INS Vikrant: ಪಾಕ್ನ ಕರಾಚಿ ಬಂದರು ಮೇಲೆ ಭಾರತದ ಐಎನ್ಎಸ್ ವಿಕ್ರಾಂತ್ ದಾಳಿ!
ಮೇ 09: INS Vikrant combat carrier: ಭಾರತೀಯ ಸೇನೆಯು ಪಾಕಿಸ್ತಾನದ ಕರಾಚಿ ಗುರಿಯಾಗಿಸಿಕೊಂಡು ದಾಳಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. Operation Sindoor 2.0 ಆಪರೇಷನ್ ಸಿಂಧೂರ ಮುಂದುವರಿದ ಭಾಗವಾಗಿ ಪಾಕಿಸ್ತಾನದ ನೌಕಾಪಡೆಯನ್ನು ಗುರಿಯಾಗಿಸಿಕೊಂಡು ಭಾರತವು ದಾಳಿ ಮಾಡುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಪಾಕಿಸ್ತಾನದ ವಾಯು ಸೇನೆಯು ವಿಫಲ ಪ್ರಯತ್ನಗಳನ್ನು ಭಾರತೀಯ ವಾಯು ಸೇನೆಯು ಧ್ವಂಸ ಮಾಡಿದೆ.
ಇದೀಗ ಪಾಕಿಸ್ತಾನದ ಕರಾಚಿಯ ಮೇಲೆ ಭಾರತೀಯ ನೌಕಾಪಡೆಯು ಕಣ್ಣಿಟ್ಟಿದೆ ಎಂದು ಹೇಳಲಾಗುತ್ತಿದೆ. ಐಎನ್ಎಸ್ ವಿಕ್ರಾಂತ್ ಘರ್ಜನೆ ಶುರು ಮಾಡಿದೆ. ಈ ಸಬ್ ಮರೀನ್ನ ಮೂಲಕ ಕರಾಚಿ ನೌಕಾ ನೆಲೆಯ ಮೇಲೆ ದಾಳಿ ಮಾಡಲಾಗಿದೆ. ಇದು ಪಾಕಿಸ್ತಾನದ ಪ್ರಮುಖ ನೌಕಾ ನೆಲೆಯಾಗಿದ್ದು. ಪಾಕ್ನ ವ್ಯಾಪಾರ ಕೇಂದ್ರವೂ ಇದಾಗಿದೆ.

ಭಾರತೀಯ ಸೇನೆ ಹಾಗೂ ಭಾರತ ಸರ್ಕಾರವು ಹಲವು ದಿನಗಳಿಂದ ನಾವಾಗಿ ನಾವು ಯಾವುದೇ ದಾಳಿಯನ್ನು ಪಾಕಿಸ್ತಾನ ಹಾಗೂ ಪಾಕಿಸ್ತಾನದ ಸೇನೆಯನ್ನು ಗುರಿಯಾಗಿಸಿಕೊಂಡು ಮಾಡುವುದಿಲ್ಲ. ಒಂದೊಮ್ಮೆ ಪಾಕಿಸ್ತಾನವು ನಮ್ಮ ಮೇಲೆ ದಾಳಿ ಮಾಡಿದರೆ ನಾವು ಪಾಕಿಸ್ತಾನದ ಮೇಲೆ ದಾಳಿ ಮಾಡಲಿದ್ದೇವೆ. ನಮ್ಮ ದೇಶವನ್ನು ರಕ್ಷಿಸಿಕೊಳ್ಳುವುದಕ್ಕೆ ಹಾಗೂ ಪಾಕಿಸ್ತಾನಕ್ಕೆ ಹೇಗೆ ಪ್ರತ್ಯುತ್ತರ ನೀಡಬೇಕು ಎನ್ನುವುದು ತಿಳಿದಿದೆ ಎಂದು ಭಾರತ ಎಚ್ಚರಿಕೆ ನೀಡಿತ್ತು. ಇದೀಗ ಕರಾಚಿಯಲ್ಲಿ ಭಾರತೀಯ ಸೇನೆಯ ಐಎನ್ಎಸ್ ವಿಕ್ರಾಂತ್ ಯುದ್ಧ ವಾಹಕ ನೌಕೆಯು ಮೂಲಕ ದಾಳಿ ನಡೆಸಲಾಗಿದೆ.
ಪ್ರಮುಖ ವ್ಯಾಪಾರ ಕೇಂದ್ರ: ಇನ್ನು ಭಾರತೀಯ ನೌಕಾಪಡೆಯು ಪ್ರಮುಖವಾಗಿ ಪಾಕ್ನ ಕರಾಚಿಯ ನೌಕಾಪಡೆಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದೆ ಎಂದು ವರದಿಯಾಗುತ್ತಿದ್ದು. ಇದು ಪಾಕಿಸ್ತಾನದ ಪ್ರಮುಖ ವ್ಯಾಪಾರ ಕೇಂದ್ರ ಇದಾಗಿದೆ. ಇಲ್ಲಿನ ಪ್ರಮುಖ ಬಂದರುಗಳ ಮೂಲಕವೇ ಪಾಕ್ - ದೇಶ ವಿದೇಶಗಳಿಗೆ ಸರಕು - ಸಾಮಾಗ್ರಿಗಳನ್ನು ಸರಬರಾಜು ಮಾಡುತ್ತದೆ. ಆಮದು ಹಾಗೂ ರಫ್ತುನಿಂತಹ ಕೆಲಸಗಳು ಇಲ್ಲಿ ನಡೆಯುತ್ತದೆ. ಸ್ವದೇಶಿ ನಿರ್ಮಿತ ಐಎನ್ಎಸ್ ವಿಕ್ರಾಂತ್ ಯುದ್ಧ ವಾಹಕ ನೌಕೆಯು ಪಾಕ್ನಲ್ಲಿ ಘರ್ಜಿಸಿದೆ.
ಭಾರತ ಹಾಗೂ ಪಾಕಿಸ್ತಾನ ನಡುವಣ ಉದ್ವಿಗ್ನತೆ ಹೆಚ್ಚಾಗಿದೆ. ಇಂದು ರಾವ್ಲ್ಪಿಂಡಿಯಲ್ಲಿ ಭಾರತ ಮಿಸೈಲ್ ದಾಳಿಯನ್ನು ನಡೆಸಿತ್ತು. ಇದಕ್ಕುತ್ತರವಾಗಿ ಪಾಕ್ ಸೇಡು ತೀರಿಸಿಕೊಳ್ಳಲು ಗುರುವಾರ ಸಂಜೆ ಪ್ಲ್ಯಾನ್ ಮಾಡಿಕೊಂಡಿತ್ತು. ಆದರೆ ಪಾಪಿ ಪಾಕಿಸ್ತಾನದ ಆಸೆ ಕನಸಿಗೆ ಭಾರತೀಯ ವೀರ ಯೋಧರು ಪ್ರತ್ಯುತ್ತರ ನೀಡಿದ್ದಾರೆ. ಅಲ್ಲದೆ ಭಾರತದ ಹಲವು ನಗರಗಳಲ್ಲಿ ದೊಡ್ಡ ದಾಳಿಗೆ ಮುಂದಾಗಿದ್ದ ಪಾಕ್ ಕ್ಷಿಪಣಿಗಳನ್ನು ಭಾರತ ಹೊಡೆದುರುಳಿಸಿದ ಬೆನ್ನಲ್ಲೆ ಮತ್ತೊಂದು ದೊಡ್ಡ ಅಪ್ಡೇಟ್ ಸಿಕ್ಕಿದೆ.
ಭಾರತೀಯ ಸೇನೆಯು ಪಾಕಿಸ್ತಾನಿ ಪೈಲಟ್ನನ್ನು ರಾಜಸ್ಥಾನದ ಲಾಠಿಯಲ್ಲಿ ಬಂಧಿಸಿದೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ಈ ಪೈಲಟ್ ಪಾಕಿಸ್ತಾನ ವಾಯುಪಡೆಯ ಜೆಎಫ್ -17 ಯುದ್ಧ ವಿಮಾನ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಯುದ್ಧ ವಿಮಾನವನ್ನು ಭಾರತ ಹೊಡೆದು ಉರುಳಿಸಿದೆ. ಭಾರತೀಯ ಅಧಿಕಾರಿಗಳು ಪೈಲಟ್ ಅವರ ಗುರುತನ್ನು ಇನ್ನೂ ಬಹಿರಂಗಪಡಿಸಿಲ್ಲ, ಆದರೆ ಅವರು ಪಾಕಿಸ್ತಾನ ವಾಯುಪಡೆಯ ಹಿರಿಯ ಅಧಿಕಾರಿಯಾಗಿರಬಹುದು ಎಂದು ನಂಬಲಾಗಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications