ಭಾರತೀಯ ನೌಕಾ ಸೇನೆಗೆ 'ಸ್ಕಾರ್ಪಿಯನ್' ಶಕ್ತಿ
ಮುಂಬೈ, ಏ. 7: ಭಾರತೀಯ ಸೇನೆ ತನ್ನ ಬಲವನ್ನು ಮತ್ತಷ್ಟು ಹೆಚ್ಚಿಸಿಕೊಂಡಿದೆ. ಸ್ವದೇಶಿ ನಿರ್ಮಿತ ಜಲಾಂತರ್ಗಾಮಿ (ಸಬ್ಮೆರಿನ್) ನೌಕೆ ಸ್ಕಾರ್ಪಿಯನ್ ದೇಶದ ನೌಕಾ ಶಕ್ತಿಯನ್ನು ಬಲಪಡಿಸಿದೆ.
ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಮಜಗಾಂವ್ ಹಡಗುಕಟ್ಟೆಯಲ್ಲಿ ಭಾರತೀಯ ನೌಕಾಪಡೆಗೆ ಹೊಸ ಜಲಾಂತರ್ಗಾಮಿಯನ್ನು ಹಸ್ತಾಂತರ ಮಾಡಿದರು. ಫ್ರಾನ್ಸ್ ನ ಸಹಕಾರದಲ್ಲಿ ನಿರ್ಮಿತವಾದ ಈ ನೌಕೆಯು ಭಾರತೀಯ ನೌಕಪಡೆಯ ಸಾಮರ್ಥ್ಯವನ್ನು ಮತ್ತಷ್ಟು ವೃದ್ಧಿಸಿದೆ.[ನೌಕಾ ಸೇನೆ ಸೇರಿದ ಯುವತಿಯರು ಹೇಳಿದ್ದೇನು?]

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ '75 ಜಲಾಂತರ್ಗಾಮಿ ಕಾರ್ಯಕ್ರಮ'ದ ಅಂಗವಾಗಿ ಮುಂದಿನ ಕೆಲವು ವರ್ಷಗಳಲ್ಲಿ ಇನ್ನೂ 6 ನೌಕೆಗಳು ನೌಕಾ ಸೇನೆ ಸೇರ್ಪಡೆಗೊಳ್ಳಲಿವೆ ಎಂದು ಪರಿಕ್ಕರ್ ತಿಳಿಸಿದರು.
ಹೊಸ ಜಲಾಂತರ್ಗಾಮಿ ನೌಕೆ 2016ರ ಸೆಪ್ಟಂಬರ್ ವೇಳೆಗೆ ಕಾರ್ಯಾಚರಣೆ ಆರಂಭಿಸಲಿದೆ. ಭಾರತೀಯ ನೌಕಾಪಡೆಯಲ್ಲಿ ಸದ್ಯ 14 ಸಾಂಪ್ರದಾಯಿಕ ಜಲಾಂತರ್ಗಾಮಿ ನೌಕೆ, 10 ರಷ್ಯನ್ ಕಿಲೋ ಕ್ಲಾಸ್ ಮತ್ತು 4 ಜರ್ಮನ್ ಎಚ್ಡಿಡಬ್ಲ್ಯು ಕ್ಲಾಸ್ ಹಡಗುಗಳಿದ್ದವು ಅದಕ್ಕೆ ಸ್ಕಾರ್ಪಿಯನ್ ಹೊಸ ಸೇರ್ಪಡೆಯಾಗಿದೆ.[ಬ್ರಹ್ಮೋಸ್ ಸೂಪರ್ಸಾನಿಕ್ ಕ್ಷಿಪಣಿ ಯಶಸ್ವಿ ಉಡಾವಣೆ]
ಜಲಾಂತರ್ಗಾಮಿ ನೌಕೆಯ ವಿಶೇಷಗಳೇನು?
* ನೀರಿನ ಮೇಲೆ ಮತ್ತು ಒಳಗೆ ಹೇಗೆ ಬೇಕಾದರೂ ಸಂಚರಿಸಬಲ್ಲದು
* ಸರ್ವೇ ಮಾಡಲು, ಯುದ್ಧ ಉಪಕರಣಗಳನ್ನು ಹೊತ್ತೊಯ್ಯಲು ಬಳಸಿಕೊಳ್ಳಬಹುದು.
* ಎಂಥ ವಾತಾವರಣದಲ್ಲಾದರೂ ಈ ನೌಕೆ ಸುಲಭವಾಗಿ ಸಂಚರಿಸಬಲ್ಲದು.
* ನೀರಿನ ತಳಭಾಗದ ಸ್ಷಷ್ಟ ಚಿತ್ರಣವನ್ನು ಕ್ಷಣಮಾತ್ರದಲ್ಲಿ ರವಾನಿಸುವ ಸಾಮರ್ಥ್ಯ ಹೊಂದಿದೆ.
* ಅತ್ಯಾಧುನಿಕ ಉಕ್ಕಿನಿಂದ ತಯಾರು ಮಾಡಲಾಗಿದ್ದು, ಎಂಥ ಆಘಾತವನ್ನಾದರೂ ಸುಲಭವಾಗಿ ತಡೆದುಕೊಳ್ಳಬಲ್ಲದು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications