸಿದ್ದರೂ ಪಟೇಲರನ್ನು ಸೆಳೆದಿದ್ದು ಸ್ವಾತಂತ್ರ್ಯ ಹೋರಾಟ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನೊಂದಿಗೆ ಗುರುತಿಸಿಕೊಂಡಿದ್ದ ಪಟೇಲರು ಭಾರತಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದವರು. ಆಧುನಿಕ ಭಾರತದ ಸಂಸ್ಥಾಪಕರಲ್ಲೊಬ್ಬರಾದ ಸರ್ದಾರ್ ಪಟೇಲರನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ನೂರಾರು ಗಣ್ಯರು ಸ್ಮರಿಸಿಕೊಂಡಿದ್ದಾರೆ.
|
ಮಹಾನ್ ವ್ಯಕ್ತಿ ಪಟೇಲ್
ಭಾರತದ ಉಕ್ಕಿನ ಮನುಷ್ಯ, ಭಾರತವನ್ನು ಒಗ್ಗೂಡಿಸಿದ ಮಹಾನ್ ವ್ಯಕ್ತಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರಿಗೆ ಜನ್ಮದಿನದ ಶುಭಾಶಯಗಳು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್ ಮಾಡಿದ್ದಾರೆ.
|
ಅವೀಸ್ಮರಣೀಯ ಕೊಡುಗೆ
ಸರ್ದಾರ್ ಪಟೇಲ್ ಅವರ ಜಯಂತಿಯಂದು ಅವರಿಗೆ ನಮ್ಮೆಲ್ಲರ ನಮನ. ನಿಸ್ವಾರ್ಥ ಸೇವೆ ಮತ್ತು ಕೊಡುಗೆಯನ್ನು ಭಾರತೀಯರು ಎಂದಿಗೂ ಮರೆಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ.
— CM of Karnataka (@CMofKarnataka) October 31, 2017 |
ದೇಶ ಒಗ್ಗೂಡಿಸಿದ ಪಟೇಲರಿಗೆ ಧನ್ಯವಾದ
ಸೌಹಾರ್ದ- ಸಾಮರಸ್ಯದ ಮೂಲಕ ದೇಶವನ್ನು ಒಗ್ಗೂಡಿಸಲು ಶ್ರಮಿಸಿದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರನ್ನು ನಾಡು ಸ್ಮರಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
|
ಉಕ್ಕಿನ ಮನುಷ್ಯನಿಗೆ ನಮನ
ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರಿಗೆ ಅವರ ಜನ್ಮದಿನದಂದು ನಮನಗಳು. ಎಂದು ಒಗ್ಗಟ್ಟಿನ ಓಟದ ಸಂದೇಶ ಹೊತ್ತ ಪಟೇಲರ ಮರಳು ಶಿಲ್ಪದೊಂದಿಗೆ ಟ್ವೀಟ್ ಮಾಡಿದ್ದಾರೆ ಖ್ಯಾತ ಮರಳು ಶಿಲ್ಪಿ ಸುದರ್ಶನ್ ಪಟ್ನಾಯಕ್.
|
ಏಕೀಕರಣಕ್ಕೆ ವ್ಯಾಖ್ಯೆ ನೀಡಿದವರು ಪಟೇಲ್
ಏಕೀಕರಣ ಮತ್ತು ಗೌರವಕ್ಕೆ ನಿಜವಾದ ವ್ಯಾಖ್ಯಾನ ನೀಡಿದ, ಉಕ್ಕಿನ ಮನುಷ್ಯ ವಲ್ಲಭಭಾಯ್ ಪಟೇಲ್ ಅವರನ್ನು ಅವರ ಜನ್ಮದಿನದಂದು ನೆನೆಪಿಸಿಕೊಳ್ಳೋಣ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಟ್ವೀಟ್ ಮಾಡಿದ್ದಾರೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications