ರಾಮಾಯಣ, ಮಹಾಭಾರತದ ಕತೆ ಹೇಳಲಿವೆ ಅಂಚೆ ಚೀಟಿಗಳು
ನವದೆಹಲಿ, ಸೆಪ್ಟೆಂಬರ್. 03: ರಾಮಾಯಣ ಮತ್ತು ಮಹಾಭಾರತಕ್ಕೆ ಹೊಸ ಅರ್ಥ ಕಲ್ಪಿಸಲು ಮುಂದಾಗಿರುವ ಕೇಂದ್ರ ಸರ್ಕಾರ ಮಹಾಕಾವ್ಯಗಳ ಸನ್ನಿವೇಶ ಆಧರಿಸಿ ಅಂಚೆ ಚೀಟಿ ಹೊರತರಲು ನಿರ್ಧಾರ ಮಾಡಿದೆ.
ಕೇಂದ್ರ ಸರ್ಕಾರ ರಾಮಾಯಣ, ಮಹಾಭಾರತ ಒಳಗೊಂಡಂತೆ ಸ್ವಾತಂತ್ರ್ಯ ಸೇನಾನಿಗಳಾದ ಬುತುಕೇಶ್ವರ್ ದತ್, ಸುಖದೇವ್, ಅಶ್ಫಕ್ ಉಲ್ಲಾಖಾನ್, ಚಂದ್ರಶೇಖರ್ ಆಜಾದ್, ಭಗತ್ ಸಿಂಗ್, ರಾಜಗುರು ಮತ್ತು ಗಾಯಯ ಮೊಹಮದ್ ರಫಿ, ಕಿಶೋರ್ ಕುಮಾರ್ ಭಾವಚಿತ್ರಗಳನ್ನು ಒಳಗೊಂಡ ಅಂಚೆ ಚೀಟಿ ಹೊರತರಲಿದೆ ಎಂದು ಕೇಂದ್ರ ಟೆಲಿಕಾಂ ಸಚಿವ ರವಿಶಂಕರ್ ತಿಳಿಸಿದ್ದಾರೆ.

ಮಹಾ ಕಾವ್ಯಗಳಿಗೆ, ಸ್ವಾತಂತ್ರ್ಯ ಸೇನಾನಿಗಳಿಗೆ ನಮನ ಸಲ್ಲಿಕೆ ಮಾಡುವುದು ನಮ್ಮ ಪ್ರತಿದಿನದ ಕೆಲಸವಾಗಬೇಕು. ಅವರ ಸ್ಮರಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಂಚೆ ಚೀಟಿ ಮುದ್ರಣಕ್ಕೆ ಮುಂದಾಗಿದೆ ಎಂದು ತಿಳಿಸಿದರು.
ಮಹಿಳೆಯರ ಸಬಲೀಕರಣ ಕುರಿತಾದ ಅಂಚೆ ಚೀಟಿ ಬಿಡುಗಡೆ ಮಾಡಿದ ಕೇಂದ್ರ ಸಚಿರು, ದೇಶದಲ್ಲಿ ಮಹಿಳಾ ಪರ ಚಿಂತನೆಗಳಿಗೆ ಅದರದ್ದೇ ಆತ ಇತಿಹಾಸವಿದೆ. ಶಂಕರಾಚಾರ್ಯರ ಕಾಲದಿಂದಲೂ ಮಹಿಳೆಯರಿಗೆ ಉನ್ನತ ಸ್ಥಾನವನ್ನೇ ನೀಡಿಕೊಂಡು ಬರಲಾಗಿದೆ. ಸರ್ಕಾರ ಇದೆಲ್ಲವನ್ನು ಮತ್ತೊಮ್ಮೆ ಸ್ಮರಿಸಿಕೊಳ್ಳಲು ಅಂಚೆ ಚೀಟಿ ಹೊರ ತಂದಿದೆ ಎಂದು ಹೇಳಿದರು.
ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಕಾರ್ಯಕ್ರಮದಲ್ಲಿ ಹಾಜರಿದ್ದು, ಮುಂದುವರಿದ ದೇಶಗಳಿಗೆ ಹೋಲಿಸಿದರೆ ಭಾರತದಲ್ಲೇ ಮಹಿಳಾ ಸ್ವಾತಂತ್ರ್ಯ ಬಹಳ ಹಿಂದಿನಿಂದಲೇ ಜಾರಿಯಲ್ಲಿತ್ತು ಎಂದು ಹೇಳಿದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications