Rain Alert: ಚಂಡಮಾರುತ ಪ್ರಸರಣ, ಈ ಭಾಗಗಳಲ್ಲಿ ಭಾರೀ ಮಳೆ! 'ರೆಡ್ ಅಲರ್ಟ್': ವಿಜ್ಞಾನಿ ಶಶಿಕಾಂತ್ ಮಿಶ್ರಾ
IMD Weather Forecast: ಪೂರ್ವ ಮುಂಗಾರು ಮಳೆ ಬೆನ್ನಲ್ಲೆ ದೇಶಾದ್ಯಂತ ಕೇವಲ ಎರಡು ವಾರಗಳಲ್ಲಿ ವಿಸ್ತರಿಸಿ ಮುಂಗಾರು ಮಳೆ ಅಬ್ಬರ ಶುರುವಿಟ್ಟುಕೊಂಡಿದೆ. ಈಗಾಗಲೇ ಪ್ರವಾಹ ಸೃಷ್ಟಿಯಾಗಿದ್ದ ಮೇಘಾಲಯ, ಮಣಿಪುರ, ಅಸ್ಸಾಂ ಸೇರಿದಂತೆ ಇತರ ರಾಜ್ಯಗಳಲ್ಲಿ ಮತ್ತೆ ಭಾರೀ ಮಳೆ ಮುಂದುವರಿಯಲಿದೆ. ಈ ಭಾಗದ ರಾಜ್ಯಗಳಿಗೆ (India Weather Report) 'ರೆಡ್ ಅಲರ್ಟ್' ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಜೂನ್ 18ರಂದು ಮುನ್ಸೂಚನೆ ನೀಡಿದೆ.
ಐಎಂಸಿ ವಿಜ್ಞಾನಿ ಮತ್ತು ಹವಾಮಾನ ತಜ್ಞರ ಡಾ. ಶಶಿಕಾಂತ್ ಮಿಶ್ರಾ ಅವರು ಭಾರೀ ಮಳೆ ಎಲ್ಲೆಲ್ಲಿ ಆಗಲಿದೆ. ಏನೆಲ್ಲ ಎಚ್ಚರಿಕೆ ಕೊಡಲಾಗಿದೆ ಎಂಬುದನ್ನು ವಿವರಿಸಿದ್ದಾರೆ. ಹವಾಮಾನ ವೈಪರೀತ್ಯಗಳಿಂದಾಗಿ ಪಶ್ಚಿಮ ಬಂಗಾಲ, ಝಾರ್ಖಂಡ, ಒಡಿಶಾ, ಬಿಹಾರ, ಪೂರ್ವ ಉತ್ತರ ಪ್ರದೇಶ ಸೇರಿದಂತೆ ಇನ್ನಿತರ ರಾಜ್ಯಗಳಲ್ಲಿ ಭಾರೀ ಮಳೆ ಆಗಲಿದ್ದು 'ಆರೆಂಜ್ ಅಲರ್ಟ್' ನೀಡಲಾಗಿದೆ. ಮುಂದಿನ ಮೂರು ದಿನ ಇದೇ ವಾತಾವರಣ ಈ ರಾಜ್ಯಗಳಲ್ಲಿ ಮುಂದುವರಿಯಲಿದೆ ಎಂದಿದ್ದಾರೆ.

ಇದರೊಂದಿಗೆ ಮೇಘಾಲಯ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಅರುಣಾಚಲ ಪ್ರದೇಶಗಳಲ್ಲಿ ಅತ್ಯಧಿಕ ಭಾರೀ ಆಗುತ್ತಿದೆ. ಹೀಗಾಗಿ ಜೂನ್ 18 ಹಾಗೂ 19ರಂದು ಒಟ್ಟು ಮುಂದಿನ ಎರಡು ದಿನಗಳ ಕಾಲ 'ರೆಡ್ ಅಲರ್ಟ್' ನೀಡಲಾಗಿದೆ. ಇಲ್ಲೆಲ್ಲ ಪ್ರವಾಹ ಪರಿಸ್ಥಿತಿಗಳು ಉಂಟಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ನದಿಗಳು ಉಕ್ಕಿಹರಿಯುತ್ತಿವೆ.
ಕರ್ನಾಟ ಸೇರಿ ಕರಾವಳಿ ರಾಜ್ಯಗಳಿಗೆ ಎಚ್ಚರಿಕೆ
ಇನ್ನೂ ಗುಜರಾತ್, ಗೋವಾ, ಕರ್ನಾಟಕ ಕರಾವಳಿ, ಉತ್ತರ ಪ್ರದೇಶ, ತಮಿಳುನಾಡು, ಕೇರಳ, ಗುಜರಾತ್ ಸೇರಿದಂತೆ ಇತರರ ಒಂದಷ್ಟು ರಾಜ್ಯಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಆಗುತ್ತಿದ್ದು, 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಕರಾವಳಿ ಭಾಗದ ಈ ರಾಜ್ಯಗಳಲ್ಲಿ ಗಾಳಿಯ ವೇಗ ಹೆಚ್ಚಾಗುವ ಕಾರಣಕ್ಕೆ ಮೀನುಗಾರರಿಗೆ ನೀರಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಒಟ್ಟಾರೆ ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಮಳೆ ಸಕ್ರಿಯವಾಗಿದ್ದು, ಈ ವಾರಪೂರ್ತಿ ವ್ಯಾಪಕ ಮಳೆಯ ದರ್ಶನವಾಗಲಿದೆ ಎಂದು ಅವರು ಮುನ್ಸೂಚನೆ ನೀಡಿದ್ದಾರೆ.
ಮೇ ಅಂತ್ಯದಲ್ಲಿ ಕರ್ನಾಟಕ, ಕೇರಳ ಸೇರಿದಂತೆ ದಕ್ಷಿಣ ರಾಜ್ಯಗಳಲ್ಲಿ ವ್ಯಾಪಕ ಮಳೆ ಆಗಿತ್ತು. ಅದರ ಬೆನ್ನಲ್ಲೆ ಅವಧಿಗೂ ಮೊದಲೇ ಆಗಮಿಸಿ ಮುಂಗಾರು ಮಳೆ ಕರ್ನಾಟಕ ಮಾತ್ರವಲ್ಲದೇ ಇಡಿ ಭಾರತಾದ್ಯಂತ ವಾರದಲ್ಲಿ ವಿಸ್ತರಣೆ ಆಯಿತು. ಇದೀಗ ಎರಡನೇ ಭಾರಿಗೆ ಮುಂಗಾರು ಮಳೆ ತೀವ್ರ ರೂಪ ಪಡೆದುಕೊಂಡಿದೆ. ಪರಿಣಾಮ, ಅಸ್ಸಾಂ, ಮೇಘಾಲಯ, ಬಿಹಾರ, ಪಶ್ಚಿಮ ಬಂಗಾಳ, ಮಣಿಪುರ, ದೆಹಲಿ, ಉತ್ತರ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಆಗುತ್ತಿದೆ.
-
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications