Indian Railway: ರೈಲಿನಲ್ಲಿ ಪಟಾಕಿ ಸಾಗಿಸಿದ್ರೆ ಎಷ್ಟು ವರ್ಷ ಜೈಲು ಗೊತ್ತಾ?
Indian Railway: ಇದೀಗ ದೇಶಾದ್ಯಂತ ದೀಪಾವಳಿ ಸಂಭ್ರಮ ಮನೆ ಮಾಡಿದೆ. ಇನ್ನು ಜನರು ಪಟಾಕಿಗಳನ್ನು ಹೊಡೆಯುವ ಹುಮ್ಮಸ್ಸಿನಲ್ಲಿರುತ್ತಾರೆ. ಆದ್ದರಿಂದ ಈ ವೇಳೆ ಕಡಿಮೆ ದರ ಹಿನ್ನೆಲೆ ಪಟಾಕಿಗಳನ್ನು ನಗರ ಪ್ರದೇಶಗಳಿಂದ ತಮ್ಮ ಊರಿಗೆ ತೆಗೆದುಕೊಂಡು ಹೋಗುವವರು ಹೆಚ್ಚಿನ ಪ್ರಮಾಣದಲ್ಲಿರುತ್ತಾರೆ. ಆದ್ದರಿಂದ ರೈಲ್ವೆ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಎಚ್ಚರಿಕೆ ಸಂದೇಶವೊಂದನ್ನು ರವಾನಿಸಿದೆ.
ಇನ್ನು ಸಾಮಾನ್ಯವಾಗಿ ಬಸ್ಗಳಿಗಿಂತ ರೈಲಿನಲ್ಲೇ ಹೆಚ್ಚು ಮಂದಿ ಪ್ರಯಾಣ ಬೆಳೆಸುಯತ್ತಾರೆ. ಕಡಿಮೆ ವೆಚ್ಚ, ಸುರಕ್ಷತೆ, ವಿಶ್ರಾಂತಿ ಕೊಠಡಿಗಳು ಮತ್ತು ಪ್ರಯಾಣದ ಸಮಯದಲ್ಲಿ ಮಲಗುವ ಸಾಮರ್ಥ್ಯ ಹಿನ್ನೆಲೆ ಬಹುತೇಕ ಮಂದಿ ರೈಲು ಪ್ರಯಾಣವನ್ನೇ ಆಯ್ಕೆ ಮಾಡುತ್ತಾರೆ. ಇನ್ನು ಇದೀಗ ದೀಪಾವಳಿ ಸಮಯ ಆದ್ದರಿಂದ ರೈಲ್ವೆ ಅಧಿಕಾರಿಗಳು ಕೆಲವೊಂದು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ.

ರೈಲ್ವೆ ರಕ್ಷಣಾ ಪಡೆ ಅಧಿಕಾರಿಗಳು ಗಸ್ತು ತಿರುಗುತ್ತಾರೆ, ಅನುಮಾನಾಸ್ಪದ ವ್ಯಕ್ತಿಗಳನ್ನು ಪ್ರಶ್ನಿಸುತ್ತಾರೆ ಮತ್ತು ಅಗತ್ಯ ಇದ್ದರೆ ಅವರನ್ನು ಕರೆದೊಯ್ದು ತನಿಖೆ ನಡೆಸುತ್ತಾರೆ. ಇನ್ನು ರೈಲಿನಲ್ಲಿ ಮದ್ಯಪಾನ ಮತ್ತು ಧೂಮಪಾನವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಲ್ಲದೆ, ಒಲೆಗಳು, ಗ್ಯಾಸ್ ಸಿಲಿಂಡರ್, ಸುಡುವ ರಾಸಾಯನಿಕಗಳು, ಆಮ್ಲಗಳು ಮತ್ತು ದುರ್ವಾಸನೆ ಬೀರುವ ವಸ್ತುಗಳನ್ನು ಕೂಡ ನಿಷೇಧಿಸಲಾಗಿದೆ.
ಪಟಾಕಿ ಹೊಯ್ಯುವವರ ಗಮನಕ್ಕೆ: ಭಾರತೀಯ ರೈಲ್ವೇ ಪಟಾಕಿ ಸೇರಿದಂತೆ ಸುಡುವ ವಸ್ತುಗಳನ್ನು ರೈಲಿನಲ್ಲಿ ಸಾಗಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಒಂದು ವೇಳೆ ನಿಯಮ ಮೀರಿ ಯಾರಾದ್ರೂ ಪಟಾಕಿಗಳನ್ನು ತೆಗೆದುಕೊಂಡು ಹೋದ್ರೆ, 3 ವರ್ಷ ಜೈಲು ಶಿಕ್ಷೆ ಅಥವಾ 5,000 ರೂಪಾಯಿ ದಂಡ ಕಟ್ಟಬೇಕಾಗುತ್ತದೆ ಎಂದು ಎಚ್ಚರಿಕೆ ಸಂದೇಶವನ್ನು ನೀಡಿದೆ.
ಪಟಾಕಿ ಸೇರಿದಂತೆ ಸ್ಫೋಟಕಗಳು ಮತ್ತು ಇಂಧನಗಳ ಸಾಗಣೆಯನ್ನು ರೈಲುಗಳಲ್ಲಿ ಹಿಂದಿನಿಂದಲೂ ನಿಷೇಧಿಸಲಾಗಿದೆ. ಹೆಚ್ಚಿನವರು ತಿಳಿದಿರುವಾಗ, ಕೆಲವರು ಈ ನಿಯಮಗಳನ್ನು ಉಲ್ಲಂಘಣೆ ಮಾಡುತ್ತಾರೆ. ಇದರಿಂದ ತಮ್ಮನ್ನು ಮತ್ತು ಇತರರನ್ನು ಅಪಾಯಕ್ಕೆ ಸಿಲುಕಿಸುತ್ತಾರೆ. ಆದ್ದರಿಂದ ಮೊದಲ ಅಪರಾಧಕ್ಕೆ 1,000 ರೂಪಾಯಿ ದಂಡ ಅಥವಾ 6 ತಿಂಗಳ ಜೈಲು ಶಿಕ್ಷೆ. ಮತ್ತೆ ಮತ್ತೆ ಇದೇ ಮುಂದುವರೆದರೆ, 3 ವರ್ಷಗಳ ಶಿಕ್ಷೆ ಅಥವಾ 5,000 ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications