ಪ್ರಯಾಣಿಕರೇ ಗಮನಿಸಿ: ರೈಲು ನಿಲ್ದಾಣ ತಲುಪುವ ಮುನ್ನ ಒಮ್ಮೆ ಪರಿಶೀಲಿಸಿ
ನವದೆಹಲಿ, ನ. 11: ಭಾರತೀಯ ರೈಲ್ವೇ ಶುಕ್ರವಾರ 223 ರೈಲುಗಳನ್ನು ರದ್ದುಗೊಳಿಸಿದೆ. ಅವುಗಳಲ್ಲಿ 163 ಸಂಪೂರ್ಣವಾಗಿ ರದ್ದುಗೊಳಿಸಲಾಗಿದ್ದು ಉಳಿದ ರೈಲುಗಳನ್ನು ವಿವಿಧ ಕಾರಣಗಳಿಂದ ಭಾಗಶಃ ರದ್ದುಗೊಳಿಸಲಾಗಿದೆ.
ಭಾರತೀಯ ರೈಲ್ವೆಯ ಹಲವಾರು ರೈಲ್ವೆ ವಲಯಗಳಲ್ಲಿ ಟ್ರ್ಯಾಕ್ ನಿರ್ವಹಣೆ ಮತ್ತು ಹವಾಮಾನ ಪರಿಸ್ಥಿತಿಗಳನ್ನು ಒಳಗೊಂಡಿರುವ ವಿವಿಧ ಕಾರಣಗಳಿಂದಾಗಿ ಭಾರತೀಯ ರೈಲ್ವೇಯು ಪ್ಯಾಸೆಂಜರ್ ರೈಲುಗಳ ಸೇವೆಯನ್ನು ರದ್ದುಗೊಳಿಸಿದೆ. ಇದರ ವಿವರಗಳನ್ನು ರೈಲ್ವೇ ವೆಬ್ಸೈಟ್ಗಳಲ್ಲಿ ಪರಿಶೀಲಿಸಬಹುದು.
ಹೀಗಾಗಿ ಈಗಾಗಲೇ ಟಿಕೆಟ್ ಬುಕ್ ಮಾಡಿರುವವರು ಅಥವಾ ಬೇರೆ ಊರಿಗಳಿಗೆ ಹೋಗಲು ರೈಲು ಸೇವೆ ಬಳಸುವವರು ಒಮ್ಮೆ ತಮ್ಮ ರೈಲುಗಳು ಇಂದು ಪ್ರಯಾಣಕ್ಕೆ ಸಿಗಲಿವೆಯೇ ಎಂಬುದನ್ನು ಪರಿಶೀಲಿಸಿಕೊಳ್ಳುವುದು ಉತ್ತಮ.

ಇನ್ನು ಬೆಂಗಳೂರಿಗೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಆಗಮಿಸಿರುವ ಹಿನ್ನೆಲೆಯಲ್ಲಿಯು ರೈಲು ವೇಳಾಪಟ್ಟಿಯಲ್ಲಿ ಬದಲಾವಣೆಯಾಗಲಿದೆ. ಭದ್ರತಾ ದೃಷ್ಟಿಯಿಂದ ಕೆಲವು ರೈಲುಗಳನ್ನು ರದ್ದುಗೊಳಿಸಿದ್ದು, ಮತ್ತಷ್ಟು ರೈಲುಗಳನ್ನು ಮಾರ್ಗ ಬದಲಾವಣೆ ಮಾಡಲಾಗಿದೆ.
ಇದರಲ್ಲಿ ಮೆಮೂ ಮತ್ತು ಡೆಮೊ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ. 01765 SBC-WFD ಯುಆರ್ ಮೆಮು ಎಕ್ಸ್ಪ್ರೆಸ್ ಭಾಗಶಃ ರದ್ದಾಗಿದೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಿಂದ - ವೈಟ್ಫೀಲ್ಡ್ ತೆರಳಬೇಕಿತ್ತು.

ಬಂಗಾರಪೇಟೆ ಮತ್ತು ಬೆಂಗಳೂರಿನ ನಡುವೆ ಪ್ರಯಾಣಿಸುವ ಮೈಸೂರು ಮೆಮೋ ರೈಲು, ಬೆಂಗಳೂರು - ತುಮಕೂರು ನಡುವಿನ ಮೆಮೋ ರೈಲು ಭಾಗಶಃ ರದ್ದಾಗಿದೆ. ಬೆಂಗಳೂರು - ಹಾಸನ ನಡುವಿನ ಡೆಮೋ ರೈಲು ಭಾಗಶಃ ರದ್ದಾಗಿದೆ.
ಇನ್ನು, ಅಕ್ಟೋಬರ್ 2022 ರವರೆಗೆ 2022-23 ಹಣಕಾಸು ವರ್ಷದಲ್ಲಿ 1,223 ಕಿಮೀ ವಿದ್ಯುದ್ದೀಕರಣವನ್ನು ರೈಲ್ವೆ ಸಾಧಿಸಿದೆ. "ಭಾರತೀಯ ರೈಲ್ವೇ ತನ್ನ ಸಂಪೂರ್ಣ ಬ್ರಾಡ್ ಗೇಜ್ ನೆಟ್ವರ್ಕ್ನ ವಿದ್ಯುದ್ದೀಕರಣದ ಮಹತ್ವಾಕಾಂಕ್ಷೆಯ ಯೋಜನೆಯನ್ನು ಪ್ರಾರಂಭಿಸಿದೆ. ಇದು ಉತ್ತಮ ಇಂಧನ ಶಕ್ತಿಯ ಬಳಕೆಗೆ ಕಾರಣವಾಗುತ್ತದೆ. ಇದರ ಪರಿಣಾಮವಾಗಿ ಹೆಚ್ಚಿದ ಥ್ರೋಪುಟ್, ಕಡಿಮೆ ಇಂಧನ ವೆಚ್ಚ ಮತ್ತು ಅಮೂಲ್ಯವಾದ ವಿದೇಶಿ ವಿನಿಮಯದಲ್ಲಿ ಉಳಿತಾಯವಾಗುತ್ತದೆ" ಎಂದು ಸಚಿವಾಲಯ ಹೇಳಿದೆ.
ಈ ಹಿಂದೆ, 2020-21ರಲ್ಲಿ 6,015 ಕಿಮೀ ವಿದ್ಯುದ್ದೀಕರಣವಾಗಿತ್ತು.
-
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ












Click it and Unblock the Notifications