ಜುಲೈ 4ಕ್ಕೆ ರಾಷ್ಟ್ರೀಯ ಕುಸ್ತಿ ಒಕ್ಕೂಟದ ಚುನಾವಣೆ ನಡೆಸಲು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಸಿದ್ಧತೆ
ನವದೆಹಲಿ, ಜೂನ್. 13: ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಸೋಮವಾರ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ನ ಮಾಜಿ ಮುಖ್ಯ ನ್ಯಾಯಮೂರ್ತಿ ಮಹೇಶ್ ಮಿತ್ತಲ್ ಕುಮಾರ್ ಅವರನ್ನು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಚುನಾವಣೆಗಳನ್ನು ನಡೆಸಲು ಚುನಾವಣಾ ಅಧಿಕಾರಿಯಾಗಿ ನೇಮಿಸಿದೆ. ಜುಲೈ 4 ರಂದು ಚುನಾವಣೆ ನಡೆಯುವ ಸಾಧ್ಯತೆಯಿದೆ.
ಜೂನ್ 7 ರಂದು ಪ್ರತಿಭಟನಾ ನಿರತ ಕುಸ್ತಿಪಟುಗಳೊಂದಿಗಿನ ಸಭೆಯ ನಂತರ ಕ್ರೀಡಾ ಸಚಿವ ಅನುರಾಗ್ ಠಾಕೂರ್, ಜೂನ್ 30 ರೊಳಗೆ ಡಬ್ಲ್ಯುಎಫ್ಐ ಚುನಾವಣೆಗಳನ್ನು ನಡೆಸಲಾಗುವುದು ಎಂದು ಹೇಳಿದ್ದರು. ಆದರೆ ಈ ಗಡುವನ್ನು ಅನುಸರಿಸುವುದು ಕಷ್ಟ ಎಂದು ಸ್ಪಷ್ಟವಾಗಿದೆ. ಏಕೆಂದರೆ ಡಬ್ಲ್ಯುಎಫ್ಐಯ ಸಾಮಾನ್ಯ ಸಭೆ (SGM) ವಿಶೇಷ ಸಭೆ ನಡೆಸಲು 21 ದಿನಗಳ ಸೂಚನೆ ಅಗತ್ಯವಿದೆ.

ಚುನಾವಣೆಗಳನ್ನು ವಾರ್ಷಿಕ ಸಾಮಾನ್ಯ ಸಭೆ (AGM) ಅಥವಾ ಸಾಮಾನ್ಯ ಸಭೆಯಲ್ಲಿ ನಡೆಸಬಹುದು. ನಿರ್ಗಮಿತ ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಕುಟುಂಬದ ಯಾವುದೇ ಸದಸ್ಯರು ಅಥವಾ ಸಹವರ್ತಿಗಳನ್ನು ಚುನಾವಣೆಗೆ ಸ್ಪರ್ಧಿಸಲು ಸರ್ಕಾರವು ಅನುಮತಿಸುವುದಿಲ್ಲ ಎಂದು ಅನುರಾಗ್ ಠಾಕೂರ್ ಅವರು ಕುಸ್ತಿಪಟುಗಳಿಗೆ ಭರವಸೆ ನೀಡಿದ್ದರು. ಇದಾದ ನಂತರ ಕುಸ್ತಿಪಟುಗಳು ಜೂನ್ 15 ರವರೆಗೆ ತಮ್ಮ ಪ್ರತಿಭಟನೆಯನ್ನು ನಿಲ್ಲಿಸಿದ್ದಾರೆ.
ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಸಿಇಒ ಕಲ್ಯಾಣ್ ಚೌಬೆ ಅವರು ಮಾಜಿ ಮುಖ್ಯ ನ್ಯಾಯಮೂರ್ತಿ ಮಹೇಶ್ ಮಿತ್ತಲ್ ಕುಮಾರ್ ಅವರ ನೇಮಕಾತಿಯ ಬಗ್ಗೆ ಸಂವಹನ ನಡೆಸಿ, ಅವರ ಒಪ್ಪಿಗೆಯನ್ನು ಕೋರಿದ್ದರು. "ಐಒಎ ಡಬ್ಲ್ಯುಎಫ್ಐ ಕಾರ್ಯಕಾರಿ ಸಮಿತಿಯ ಚುನಾವಣೆಗಳನ್ನು ನಡೆಸಲು ಮುಂದಾಗಬೇಕಿದೆ ಮತ್ತು ಡಬ್ಲ್ಯುಎಫ್ಐನ ಚುನಾವಣೆಗಳನ್ನು ನಡೆಸಲು ನಿಮ್ಮನ್ನು ಚುನಾವಣಾಧಿಕಾರಿಯಾಗಿ ನೇಮಿಸಲು ನಮಗೆ ಸಂತೋಷ. ನೀವು ಒಬ್ಬ ಸಹಾಯಕ ಚುನಾವಣಾಧಿಕಾರಿ ಮತ್ತು ಇತರ ಸಿಬ್ಬಂದಿಯನ್ನು ನೇಮಿಸಲು ಸೂಚಿಸಬಹುದು" ಎಂದು ಸಿಇಒ ಕಲ್ಯಾಣ್ ಚೌಬೆ ಪತ್ರದಲ್ಲಿ ಬರೆದಿದ್ದಾರೆ.
"ಜುಲೈ 4 ರಂದು ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಸಾಮಾನ್ಯ ಸಬೆಯಲ್ಲಿ ಚುನಾವಣೆಗಳನ್ನು ನಡೆಸಬೇಕಾಗಿದೆ ಮತ್ತು ಅದಕ್ಕೆ ಅನುಗುಣವಾಗಿ ಚುನಾವಣೆಯ ವೇಳಾಪಟ್ಟಿಯನ್ನು ತಯಾರು ಮಾಡಬೇಕಾಗುತ್ತದೆ. ನಿಮ್ಮ ದೃಢೀಕರಣವನ್ನು ನಾವು ಎದುರು ನೋಡುತ್ತೇವೆ ಮತ್ತು ಜುಲೈ 4ಕ್ಕೆ ಡಬ್ಲ್ಯುಎಫ್ಐಚುನಾವಣೆಗಳನ್ನು ಸುಗಮವಾಗಿ ನಡೆಸುತ್ತೇವೆ" ಎಂದು ಬರೆಯಲಾಗಿದೆ.
ನ್ಯಾಯಮೂರ್ತಿ ಮಹೇಶ್ ಮಿತ್ತಲ್ ಕುಮಾರ್ ಅವರು ಎಸ್ಜಿಎಂ ಮತ್ತು ಚುನಾವಣೆಯ ದಿನಾಂಕವನ್ನು ಸ್ವಂತವಾಗಿ ನಿರ್ಧರಿಸಬಹುದು ಮತ್ತು ಜುಲೈ 4 ಅಥವಾ ಕೆಲವು ದಿನಗಳ ನಂತರ ಚುನಾವಣೆಯನ್ನು ನಡೆಸುವುದು ಅವರಿಗೆ ಬಿಟ್ಟದ್ದು ಎಂದು ಮೂಲಗಳು ತಿಳಿಸಿವೆ.
ಕೇಂದ್ರಾಡಳಿತ ಪ್ರದೇಶಗಳಾದ ಚಂಡೀಗಢ ಮತ್ತು ದೆಹಲಿ ಸೇರಿದಂತೆ ಡಬ್ಲ್ಯುಎಫ್ಐ 25 ಅಂಗಸಂಸ್ಥೆಗಳನ್ನು ಹೊಂದಿದೆ. ಪ್ರತಿ ರಾಜ್ಯ ಘಟಕವು ಇಬ್ಬರು ಪ್ರತಿನಿಧಿಗಳನ್ನು ಕಳುಹಿಸಬಹುದು . ಪ್ರತಿ ಪ್ರತಿನಿಧಿಯು ಒಂದು ಮತವನ್ನು ಹೊಂದಿರಬೇಕು. ಆದ್ದರಿಂದ, ಡಬ್ಲ್ಯುಎಫ್ಐ ಚುನಾವಣೆಗಳಿಗಾಗಿ ಚುನಾವಣಾ ಕಾಲೇಜು 50 ಮತಗಳನ್ನು ಒಳಗೊಂಡಿರುತ್ತದೆ.
ಡಬ್ಲ್ಯುಎಫ್ಐ ಸಂವಿಧಾನದ ಪ್ರಕಾರ ರಾಜ್ಯ ಘಟಕಗಳು ತಮ್ಮ ಕಾರ್ಯಕಾರಿ ಸಂಸ್ಥೆಗಳ ಸದಸ್ಯರಾಗಿರುವ ಪ್ರತಿನಿಧಿಗಳನ್ನು ಮಾತ್ರ ನಾಮನಿರ್ದೇಶನ ಮಾಡಬಹುದು. ಬ್ರಿಜ್ ಭೂಷಣ್ ಸಿಂಗ್ ಅವರಿಗೆ ಸಂಬಂಧಿಸಿದ ಅರ್ಹ ಅಭ್ಯರ್ಥಿಗಳು ಚುನಾವಣೆಗೆ ನಾಮಪತ್ರ ಸಲ್ಲಿಸಿದರೆ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಬ್ರಿಜ್ ಭೂಷಣ್ ಸಿಂಗ್ ಅವರ ಪುತ್ರ ಕರಣ್ ಹಿಂದಿನ ಡಬ್ಲ್ಯುಎಫ್ಐ ಸೆಟಪ್ನಲ್ಲಿ ಉಪಾಧ್ಯಕ್ಷರಾಗಿದ್ದರು ಮತ್ತು ಯುಪಿ ಕುಸ್ತಿ ಅಸೋಸಿಯೇಷನ್ನೊಂದಿಗೆ ಸಹ ಸಂಬಂಧ ಹೊಂದಿದ್ದಾರೆ. ಅವರ ಅಳಿಯ ವಿಶಾಲ್ ಸಿಂಗ್ ಬಿಹಾರ ಕುಸ್ತಿ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ. ಅವರಿಬ್ಬರೂ ರಾಜ್ಯ ಪಾಲಿಕೆ ಪ್ರತಿನಿಧಿಗಳಾಗಿ ಸ್ಪರ್ಧಿಸಲು ಅರ್ಹರಾಗಿದ್ದಾರೆ.
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್








Click it and Unblock the Notifications