Ticket Booking Rule: ಗುಡ್ನ್ಯೂಸ್! ಅಕ್ಟೋಬರ್ 1ರಿಂದ ರೈಲ್ವೆ ಟಿಕೆಟ್ ಬುಕ್ಕಿಂಗ್ನಲ್ಲಿ ಹೊಸ ಕ್ರಮ ಜಾರಿ
ನವದೆಹಲಿ, ಸೆಪ್ಟಂಬರ್ 16: ರೈಲು ಟಿಕೆಟ್ ವ್ಯವಸ್ಥೆಯ ದುರುಪಯೋಗ ತಡೆಯುವ ಉದ್ದೇಶದಿಂದಾಗಿ ಭಾರತೀಯ ರೈಲ್ವೆ ಇಲಾಖೆ ಮುಂಗಡ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯಲ್ಲಿ ಬದಲಾವಣೆ ತರಲು ನಿರ್ಧರಿಸಿದೆ. ಟಿಕೆಟ್ ಬುಕಿಂಗ್ ಆರಂಭವಾದ ನಂತರದ ಮೊದಲ 15 ನಿಮಿಷಗಳಲ್ಲಿ ಸಾಮಾನ್ಯ ಕಾಯ್ದಿರಿಸಿದ ಟಿಕೆಟ್ಗಳನ್ನು ಆನ್ಲೈನ್ನಲ್ಲಿ ಬುಕಿಂಗ್ ಮಾಡಲು ಆಧಾರ್ ದೃಢೀಕರಣ ಕಡ್ಡಾಯಗೊಳಿಸಿ ಸೋಮವಾರ ಮಾಹಿತಿ ನೀಡಿದೆ.
ಕೇಂದ್ರ ರೈಲ್ವೆ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ, IRCTC ವೆಬ್ಸೈಟ್ ಅಥವಾ ಮೊಬೈಲ್ ಅಪ್ಲಿಕೇಶನ್ನಲ್ಲಿ ಈಗಾಗಲೇ ಆಧಾರ್-ದೃಢೀಕರಿಸಿದ ಬಳಕೆದಾರರು ಈ ಅವಕಾಶ ಪಡೆಯಲಬಹುದು. ಇವರಿಗೆ 15 ನಿಮಿಷಗಳ ಅವಧಿಯಲ್ಲಿ ಟಿಕೆಟ್ ಬುಕ್ ಮಾಡಲು ಸಾಧ್ಯವಾಗುತ್ತದೆ. ಸದ್ಯ ಈ ನಿಯಮವು ಅಕ್ಟೋಬರ್ 1 ರಿಂದ ಜಾರಿಗೆ ತರಲಾಗುವುದು ಎಂದು ರೈಲ್ವೆ ಸಚಿವಾಲಯ ಮಾಹಿತಿ ನೀಡಿದೆ.

ರೈಲ್ವೆ ಇಲಾಖೆಯ ಈ ನಿರ್ಧಾರಿಂದ ನೈಜ ಪ್ರಯಾಣಿಕರಿಗೆ ಟಿಕೆಟ್ ಸಿಗುವುದರ ಜೊತೆಗೆ ಟಿಕೆಟ್ ಬುಕ್ಕಿಂಗ್ ವೇಳೆ ಆಗುವ ತೊಂದರೆ, ಅನಗತ್ಯ ವ್ಯಕ್ತಿಗಳ ಪ್ರವೇಶ ತಪ್ಪುತ್ತದೆ. ಸಾಮಾನ್ಯ ಪ್ರಯಾಣಿಕರ ಆದ್ಯತೆ ಗಮನಿಸಿ ಈ ಕ್ರಮ ಜಾರಿಗೊಳಿಸಲಾಗುತ್ತದೆ. ಇನ್ನೂ ಕೌಂಟರ್ಗಳಲ್ಲಿ ಟಿಕೆಟ್ಗಳನ್ನು ಬುಕ್ ಮಾಡುವ ಸಮಯ, ನಿಯಮದಲ್ಲಿ ಬದಲಾವಣೆ ಇಲ್ಲ ಎಂದು ಇಲಾಖೆ ತಿಳಿಸಿದೆ.
ಕಾಯ್ದಿರಿಸಿದ ಟಿಕೆಟ್ಗಳನ್ನು ಬುಕ್ ಮಾಡುವಾಗ ಅಧಿಕೃತ ಏಜೆಂಟ್ ಗಳಿಗೆ ಮೊದಲು 10 ನಿಮಿಷಗಳ ನಿರ್ಬಂಧ ಮುಂದುವರಿಯುತ್ತದೆ. ಈ ಕ್ರಮವು ಭಾರತೀಯ ರೈಲ್ವೆ ತನ್ನ ಮೀಸಲಾತಿ ವ್ಯವಸ್ಥೆಯಲ್ಲಿನ ಸುಧಾರಣೆಯ ಭಾಗವಾಗಿದೆ. ಇತ್ತಿಚೆಗೆ ಜೂನ್ನಲ್ಲಿ ರೈಲು ಹೊರಡುವ 4 ಗಂಟೆಗಳ ಬದಲು 8 ಗಂಟೆಗಳ ಮೊದಲು ಮೀಸಲಾತಿ ಚಾರ್ಟ್ಗಳನ್ನು ಸಿದ್ಧಪಡಿಸುವುದಾಗಿ ಘೋಷಿಸಿತ್ತು. ಈ ಸೌಲಭ್ಯದಿಂದ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರಿಗೆ ಹೆಚ್ಚಿನ ಸ್ಪಷ್ಟತೆ ಸಿಗಲಿದೆ.
ರೈಲ್ವೆ ಮಾಹಿತಿ ವ್ಯವಸ್ಥೆಗಳ ಕೇಂದ್ರ (CRIS) ಅಭಿವೃದ್ಧಿಪಡಿಸುತ್ತಿರುವ ತನ್ನ ಪ್ರಯಾಣಿಕರ ಮೀಸಲಾತಿ ವ್ಯವಸ್ಥೆಯನ್ನು (PRS) ನವೀಕರಣ ಶೀಘ್ರವೇ ಮಾಡಲಾಗುತ್ತಿದೆ. ಒಮ್ಮೆ ಜಾರಿಯಾದ ನಂತರ ಹೊಸ PRS ಹಾಲಿ ಲೋಡ್ಗಿಂತ ಹತ್ತು ಪಟ್ಟು ಕೆಲಸ ನಿರ್ವಹಿಸಲಿದೆ. ನಿಮಿಷಕ್ಕೆ 1.5 ಲಕ್ಷ ಟಿಕೆಟ್ ಮತ್ತು 40 ಲಕ್ಷಕ್ಕೂ ಹೆಚ್ಚು ವಿಚಾರಣೆ ಪ್ರಕ್ರಿಯೆ ಮಾಡುತ್ತದೆ ಎಂದು ರೈಲ್ವೆ ಸಚಿವಾಲಯ ಮಾಹಿತಿ ನೀಡಿದೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications