Indian Railways: ಭಾರತೀಯ ರೈಲ್ವೆ ಟಿಕೆಟ್ ದರ ತೀರಾ ಅಗ್ಗ: ದೈನಂದಿನ ರೈಲು ಸೇವೆ 11,740 ಕ್ಕೆ ಹೆಚ್ಚಳ..
ನವದೆಹಲಿ, ಡಿಸೆಂಬರ್ 11: ಭಾರತೀಯ ರೈಲ್ವೆಯ ದೈನಂದಿನ ಸೇವೆಗಳಲ್ಲಿ ಗಣನೀಯವಾಗಿ ಹೆಚ್ಚಾಗಿದೆ. ಜೊತೆಗೆ 2020ರ ಮೊದಲಿನ ವರ್ಷಗಳಿಗೆ ಹೋಲಿಸಿದರೆ ಸೇವೆಯನ್ನು ಇಲಾಖೆ ಹೆಚ್ಚಿಸಿದೆ. ಇತರ ದೇಶಗಳಿಗೆ ಹೋಲಿಸಿದರೆ ಭಾರದಲ್ಲಿ ರೈಲ್ವೆ ಟಿಕೆಟ್ ದರ ಅಗ್ಗವಾಗಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು ಮಾಹಿತಿ ನೀಡಿದರು.
ಸಂಸತ್ ಚಳಿಗಾಲ ಅಧಿವೇಶನದಲ್ಲಿ ವಿಪಕ್ಷ ನಾಯಕರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಭಾರತೀಯ ರೈಲ್ವೆಯ ದೈನಂದಿನ ರೈಲು ಸೇವೆಗಳು ಇದೇ 2025ರ ನವೆಂಬರ್ ಹೊತ್ತಿಗೆ 11,740 ಕ್ಕೆ ಏರಿಕೆ ಆಗಿದೆ. ಈ ಸಂಖ್ಯೆ ಕೋವಿಡ್ -19 ಗಿಂತ ಮೊದಲಿನ ವರ್ಷದಲ್ಲಿ 11,283 ರಷ್ಟು ಇತ್ತು ಎಂದು ಅವರು ಅಂಕಿ ಸಂಖ್ಯೆ ಸಮೇತ ವಿವರಿಸಿದರು.

ರೈಲ್ವೆ ಮೇಲ್ ಮತ್ತು ಎಕ್ಸ್ಪ್ರೆಸ್ ಸೇವೆಗಳ ಸಂಖ್ಯೆ 1,768 ರಿಂದ 2,238 ಕ್ಕೆ ವಿಸ್ತರಿಸಿ ಪ್ರಗತಿ ಕಂಡಿದೆ. ರೈಲು ಪ್ರಯಾಣಿಕರ ಸುರಕ್ಷತೆ ಮತ್ತು ರೈಲು ಸಮಯಪಾಲನೆ ಹೆಚ್ಚಿಸುವ ಗುರಿಯನ್ನು ಹೊಂದಿದ್ದು, ಐಐಟಿ ಬಾಂಬೆ ಸಹಕಾರದಲ್ಲಿ ಸೂಕ್ತ ವೇಳಾಪಟ್ಟಿ ಪ್ರಕಟಿಸುವುದು, ತರ್ಕಬದ್ಧಗೊಳಿಸುವಲ್ಲಿ ಇಲಾಖೆ ಹೆಚ್ಚಿನ ಗಮನ ಹರಿಸಿದೆ. ಈ ಮೂಲಕ ರೈಲು ಪ್ರಯಾಣಿಕರಿಗೆ ಸಕಾಲಕ್ಕೆ ಸೇವೆ ಮತ್ತು ಸಮಯ ಮೌಲ್ಯ ಕುರಿತು ತಿಳಿಸಿದರು.
ವಂದೇ ಭಾರತ್ ರೈಲು, ಸ್ಲೀಪರ್ ರೈಲು ಸೇವೆ
ದೇಶದಲ್ಲಿ ಸದ್ಯ 164 ವಂದೇ ಭಾರತ್ ರೈಲುಗಳು (Vande Bharat Express) ನಿತ್ಯ ಸೇವೆ ನೀಡುತ್ತಿವೆ. ಇದರಲ್ಲಿ ಪ್ರಾಯೋಗಿಕ ಹಂತದಲ್ಲಿ ಹೊಸ ಸ್ಲೀಪರ್ ರೈಲು ಸೇರಿದೆ. ಅದರ ಕಾರ್ಯಾಚರಣೆ ಇನ್ನೇನು ಆರಂಭವಾಗಲಿದೆ. ಈ ವಿಬಿ ಸ್ಲೀಪರ್ ರೈಲುಗಳಲ್ಲಿ ಕವಚ ಸುರಕ್ಷತಾ ತಂತ್ರಜ್ಞಾನ ವ್ಯವಸ್ಥೆ ಅಳವಡಿಸಲಾಗಿದೆ. ಇದರಿಂದ ಬ್ರೇಕಿಂಗ್, ತುರ್ತು ಪರಿಸ್ಥಿತಿಗಳಿಗಾಗಿ ವರ್ಧಿತ ಸಂವಹನ ಸೌಲಭ್ಯಗಳು ಸೇರಿದಂತೆ ಸುಧಾರಿತ ಸುರಕ್ಷತಾ ಕ್ರಮ ವ್ಯವಸ್ಥೆ ಲಭ್ಯವಾಗುತ್ತದೆ.
ಭಾರತೀಯ ರೈಲು ಸೇವೆ ಅಗ್ಗ..!
ಸದನದಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅಶ್ವಿನಿ ವೈಷ್ಣವ್ ಅವರು, ಅಭಿವೃದ್ಧಿ ಹೊಂದಿದ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ರೈಲು ಸೇವೆ ಅಗ್ಗವಾಗಿದೆ. ಇಲ್ಲಿ ರೈಲು ಟಿಕೆಟ್ ದರ ಎಲ್ಲ ವರ್ಗದವರಿಗೆ ಕೈಗೆಟುಕುವಂತಿವೆ. ಟಿಕೆಟ್ ಬೆಲೆಗಳ ದುಬಾರಿ ಆಗದಂತೆ ನೋಡಿಕೊಳ್ಳಲು ಭಾರತೀಯ ರೈಲ್ವೆ ಕಳೆದ ವರ್ಷ 60,000 ಕೋಟಿ ರೂಪಾಯಿ ಸಬ್ಸಿಡಿ ಒದಗಿಸಿದೆ ಎಂದು ತಿಳಿಸಿದರು.
ಭಾರತಕ್ಕೆ ಹೋಲಿಸಿದರೆ ವಿದೇಶಗಳಲ್ಲಿ ರೈಲು ಸೇವೆ ಸುಮಾರು 05 ಅಥವಾ 10 ಪ್ರತಿಶತದಷ್ಟು ಹೆಚ್ಚಿದೆ. ಭಾರತದಲ್ಲಿ ರೈಲು ಮೂಲಸೌಕರ್ಯ ಅಭಿವೃದ್ಧಿಪಡಿಸಲಾಗುತ್ತಿದೆ. ಪ್ರಯಾಣಿಕರಿಗೆ ಟಿಕೆಟ್ ದರ ದುಬಾರಿ ಅನ್ನಿಸದಂತೆ ನೋಡಿಕೊಳ್ಳಲಾಗಿದೆ ಎಂದು ಲೋಕಸಭೆಯಲ್ಲಿ, 'ಕೋವಿಡ್ ಪೂರ್ವದಂತೆ ಹಿರಿಯ ನಾಗರಿಕರಿಗೆ ರೈಲು ಟಿಕೆಟ್ ರಿಯಾಯಿತಿ ಮುಂದುವರಿಸುವ' ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.
-
ಹಿರಿಯ ನಾಗರಿಕರಿಗೆ ರೈಲ್ವೇ ನಿಯಮಗಳು 2026: ರಿಯಾಯಿತಿ ಇಲ್ಲದಿದ್ದರೂ ಸೌಲಭ್ಯಗಳು ಮುಂದುವರಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು












Click it and Unblock the Notifications