ಸರ್ಕಾರಿ ಸೇವೆಗೆ ಸೇರುವಾಗ ಗಂಡು, ಸೇವೆ ಬಿಡುವಾಗ ಹೆಣ್ಣು!
ಸೇವೆಗೆ ಸೇರುವಾಗ ಗಂಡಾಗಿ, ಆನಂತರ ಹೆಣ್ಣಾಗಿ ಪರಿವರ್ತನೆಗೊಂಡಿದ್ದಕ್ಕೆ ಸೇವೆಯಿಂದ ಹೊರಹಾಕಲು ನಿರ್ಧರಿಸಿದ ಭಾರತೀಯ ನೌಕಾಪಡೆ. ಇತ್ತೀಚೆಗೆ, ಲಿಂಗ ಪರಿವರ್ತನೆ ಮಾಡಿಸಿಕೊಂಡು ಬಂದಿರುವ ಸಿಬ್ಬಂದಿ ವಿರುದ್ಧ ಕ್ರಮ.
ನವದೆಹಲಿ, ಆಗಸ್ಟ್ 28: ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಿಬ್ಬಂದಿಯೊಬ್ಬರು ತಮ್ಮನ್ನು ವೈದ್ಯಕೀಯ ಸೌಲಭ್ಯಗಳ ಸಹಾಯದಿಂದ ಹೆಣ್ಣಾಗಿ ಪರಿವರ್ತಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ಸೇವೆಯಿಂದ ತೆಗೆದುಹಾಕಲು ಇಲಾಖೆ ಸಿದ್ಧತೆ ನಡೆಸಿದೆ.
ವಿಶಾಖಪಟ್ಟಣಂನಲ್ಲಿರುವ ಐಎನ್ಎಸ್ ಎಕ್ಸಿಲಾ ನೌಕಾ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ಆ ಸಿಬ್ಬಂದಿ, ಇತ್ತೀಚೆಗೆ ರಜೆಯ ಮೇಲೆ ತೆರಳಿ ಪುನಃ ಉದ್ಯೋಗಕ್ಕೆ ಹಾಜರಾಗಿದ್ದಾರೆ. ಈ ಅವಧಿಯಲ್ಲಿ ಅವರು ತಮ್ಮ ಲಿಂಗ ಪರಿವರ್ತನೆ ಮಾಡಿಕೊಂಡು ಬಂದಿದ್ದಾರೆ.

ಆದರೆ, ಇದು ನೌಕಾಪಡೆಯ ನಿಯಮಗಳಿಗೆ ವಿರುದ್ಧವಾಗಿರುವುದರಿಂದ ಆಕೆಗೆ (ಈಗ 'ಆಕೆ' ಎಂದೇ ಸಂಬೋಧಿಸಲಾಗುತ್ತಿದೆ) ನೌಕಾಪಡೆಯ 'SERVICE NO LONGER REQUIRED' ನಿಯಮದಡಿ ಅವರನ್ನು ಕೆಲಸದಿಂದ ತೆಗೆದುಹಾಕಲು ನಿರ್ಧರಿಸಲಾಗಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ಏಳು ವರ್ಷಗಳ ಹಿಂದೆ ಆಕೆ, ನೌಕಾಪಡೆಯಲ್ಲಿ ಕೆಲಸಕ್ಕಾಗಿ ಅರ್ಜಿಯನ್ನು ಸಲ್ಲಿಸುವಾಗ ಭಾರತೀಯ ನಾಗರಿಕ/ಪುರುಷ ಎಂದು ನಮೂದಿಸಿದ್ದರು. ಆದರೆ, ಈಗ ಲಿಂಗ ಪರಿವರ್ತನೆಯಾದ ನಂತರ, ಆ ಸಿಬ್ಬಂದಿಯನ್ನು ಪುರುಷ ಎಂದು ಪರಿಗಣಿಸಲು ಸಾಧ್ಯವಾಗಿರದ ಹಿನ್ನೆಲೆಯಲ್ಲಿ ಅವರನ್ನು ಸೇವೆಯಿಂದ ತೆಗೆದುಹಾಕಲು ಕ್ರಮಕೈಗೊಳ್ಳಲಾಗಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications