ರಾಷ್ಟ್ರಪತಿ ಚುನಾವಣೆ ಕ್ರಾಸ್ ವೋಟಿಂಗ್: ಕಾಂಗ್ರೆಸ್ಸಿಗೆ ಭಾರೀ ಮುಖಭಂಗ?
ಸೋಮವಾರ ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ, ಬಿಎಸ್ಪಿ, ಆಮ್ ಆದ್ಮಿ ಪಕ್ಷದ ಶಾಸಕರು ಅಡ್ಡಮತದಾನ ಮಾಡಿದ್ದಾರೆಂದು ಇಂಡಿಯಾ ಟುಡೇ ಪತ್ರಿಕೆ ವರದಿ ಮಾಡಿದೆ.
ದೇಶದ ಪರಮೋಚ್ಚ ಹುದ್ದೆ ರಾಷ್ಟ್ರಪತಿ ಚುನಾವಣೆಯಲ್ಲೂ ಅಡ್ಡ ಮತದಾನ ನಡೆದಿದೆಯೇ? ತಮ್ಮ ತಮ್ಮ ಪಕ್ಷಗಳ ವಿಪ್ ಉಲ್ಲಂಘಿಸಿ ಶಾಸಕರು, ಸಂಸದರು ಅಡ್ಡ ಮತದಾನ ಮಾಡುವುದನ್ನು ಕೇಳಿದ್ದೇವೆ. ಆದರೆ ರಾಷ್ಟ್ರಪತಿ ಚುನಾವಣೆಯಲ್ಲೂ ಕ್ರಾಸ್ ವೋಟಿಂಗ್ ನಡೆಯುತ್ತದೆಯೆಂದರೆ ಅಚ್ಚರಿ ಪಡಲೇಬೇಕು.
ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ, ಆಮ್ ಆದ್ಮಿ ಪಕ್ಷದ ಶಾಸಕರು ಅಡ್ಡಮತದಾನ ಮಾಡಿದ್ದಾರೆಂದು ಇಂಡಿಯಾ ಟುಡೇ ವರದಿ ಮಾಡಿದೆ. ಹೀಗಾಗಿ, ರಾಷ್ಟ್ರಪತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಹಿನ್ನಡೆ ಗ್ಯಾರಂಟಿ.
ಈ ಎಲ್ಲಾ ಪಕ್ಷದ ಶಾಸಕರು ಯುಪಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್ ಅವರನ್ನು ಬೆಂಬಲಿಸಿದ್ದವು. ಅಡ್ದಮತದಾನದ ಅಗತ್ಯವಿಲ್ಲದೆಯೇ ಗೆಲುವು ನಿಶ್ಚಿತವಾಗಿದ್ದ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ರಾಮ್ ನಾಥ್ ಕೋವಿಂದ್, ಕ್ರಾಸ್ ವೋಟಿಂಗ್ ನಂತರ ರಾಷ್ಟ್ರಪತಿ ಹುದ್ದೆಗೇರುವುದು ಇನ್ನಷ್ಟು ಪಕ್ಕಾ ಆಗಿದೆ.
ಶೇ. 99.61 ಸಂಸದರು ಮತ್ತು ಶೇ. 99.37 ಶಾಸಕರು ಸೋಮವಾರ (ಜುಲೈ 17) ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ತಮ್ಮ ಮತ ಚಲಾಯಿಸಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಹತ್ತು ನಿಮಿಷ ಸರತಿಯಲ್ಲಿ ನಿಂತು ಮತ ಚಲಾಯಿಸಿದ್ದು ವಿಶೇಷ.
ಇದೇ ಗುರುವಾರ, ಜುಲೈ 20ರಂದು ಫಲಿತಾಂಶ ಹೊರಬೀಳಲಿದೆ. ಇಂಡಿಯಾ ಟುಡೇ ವರದಿ ಪ್ರಕಾರ ಐದು ರಾಜ್ಯಗಳಲ್ಲಿ ಅಡ್ಡಮತದಾನ ನಡೆದಿದೆ. ಕ್ರಾಸ್ ವೋಟಿಂಗ್ ನಡೆದ ಐದು ರಾಜ್ಯಗಳಾವುವು? ಮುಂದೆ ಓದಿ..

ಐದು ರಾಜ್ಯಗಳಲ್ಲಿ ಅಡ್ಡಮತದಾನ
ತ್ರಿಪುರಾ, ಉತ್ತರಪ್ರದೇಶ, ದೆಹಲಿ,ಪಂಜಾಬ್ ಮತ್ತು ಹರ್ಯಾಣ ರಾಜ್ಯಗಳ ಎನ್ಡಿಎಯೇತರ ಶಾಸಕರು ವಿಪ್ ಉಲ್ಲಂಘಿಸಿ ರಾಷ್ಟ್ರಪತಿ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ಪರ ಮತಚಲಾಯಿಸಿದ್ದಾರೆಂದು ವರದಿಯಾಗಿದೆ. ಹೀಗಾಗಿ ಮತಗಳ ವಿಚಾರದಲ್ಲಿ ಈಗಾಗಲೇ ಸೇಫ್ ಆಗಿರುವ ಕೋವಿಂದ್ ಗೆಲುವು ಮತ್ತಷ್ಟು ಸನಿಹವಾಗಿದೆ.

ಕಾಂಗ್ರೆಸ್, ಆಮ್ ಆದ್ಮಿ, ಲೋಕದಳದ ಶಾಸಕರ ಅಡ್ಡಮತದಾನ
ಪಂಜಾಬ್ ಮತ್ತು ಹರ್ಯಾಣದಲ್ಲಿ ಕಾಂಗ್ರೆಸ್, ಆಮ್ ಆದ್ಮಿ ಮತ್ತು ರಾಷ್ಟ್ರೀಯ ಲೋಕದಳದ ಶಾಸಕರು ಅಡ್ಡಮತದಾನ ಮಾಡಿದ್ದಾರೆ. ಆಮ್ ಆದ್ಮಿ ಪಕ್ಷ ತಮ್ಮ ಬೆಂಬಲವನ್ನು ಮೀರಾ ಕುಮಾರ್ ಅವರಿಗೆ ಘೋಷಿಸಿದ್ದರೂ, ಈ ವಿಚಾರದಲ್ಲಿ ಆಮ್ ಆದ್ಮಿ ಪಕ್ಷದ ಶಾಸಕರು ಭಿನ್ನ ನಿಲುವನ್ನು ತಾಳಿದ್ದರು. ಇಲ್ಲಿ ರಾಮ್ ನಾಥ್ ಪರ ಮತ ಚಲಾಯಿಸಿದ್ದೇವೆಂದು ಆಮ್ ಆದ್ಮಿ ಪಕ್ಷದ ಸುಕ್ಪಾಲ್ ಸಿಂಗ್ ಬಣ ಹೇಳಿದೆ.

ಕ್ರಾಸ್ ವೋಟಿಂಗ್
ಹರ್ಯಾಣದ ಸಿಎಂ ಮನೋಹರ್ ಲಾಲ್ ಖಟ್ಟರ್ ನೀಡಿರುವ ಹೇಳಿಕೆ ಕ್ರಾಸ್ ವೋಟಿಂಗ್ ನಡೆದಿದ್ದಕ್ಕೆ ಮತ್ತಷ್ಟು ಪುಷ್ಟಿಯನ್ನು ನೀಡಿದೆ. 75 ಶಾಸಕರು ನಮ್ಮ ಅಭ್ಯರ್ಥಿಗೆ ಮತಚಲಾಯಿಸಿದ್ದಾರೆಂದು ಖಟ್ಟರ್ ಹೇಳಿದ್ದಾರೆ. ಬಿಜೆಪಿ 47 ಸದಸ್ಯರನ್ನು ಮಾತ್ರ ಹೊಂದಿದೆ. ಐದು ಬಿಎಸ್ಪಿ ಶಾಸಕರು ಕೋವಿಂದ್ ಅವರಿಗೆ ಬೆಂಬಲ ಸೂಚಿಸಿದ್ದರು. ಹಾಗಾಗಿ, ಹರ್ಯಾಣದಲ್ಲಿ ರಾಷ್ಟ್ರೀಯ ಲೋಕದಳ ಮತ್ತು ಕಾಂಗ್ರೆಸ್ ಶಾಸಕರಿಂದ ಕ್ರಾಸ್ ವೋಟಿಂಗ್ ನಡೆದಿರುವುದು ನಿಶ್ಚಿತ.

ದೆಹಲಿ ಮತ್ತು ತ್ರಿಪುರಾದಲ್ಲಿ ಅಡ್ಡಮತದಾನ
ಇನ್ನು ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಶಾಸಕರು ಮತ್ತು ತ್ರಿಪುರಾದಲ್ಲಿ ತೃಣಮೂಲ ಕಾಂಗ್ರೆಸ್ಸಿನ ಉಚ್ಚಾಟಿತ ಶಾಸಕರು ಎನ್ಡಿಎ ಅಭ್ಯರ್ಥಿ ಪರವಾಗಿ ಮತ ಚಲಾಯಿಸಿರುವ ಸಾಧ್ಯತೆಯಿದೆ.

ಬಿಜೆಪಿ ವಿರುದ್ದ ಐಕ್ಯತೆ ಪ್ರದರ್ಶಿಸಲು ಕಾಂಗ್ರೆಸ್ಸಿಗೆ ಕಷ್ಟ
ಉತ್ತರಪ್ರದೇಶದಲ್ಲಿ ಸಮಾಜವಾದಿ ಮತ್ತು ಬಹುಜನ ಸಮಾಜವಾದಿ ಪಕ್ಷದ ಅಭ್ಯರ್ಥಿಗಳೂ ಅಡ್ಡ ಮತದಾನ ನಡೆಸಿರಬಹುದೆಂದು ಶಂಕಿಸಲಾಗಿದೆ. ಒಟ್ಟಿನಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟಕ್ಕೆ ನಿರೀಕ್ಷಿಸಿದಷ್ಟು ಮತ ದಕ್ಕದೇ ಮುಖಭಂಗ ಆಗುವ ಸಾಧ್ಯತೆ ಹೆಚ್ಚು. ಇದು ಮುಂದಿನ ದಿನಗಳಲ್ಲಿ ಬಿಜೆಪಿ ವಿರುದ್ದ ಐಕ್ಯತೆ ಪ್ರದರ್ಶಿಸಲು ಕಾಂಗ್ರೆಸ್ಸಿಗೆ ಕಷ್ಟವಾಗಬಹುದು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications