ರೈಲು ಪ್ರಯಾಣಿಕರ ಮೇಲೆ ಬೆಲೆ ಏರಿಕೆ ಹೊರೆ?
ನವದೆಹಲಿ, ಡಿ.14: ಇಂಧನ ಬೆಲೆ ಏರಿಕೆ ಹಿನ್ನೆಲೆಯಲ್ಲಿ 2015ರ ಜನವರಿಯಲ್ಲಿ ಮಂಡನೆಯಾಗಲಿರುವ ರೈಲು ಬಜೆಟ್ನಲ್ಲಿ ಪ್ರಯಾಣ ದರವನ್ನು ಗಣನೀಯವಾಗಿ ಏರಿಕೆ ಮಾಡುವ ಬಗ್ಗೆ ಇಲಾಖೆ ಸೂಚನೆ ನೀಡಿದೆ.
ಇತ್ತೀಚಿನ ಕೆಲ ತಿಂಗಳುಗಳಿಂದ ಇಂಧನ ಬೆಲೆ ಶೇ.4ಕ್ಕಿಂತ ಅಧಿಕ ಪ್ರಮಾಣದಲ್ಲಿ ಏರಿಕೆಯಾಗಿದ್ದು, ವೆಚ್ಚ ಸರಿದೂಗಿಸಲು ಪ್ರಯಾಣ ದರ ಏರಿಕೆ ಅನಿವಾರ್ಯವಾಗಿದೆ. ಬಜೆಟ್ನಲ್ಲಿ ರೈಲು ಪ್ರಯಾಣ ದರ ಏರಿಸಲೇಬೇಕಾಗುತ್ತದೆ.ಇದರಿಂದ ಸಾರ್ವಜನಿಕರಿಗೆ ಹೊರೆಯಾಗಲಿದೆ. ಆದರೆ ಜನತೆ ಅದನ್ನು ಭರಿಸುವುದು ಅನಿವಾರ್ಯ ಎಂದು ರೈಲ್ವೆ ಖಾತೆ ಸಚಿವ ಸುರೇಶ್ಪ್ರಭು ಅವರನ್ನು ಉಲ್ಲೇಖಿಸಿ ಅಧಿಕಾರಿ ತಿಳಿಸಿದ್ದಾರೆ.
ರೈಲು ಪ್ರಯಾಣ ಹಾಗೂ ಸರಕು ಸಾಗಣೆ ದರಗಳನ್ನು ಇಂಧನ ಬೆಲೆಯನ್ನು ಅನುಸರಿಸಿ ಪ್ರಯಾಣ ದರವನ್ನು ಪರಿಷ್ಕರಿಸಬೇಕಾಗುತ್ತದೆ. ಇಂಧನ ದರ ಶೇ.4ರಷ್ಟು ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಪ್ರಯಾಣದರ ಪರಿಷ್ಕರಣೆ ಅನಿವಾರ್ಯವಾಗಿದ್ದು, ಶೇ.4.2ರಷ್ಟು ಪ್ರಯಾಣಿಕರ ದರ ಹಾಗೂ ಶೇ1.4ರಷ್ಟು ಸರಕು ಸಾಗಣೆ ದರಗಳನ್ನು ಪರಿಷ್ಕರಣೆಗೊಳಪಡಿಸಲಾಗುವುದು.

ಈಗಾಗಲೇ ಘೋಷಣೆ ಮಾಡಿರುವ ಯೋಜನೆಯನ್ನು ಪೂರ್ಣಗೊಳಿಸಲು 6 ಲಕ್ಷ ಕೋಟಿಯಿಂದ 8 ಲಕ್ಷ ಕೋಟಿ ವರೆಗೆ ಬೇಕಾಗುತ್ತದೆ ಎಂದೂ ಸಚಿವ ಸುರೇಶ್ ಪ್ರಭು ಇತ್ತೀಚೆಗೆ ಸಮಾರಂಭವೊಂದರಲ್ಲಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
ಮುಂದಿನ ರೈಲ್ವೆ ಬಜೆಟ್ ಗೂ ಮುನ್ನ ಎಲ್ಲಾ ರಾಜ್ಯಗಳ ಸಂಸದರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಗುತ್ತದೆ. ಬೇಡಿಕೆಗಳನ್ನು ಈಡೇರಿಸಲು ಸುಮಾರು 20,000 ಕೋಟಿ ರು ಹೆಚ್ಚುವರಿ ಮೊತ್ತ ಬೇಕಾಗುತ್ತದೆ ಎಂದು ಸುರೇಶ್ ಪ್ರಭು ಹೇಳಿದ್ದಾರೆ. ಸುಧಾರಣೆಗಳ ನಡುವೆಯೂ ಕಳೆದ ವರ್ಷದ ಏಪ್ರಿಲ್ ನಿಂದ ನವೆಂಬರ್ ತನಕದ ಅಂಕಿ ಅಂಶದಂತೆ ರೈಲ್ವೆ ಟಿಕೆಟ್ ಬುಕ್ಕಿಂಗ್ ಶೇ 1.43ರಷ್ಟು ಇಳಿಮುಖವಾಗಿರುವುದು ಇಲಾಖೆಗೆ ಹಿನ್ನಡೆಯಾಗಿದೆ ಎಂದು ಸಚಿವ ಪ್ರಭು ಅಭಿಪ್ರಾಯಪಟ್ಟಿದ್ದಾರೆ.(ಪಿಟಿಐ)
-
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
Arecanut Price: ಶಿವಮೊಗ್ಗ ಮಾರುಕಟ್ಟೆಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾರ್ಚ್ 23ರ ದರಪಟ್ಟಿ -
Commercial LPG: ಹೋಟೆಲ್, ಪಿಜಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್: ವಾಣಿಜ್ಯ ಎಲ್ಪಿಜಿ ಹಂಚಿಕೆ ಪ್ರಮಾಣ ಹೆಚ್ಚಿಸಿ ಆದೇಶ -
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications