ಕೊರೊನಾ ಲಸಿಕೆ ಡೋಸ್ಗಳ ನಡುವಿನ ಅಂತರ: ವಿಜ್ಞಾನಿಗಳ ಶಿಫಾರಸು ಏನಾಗಿತ್ತು?
ನವದೆಹಲಿ, ಜೂನ್ 16: ಕೊರೊನಾ ಲಸಿಕೆಯ ಡೋಸ್ಗಳ ನಡುವಿನ ಅಂತರ ಹೆಚ್ಚಳಕ್ಕೆ ವಿಜ್ಞಾನಿಗಳ ಒಪ್ಪಿಗೆ ಇರಲಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.
ಈ ಕುರಿತು ರಾಯ್ಟರ್ಸ್ ವರದಿ ಮಾಡಿದ್ದು, ಲಸಿಕೆ ಡೋಸ್ ಗಳ ನಡುವಿನ ಅಂತರವನ್ನು 6-8 ವಾರಗಳಿಂದ 12-16 ವಾರಗಳಿಗೆ ಮೇ.13 ರಂದು ಏರಿಕೆ ಮಾಡಿರುವುದನ್ನು ಆರೋಗ್ಯ ಸಚಿವಾಲಯ ಘೋಷಿಸಿತ್ತು.
ಆದರೆ ಈ ನಿರ್ಧಾರವನ್ನು ವೈಜ್ಞಾನಿಕ ಗುಂಪಿನ ಸಂಪೂರ್ಣ ಒಪ್ಪಿಗೇ ಇಲ್ಲದೇ ಕೈಗೊಳ್ಳಲಾಗಿರುವುದನ್ನು ಸಲಹಾ ಸಮಿತಿಯ ಮೂವರು ಸದಸ್ಯರು ಹೇಳಿರುವುದನ್ನು ಉಲ್ಲೇಖಿಸಲಾಗಿದೆ.

ಸರ್ಕಾರಿ ಸ್ವಾಮ್ಯದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿಯ ಮಾಜಿ ನಿರ್ದೇಶಕ ಎಂಡಿ ಗುಪ್ತೆ ಮಾತನಾಡಿ, '' ಎನ್ಟಿಎಜಿಐ ಡೋಸ್ಗಳ ನಡುವಿನ ಅಂತರವನ್ನು ವಿಶ್ವ ಆರೋಗ್ಯ ಸಂಸ್ಥೆ ಸಲಹೆ ನೀಡಿದ್ದ 8-12ಕ್ಕೆ ನಿಗದಿಪಡಿಸಲು ಒಪ್ಪಿಗೆ ನೀಡಿತ್ತು. ಆದರೆ ಈ ಗುಂಪಿಗೆ, 12 ವಾರಗಳ ಬಳಿಕವೂ ಎರಡನೇ ಡೋಸ್ ಲಸಿಕೆ ಅಂತರದ ಪರಿಣಾಮಗಳ ಬಗ್ಗೆ ಡಾಟಾ ಇರಲಿಲ್ಲ'' ಎಂದು ಹೇಳಿದ್ದಾರೆ.
ಆದರೂ ಎನ್ ಟಿಎಜಿಐ ವಿಜ್ಞಾನಿಗಳು, ಸರ್ಕಾರದಿಂದ ವರ್ಗೀಕರಿಸಲಾದ 14 ಕೋರ್ ಸದಸ್ಯರ ಪೈಕಿ ಮೂವರು ಈ ರೀತಿಯ ಶಿಫಾರಸು ಮಾಡುವುದಕ್ಕೆ ಸಾಕಷ್ಟು ಅಂಕಿ-ಅಂಶ, ಡಾಟಾ, ಮಾಹಿತಿಗಳಿಲ್ಲ ಎಂದು ಹೇಳಿದ್ದರು.
ಎನ್ಟಿಜಿಐನಲ್ಲಿನ ಅವರ ಸಹೋದ್ಯೋಗಿ ಮ್ಯಾಥ್ಯೂ ವರ್ಗೀಸ್ , ''ಗುಂಪಿನ ಶಿಫಾರಸ್ಸು ಇದ್ದದ್ದು 8-12 ವಾರಗಳಿಗೆ ಅಷ್ಟೇ'' ಎಂದು ಹೇಳಿದ್ದಾರೆ.
ಲಸಿಕೆ ಹಾಕುವ ವಿಷಯದ ಬಗ್ಗೆ ರಾಷ್ಟ್ರೀಯ ಲಸಿಕಾ ತಾಂತ್ರಿಕ ಸಲಹಾ ಗುಂಪು (ಎನ್ಟಿಎಜಿಐ) ಬ್ರಿಟನ್ನ ರಿಯಲ್-ಲೈಫ್ ಎವಿಡೆನ್ಸ್ ಆಧಾರದಲ್ಲಿ ಲಸಿಕೆ ಡೋಸ್ ನಡುವಿನ ಅಂತರವನ್ನು ಹೆಚ್ಚಿಸುವುದಕ್ಕೆ ಶಿಫಾರಸು ಮಾಡಿತ್ತು ಎಂದು ಆರೋಗ್ಯ ಸಚಿವಾಲಯ ಹೇಳಿತ್ತು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications