ಗುಜರಾತ್ ಸರಣಿ ಸ್ಫೋಟದ ರೂವಾರಿ, ಮೋಸ್ಟ್ ವಾಂಟೆಡ್ ಭಯೋತ್ಪಾದಕ ಬಂಧನ
ನವದೆಹಲಿ, ಜನವರಿ 22: ಗುಜರಾತ್ ಸರಣಿ ಸ್ಫೋಟದ ರೂವಾರಿ, ಇಂಡಿಯನ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯ ಅಬ್ದುಲ್ ಸುಭಾನ್ ಖುರೇಶಿ ಅಲಿಯಾಸ್ ತಾಖೀರ್ ನನ್ನು ಸೆರೆಹಿಡಿಯುವಲ್ಲಿ ದೆಹಲಿ ಪೊಲೀಸರು ಯಶಸ್ವಿಯಾಗಿದೆ.
ಬಾಂಬ್ ತಯಾರಿಕೆಯಲ್ಲಿ ನಿಪುಣನಾಗಿದ್ದ ಖುರೇಶಿಯನ್ನು ಭಾರತದ ಒಸಾಮಾ ಬಿನ್ ಲಾಡೆನ್ ಎಂದೇ ಕರೆಯಲಾಗುತ್ತಿತ್ತು. 2008 ರ ಗುಜರಾತ್ ಸರಣಿ ಸ್ಫೋಟ ಮತ್ತು 2006 ರಲ್ಲಿ ಮುಂಬೈನ ರೈಲಿನಲ್ಲಿ ಬಾಂಬ್ ಸ್ಫೋಟದ ಹಿಂದಿನ ರೂವಾರಿ ಈತನೇ ಎಂಬುದು ದೃಢವಾಗಿದ್ದರೂ, ತಲೆಮರೆಸಿಕೊಂಡಿದ್ದ ಆತನನ್ನು ಹಿಡಿಯಲು ಭಾರತಕ್ಕೆ ಸಾಧ್ಯವಾಗಿರಲಿಲ್ಲ. ಕೊನೆಗೂ ದಶಕದ ನಂತರ ಆತನನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದೆ.
ಜುಲೈ 26, 2008 ರಂದು ಗುಜರಾತಿನ ಅಹ್ಮದಾಬಾದಿನಲ್ಲಿ 21 ಕಡೆಗಳಲ್ಲಿ ಬಾಂಬ್ ಸ್ಫೋಟಿಸಲಾಗಿತ್ತು. 70 ನಿಮಿಷಗಳ ಕಾಲ ನಡೆದ ಈ ಸ್ಫೋಟದಲ್ಲಿ 56 ಮಂದಿ ಸಾವಿಗೀಡಾಗಿದ್ದರೆ, 200 ಮಂದಿ ಗಾಯಗೊಂದಿದ್ದರು.

ಜುಲೈ 11 2006 ರಂದು ಮುಂಬೈಯ ಸಬ್ ಅರ್ಬನ್ ರೈಲ್ವೆಯಲ್ಲಿ 7 ಕಡೆಗಳಲ್ಲಿ 11 ನಿಮಿಷಗಳ ಕಾಲ ನಡೆಸಿದ ಬಾಂಬ್ ದಾಳಿಯಲ್ಲಿ 200 ಜನ ಮೃತರಾಗಿದ್ದರೆ, 700 ಗಾಯಗೊಂಡಿದ್ದರು.
ಈ ಕಹಿ ಘಟನೆಗಳು ನಡೆದು ದಶಕಕ್ಕೂ ಹೆಚ್ಚು ವರ್ಷಗಳಾದ ಮೇಲೆ ಕೊನೆಗೂ ಕುಖ್ಯಾತ ಭಯೋತ್ಪಾದಕನನ್ನು ಸೆರೆಹಿಡಿಯಲಾಗಿದೆ. ಸಿಮಿ(Students Islamic Movement of India) ಮತ್ತು ಇಂದಿಯನ್ ಮುಜಾಹಿದ್ದಿನ್ ಸಂಘಟನೆಯ ಸದಸ್ಯನಾಗಿದ್ದ ಖುರೇಶಿ, ಭಾರತದ ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿಯಲ್ಲೂ ಇದ್ದ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications