ಭಾರತೀಯ ರೈಲ್ವೆಯಿಂದ ಬಾಂಗ್ಲಾದೇಶಕ್ಕೆ ಆಮ್ಲಜನಕ ಪೂರೈಕೆ
ನವದೆಹಲಿ, ಜುಲೈ 25: ಇದೇ ಮೊದಲ ಬಾರಿಗೆ, ಭಾರತೀಯ ರೈಲ್ವೆಯ ಆಕ್ಸಿಜನ್ ಎಕ್ಸ್ಪ್ರೆಸ್ ರೈಲಿನಿಂದ ಅತಿಶೀಘ್ರವೇ ಬಾಂಗ್ಲಾದೇಶಕ್ಕೆ 10 ಕಂಟೈನರ್ಗಳಲ್ಲಿ 200 ಮೆಟ್ರಿಕ್ ಟನ್ ದ್ರವೀಕೃತ ವೈದ್ಯಕೀಯ ಆಮ್ಲಜನಕ ಸಾಗಣೆಯಾಗಲಿದೆ.
ಭಾರತೀಯ ರೈಲ್ವೆಯ ಆಕ್ಸಿಜನ್ ಎಕ್ಸ್ಪ್ರೆಸ್ ರೈಲು ಅತಿ ಶೀಘ್ರವೇ ಬಾಂಗ್ಲಾದೇಶಕ್ಕೆ ತನ್ನ ಪ್ರಯಾಣ ಬೆಳೆಸಲಿದೆ. ಇದೇ ಮೊದಲ ಬಾರಿಗೆ ಆಕ್ಸಿಜನ್ ಎಕ್ಸ್ಪ್ರೆಸ್ ರೈಲು ನೆರೆ ರಾಷ್ಟ್ರಕ್ಕೆ ತನ್ನ ಪ್ರಯಾಣ ಮತ್ತು ಸೇವಾ ಕಾರ್ಯಾಚರಣೆ ಆರಂಭಿಸುತ್ತಿದೆ. ಬಾಂಗ್ಲಾದೇಶದ ಬೆನಪೋಲ್ಗೆ 200 ಮೆಟ್ರಿಕ್ ಟನ್ ತೂಕದ ದ್ರವೀಕೃತ ವೈದ್ಯಕೀಯ ಆಮ್ಲಜನಕ ಸಾಗಿಸಲು ಆಗ್ನೇಯ ರೈಲ್ವೆ ಇಲಾಖೆಯು ಇಂದು ಚಕ್ರಧಾರ್ಪುರ್ ವಿಭಾಗದ ಟಾಟಾದಲ್ಲಿ ಬೇಡಿಕೆ ಪತ್ರ (ಇಂಡೆಂಟ್) ಸಲ್ಲಿಸಿದೆ.
Living upto our cultural ethos of "वसुधैव कुटुम्बकम्", Indian Railways under PM @NarendraModi ji's leadership is working diligently to help humanity's fight against COVID.
— Ashwini Vaishnaw (@AshwiniVaishnaw) July 24, 2021
The first-ever, #OxygenExpress left for Bangladesh with 200 MT of Liquid Medical Oxygen, this morning. pic.twitter.com/49c6HZON7o
200 ಮೆಟ್ರಿಕ್ ಟನ್ ದ್ರವೀಕೃತ ವೈದ್ಯಕೀಯ ಆಮ್ಲಜನಕವನ್ನು 10 ಕಂಟೈನರ್ಗಳಿಗೆ ಭರ್ತಿ ಮಾಡಿ, ಬೋಗಿಗಳಿಗೆ ತುಂಬಿ, ಆಕ್ಸಿಜನ್ ಎಕ್ಸ್ಪ್ರೆಸ್ ರೈಲು ಪ್ರಯಾಣಕ್ಕೆ ಸಜ್ಜುಗೊಳಿಸಲಾಗಿದೆ.

ಕೊರೊನಾ 2ನೇ ಅಲೆ ದೇಶದಲ್ಲಿ ವ್ಯಾಪಕವಾದಾಗ, ದೇಶದೆಲ್ಲೆಡೆ ಎದುರಾದ ವೈದ್ಯಕೀಯ ಆಮ್ಲಜನಕದ ಕೊರತೆ ನೀಗಿಸಲು ಆಕ್ಸಿಜನ್ ಎಕ್ಸ್ಪ್ರೆಸ್ ರೈಲುಗಳು, 2021 ಏಪ್ರಿಲ್ 24ರಂದು ಕಾರ್ಯಾಚರಣೆ ಆರಂಭಿಸಿದವು. ದೇಶದ 15 ರಾಜ್ಯಗಳಿಗೆ 35,000 ಮೆಟ್ರಿಕ್ ಟನ್ ಗಿಂತ ಹೆಚ್ಚಿನ ದ್ರವೀಕೃತ ವೈದ್ಯಕೀಯ ಆಮ್ಲಜನಕ ಸಾಗಿಸಲು 480ಕ್ಕಿಂತ ಹೆಚ್ಚಿನ ಆಕ್ಸಿಜನ್ ಎಕ್ಸ್ಪ್ರೆಸ್ ರೈಲುಗಳು ಕಾರ್ಯಾಚರಣೆ ನಡೆಸಿದವು.
ಭಾರತೀಯ ರೈಲ್ವೆಯು ಸಾಧ್ಯವಾದಷ್ಟು ಕಡಿಮೆ ಸಮಯದಲ್ಲಿ ಸಾಧ್ಯವಾದಷ್ಟು ಹೆಚ್ಚಿನ ದ್ರವೀಕೃತ ವೈದ್ಯಕೀಯ ಆಮ್ಲಜನಕವನ್ನು ತಲುಪಿಸಲು ಪ್ರಯತ್ನಿಸುತ್ತಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications