ಸ್ವಚ್ಛ ಭಾರತ, ಸ್ವಚ್ಛ ರೈಲ್ವೆ ಅಭಿಯಾನ: ಪ್ರಯಾಣಿಕರಿಗೆ ಶುಚಿತ್ವದ ಪಾಠ
ನವದೆಹಲಿ, ಜೂನ್ 29: ಭಾರತೀಯ ರೈಲ್ವೆಯ ಬೋಗಿಗಳನ್ನು ಸರಿಯಾಗಿ ನಿರ್ವಹಣೆ ಮಾಡಲು ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ವಿನೂತನ ಹೆಜ್ಜೆಯನ್ನು ಇರಿಸಲಾಗಿದೆ. ಸ್ವಚ್ಛ ಭಾರತ, ಸ್ವಚ್ಛ ರೈಲ್ವೆ ಅಭಿಯಾನವನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ.
ದೇಶದ ರೈಲ್ವೆಯನ್ನು ಉತ್ತಮ ಮತ್ತು ಸ್ವಚ್ಛ ಸ್ಥಿತಿಯಲ್ಲಿ ಇರಿಸಲು ಹೊಸ ಮತ್ತು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇದರ ಭಾಗವಾಗಿ, ಭಾರತೀಯ ರೈಲ್ವೆ ಮಂಡಳಿಯ ಅಧ್ಯಕ್ಷರು, ಜಿಎಂ ಮತ್ತು ಡಿಆರ್ಎಂ ಈಗ ಸಾಮಾನ್ಯ ಮತ್ತು ಸ್ಲೀಪರ್ ಕೋಚ್ ಬೋಗಿಗಳಲ್ಲಿ ಸಾರ್ವಜನಿಕ ಸೌಕರ್ಯಗಳು, ಶುಚಿತ್ವದ ಬಗ್ಗೆ ನಿಗಾ ವಹಿಸಲಿದ್ದಾರೆ.
ಭಾರತೀಯ ರೈಲ್ವೆಗಳಲ್ಲಿನ ಮೂಲಭೂತ ಸೌಕರ್ಯಗಳ ನಿರ್ವಹಣೆ, ಸ್ವಚ್ಛತೆಯನ್ನು ಯಾವ ರೀತಿ ನಿಭಾಯಿಸಲಾಗುತ್ತದೆ ಎಂಬುದನ್ನು ರೈಲ್ವೆ ಅಧಿಕಾರಿಗಳು ಪ್ರಯಾಣಿಕರ ರೀತಿಯಲ್ಲೇ ಪ್ರಯಾಣಿಸಿ ಪತ್ತೆ ಮಾಡಲಿದ್ದಾರೆ. ನಿರ್ವಹಣೆಯಲ್ಲಿ ಲೋಪ ಕಂಡು ಬಂದರೆ ತಕ್ಷಣ ಅದನ್ನು ಸರಿಪಡಿಸುವುದರ ಜೊತೆಗೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.

ಸ್ವಚ್ಛತೆ ತಪಾಸಣೆಗಾಗಿ ಹಠಾತ್ ಭೇಟಿ
ಭಾರತೀಯ ರೈಲ್ವೆ ಹಿರಿಯ ಅಧಿಕಾರಿಗಳು ಇತ್ತೀಚೆಗೆ 544 ರೈಲುಗಳಲ್ಲಿನ ಸೌಲಭ್ಯಗಳ ಹಠಾತ್ ತಪಾಸಣೆಯನ್ನು ಹೊರತಂದಿದ್ದಾರೆ. ಇಲಾಖೆ ಅಧಿಕಾರಿಗಳು ಸಾಮಾನ್ಯ ಜನರಂತೆ ರೈಲಿನಲ್ಲಿ ಪ್ರಯಾಣಿಸಿ ಸ್ವಚ್ಛತೆ, ಊಟೋಪಚಾರ ಅಥವಾ ರೈಲುಗಳು ಮತ್ತು ಶೌಚಾಲಯಗಳ ದೀಪಗಳ ಸರಿಯಾದ ಸೌಲಭ್ಯವನ್ನು ಪರಿಶೀಲಿಸಿದರು. ಇದೇ ಮೊದಲ ಬಾರಿಗೆ ರೈಲ್ವೆ ಮಂಡಳಿ ಅಧಿಕಾರಿಗಳು ಸಾಮಾನ್ಯ ಪ್ರಯಾಣಿಕರಂತೆ ಪ್ರಯಾಣಿಸುತ್ತಿರುವುದು ಕಂಡು ಬಂದಿತು.

ಭಾರತೀಯ ರೈಲ್ವೆ ಅಭಿಯಾನ
ಭಾರತೀಯ ರೈಲ್ವೆಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಸ್ವಚ್ಛ ಭಾರತ, ಸ್ವಚ್ಛ ರೈಲು ಅಭಿಯಾನದ ಭಾಗವಾಗಿ ಜೂನ್ 24 ರಿಂದ ಎಲ್ಲಾ ವಲಯಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ನಡೆಸಲು ಭಾರತೀಯ ರೈಲ್ವೆ ನಿರ್ಧರಿಸಿದೆ.

ರೈಲ್ವೆ ನಿರ್ವಹಣೆ ಲೋಪ ಕಂಡು ಬಂದರೆ ಕ್ರಮ
ರೈಲ್ವೆ ಮಂಡಳಿಯ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ತಪಾಸಣೆಯ ಸಮಯದಲ್ಲಿ ರೈಲುಗಳಲ್ಲಿನ ಸೌಲಭ್ಯಗಳು ಮತ್ತು ಶುಚಿತ್ವವನ್ನು ಪರಿಶೀಲಿಸಲಾಗುತ್ತಿದೆ. ತಪಾಸಣೆ ವೇಳೆ ಪ್ರಯಾಣಿಕರ ದೂರು ಆಧರಿಸಿ ಆಯಾ ವಿಭಾಗದ ವಲಯದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿದು ಬಂದಿದೆ.

ಎರಡನೇ ಹಂತದ ಅಭಿಯಾನ ಹೇಗಿರುತ್ತೆ?
ಎರಡನೇ ಹಂತದ ಅಭಿಯಾನ ಶೀಘ್ರದಲ್ಲೇ ಆರಂಭವಾಗಲಿದೆ. ಮೊದಲ ಹಂತದ ಫಲಿತಾಂಶ ಬಂದ ನಂತರ, ಬಯೋ ಟಾಯ್ಲೆಟ್ನಿಂದ ದುರ್ವಾಸನೆ ಮತ್ತು ಉಸಿರುಗಟ್ಟಿಸುವ ಸಮಸ್ಯೆಯನ್ನು ಹೋಗಲಾಡಿಸಲು ಹೊಸ ತಂತ್ರಜ್ಞಾನ ಅಥವಾ ಶೌಚಾಲಯ ವಿನ್ಯಾಸದಲ್ಲಿನ ಬದಲಾವಣೆಗಳ ಕುರಿತು ಚರ್ಚೆ ನಡೆಯಲಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications