ರೈಲು ಪ್ರಯಾಣಿಕರ ಮೇಲೆ ಬೆಲೆ ಏರಿಕೆ ಹೊರೆ?
ನವದೆಹಲಿ, ಡಿ.14: ಇಂಧನ ಬೆಲೆ ಏರಿಕೆ ಹಿನ್ನೆಲೆಯಲ್ಲಿ 2015ರ ಜನವರಿಯಲ್ಲಿ ಮಂಡನೆಯಾಗಲಿರುವ ರೈಲು ಬಜೆಟ್ನಲ್ಲಿ ಪ್ರಯಾಣ ದರವನ್ನು ಗಣನೀಯವಾಗಿ ಏರಿಕೆ ಮಾಡುವ ಬಗ್ಗೆ ಇಲಾಖೆ ಸೂಚನೆ ನೀಡಿದೆ.
ಇತ್ತೀಚಿನ ಕೆಲ ತಿಂಗಳುಗಳಿಂದ ಇಂಧನ ಬೆಲೆ ಶೇ.4ಕ್ಕಿಂತ ಅಧಿಕ ಪ್ರಮಾಣದಲ್ಲಿ ಏರಿಕೆಯಾಗಿದ್ದು, ವೆಚ್ಚ ಸರಿದೂಗಿಸಲು ಪ್ರಯಾಣ ದರ ಏರಿಕೆ ಅನಿವಾರ್ಯವಾಗಿದೆ. ಬಜೆಟ್ನಲ್ಲಿ ರೈಲು ಪ್ರಯಾಣ ದರ ಏರಿಸಲೇಬೇಕಾಗುತ್ತದೆ.ಇದರಿಂದ ಸಾರ್ವಜನಿಕರಿಗೆ ಹೊರೆಯಾಗಲಿದೆ. ಆದರೆ ಜನತೆ ಅದನ್ನು ಭರಿಸುವುದು ಅನಿವಾರ್ಯ ಎಂದು ರೈಲ್ವೆ ಖಾತೆ ಸಚಿವ ಸುರೇಶ್ಪ್ರಭು ಅವರನ್ನು ಉಲ್ಲೇಖಿಸಿ ಅಧಿಕಾರಿ ತಿಳಿಸಿದ್ದಾರೆ.
ರೈಲು ಪ್ರಯಾಣ ಹಾಗೂ ಸರಕು ಸಾಗಣೆ ದರಗಳನ್ನು ಇಂಧನ ಬೆಲೆಯನ್ನು ಅನುಸರಿಸಿ ಪ್ರಯಾಣ ದರವನ್ನು ಪರಿಷ್ಕರಿಸಬೇಕಾಗುತ್ತದೆ. ಇಂಧನ ದರ ಶೇ.4ರಷ್ಟು ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಪ್ರಯಾಣದರ ಪರಿಷ್ಕರಣೆ ಅನಿವಾರ್ಯವಾಗಿದ್ದು, ಶೇ.4.2ರಷ್ಟು ಪ್ರಯಾಣಿಕರ ದರ ಹಾಗೂ ಶೇ1.4ರಷ್ಟು ಸರಕು ಸಾಗಣೆ ದರಗಳನ್ನು ಪರಿಷ್ಕರಣೆಗೊಳಪಡಿಸಲಾಗುವುದು.

ಈಗಾಗಲೇ ಘೋಷಣೆ ಮಾಡಿರುವ ಯೋಜನೆಯನ್ನು ಪೂರ್ಣಗೊಳಿಸಲು 6 ಲಕ್ಷ ಕೋಟಿಯಿಂದ 8 ಲಕ್ಷ ಕೋಟಿ ವರೆಗೆ ಬೇಕಾಗುತ್ತದೆ ಎಂದೂ ಸಚಿವ ಸುರೇಶ್ ಪ್ರಭು ಇತ್ತೀಚೆಗೆ ಸಮಾರಂಭವೊಂದರಲ್ಲಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
ಮುಂದಿನ ರೈಲ್ವೆ ಬಜೆಟ್ ಗೂ ಮುನ್ನ ಎಲ್ಲಾ ರಾಜ್ಯಗಳ ಸಂಸದರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಗುತ್ತದೆ. ಬೇಡಿಕೆಗಳನ್ನು ಈಡೇರಿಸಲು ಸುಮಾರು 20,000 ಕೋಟಿ ರು ಹೆಚ್ಚುವರಿ ಮೊತ್ತ ಬೇಕಾಗುತ್ತದೆ ಎಂದು ಸುರೇಶ್ ಪ್ರಭು ಹೇಳಿದ್ದಾರೆ. ಸುಧಾರಣೆಗಳ ನಡುವೆಯೂ ಕಳೆದ ವರ್ಷದ ಏಪ್ರಿಲ್ ನಿಂದ ನವೆಂಬರ್ ತನಕದ ಅಂಕಿ ಅಂಶದಂತೆ ರೈಲ್ವೆ ಟಿಕೆಟ್ ಬುಕ್ಕಿಂಗ್ ಶೇ 1.43ರಷ್ಟು ಇಳಿಮುಖವಾಗಿರುವುದು ಇಲಾಖೆಗೆ ಹಿನ್ನಡೆಯಾಗಿದೆ ಎಂದು ಸಚಿವ ಪ್ರಭು ಅಭಿಪ್ರಾಯಪಟ್ಟಿದ್ದಾರೆ.(ಪಿಟಿಐ)
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications