400 ಲಕ್ಷ ಕೋಟಿ ರೂಪಾಯಿ ಮುಟ್ಟಿದ ಭಾರತೀಯ ಷೇರು ಮಾರುಕಟ್ಟೆ ಮೌಲ್ಯ!
ಆರ್ಥಿಕವಾಗಿ ಭಾರತ ಈಗಾಗಲೇ ಬಲಿಷ್ಠ ರಾಷ್ಟ್ರಗಳಿಗೂ ಚಾಲೆಂಜ್ ಹಾಕುವ ರೀತಿ ಬೆಳೆದು ನಿಂತಿದೆ. ಭಾರತ ಈಗಾಗಲೇ ಟಾಪ್ 5 ದೇಶಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಅದ್ರಲ್ಲೂ ನಮ್ಮ ದೇಶವನ್ನ ಶೀಘ್ರದಲ್ಲೇ 5 ಟ್ರಿಲಿಯನ್ ಆರ್ಥಿಕತೆ ಸ್ಥಾನಕ್ಕೆ ಕೊಂಡೊಯ್ಯಲು ಕೇಂದ್ರ ಸರ್ಕಾರವು ಪ್ರಯತ್ನ ಆರಂಭಿಸಿದೆ. ಇದೇ ಸಮಯದಲ್ಲಿ ಷೇರು ಮಾರುಕಟ್ಟೆ ಕೂಡ ಐತಿಹಾಸಿಕ ಮಟ್ಟ ತಲುಪಿದೆ. ಹಾಗಾದ್ರೆ ಇದೀಗ ಭಾರತೀಯ ಷೇರು ಮಾರುಕಟ್ಟೆ ಮಾಡಿರುವ ಸಾಧನೆ ಏನು? ಬನ್ನಿ ತಿಳಿಯೋಣ.
ಷೇರು ಮಾರುಕಟ್ಟೆ ಭಾರಿ ಲಾಭ ಗಳಿಸಿದ್ದು ಸಾರ್ವಕಾಲಿಕ ಮಟ್ಟ ತಲುಪಿದೆ ಭಾರತ ಬಂಡವಾಳ ಮಾರುಕಟ್ಟೆ ಪ್ರಮುಖ ಸೂಚ್ಯಂಕಗಳಾದ ಬಿಎಸ್ಇ ಸೆನ್ಸೆಕ್ಸ್ (BSE Sensex) ಸೇರಿ ಎನ್ಎಸ್ಇ ನಿಫ್ಟಿ ಹೊಸ ದಾಖಲೆ ಬರೆಯುತ್ತಿವೆ. ಇಷ್ಟೆಲ್ಲಾ ಸಾಧನೆ ಮಧ್ಯೆ ಈಗ ಷೇರು ಪೇಟೆಯ ಮೌಲ್ಯ ₹400 ಲಕ್ಷ ಕೋಟಿಗೆ ಏರಿಕೆ ಕಾಣುವ ಮೂಲಕ ಸಾರ್ವಕಾಲಿಕ ದಾಖಲೆ ಬರೆದಿದೆ. ಇದು ಈ ದೇಶದ ಷೇರು ಪೇಟೆಯ ಬಲವನ್ನು ತೋರಿಸುತ್ತಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ವಿಶ್ಲೇಷಣೆ ಮಾಡುತ್ತಿದ್ದಾರೆ ನೆಟ್ಟಿಗರು. ಅದ್ರಲ್ಲೂ ಕಳೆದ ಕೆಲವು ತಿಂಗಳಿಂದ ನಿರಂತರವಾಗಿ ಭಾರತೀಯ ಷೇರು ಪೇಟೆ ಲಾಭದ ಮೇಲೆ ಲಾಭ ಮಾಡುತ್ತಿದೆ.

₹400 ಲಕ್ಷ ಕೋಟಿಗೆ ಏರಿಕೆ!
ಮುಂಬೈ ಷೇರು ಪೇಟೆಯ ಸೂಚ್ಯಂಕದಲ್ಲಿ ನೋಂದಾಯಿತ ಕಂಪನಿಗಳ ಮಾರುಕಟ್ಟೆ ಮೌಲ್ಯ ₹400 ಲಕ್ಷ ಕೋಟಿಗೆ ಏರಿಕೆ ಕಂಡು ಇಡೀ ಜಗತ್ತಿನ ಗಮನವನ್ನು ಸೆಳೆದಿದೆ. ಈ ಹಿಂದೆ 2023ರ ಜುಲೈ ತಿಂಗಳಲ್ಲಿ ಎಂ-ಕ್ಯಾಪ್ ₹300 ಲಕ್ಷ ಕೋಟಿ ರೂಪಾಯಿ ದಾಟಿ ದಾಖಲೆ ಬರೆದಿತ್ತು. ಈ ಮಧ್ಯೆ ಇದೀಗ ಇನ್ನೂ ಒಂದು ಹಂತವನ್ನು ದಾಟಿದೆ ಭಾರತೀಯ ಷೇರು ಮಾರುಕಟ್ಟೆ. ಈ ಮೂಲಕ ಭಾರತೀಯ ಷೇರು ಮಾರುಕಟ್ಟೆ ಹೆಜ್ಜೆ ಇಟ್ಟಿರುವುದು ಹೂಡಿಕೆದಾರರ ಸೆಳೆಯುತ್ತಿದೆ.
ಹೆಚ್ಚು ದುಡ್ಡು ಓಡಾಡುವ ಜಾಗ!
ದೇಶದ ಆರ್ಥಿಕತೆಯಲ್ಲಿ ಹೆಚ್ಚು ದುಡ್ಡು ಓಡಾಡುವ ಜಾಗ ಷೇರು ಮಾರುಕಟ್ಟೆ ಅಂತಾರೆ. ಆದ್ರೆ ಈ ಮಾತು ಅದೆಷ್ಟು ನಿಜಾನೋ ಅಥವಾ ಅದೆಷ್ಟು ಸುಳ್ಳೋ ಗೊತ್ತಿಲ್ಲ. ಆದರೂ ಷೇರು ಪೇಟೆ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತ ಇದೆ. ಈಗಲೂ ಅದೇ ರೀತಿ ಹೂಡಿಕೆ ಮಾಡಿದವರಿಗೆಲ್ಲ ಭರ್ಜರಿ ಹಣವೂ ಸಿಗುತ್ತಿದೆ. ಮತ್ತೊಂದು ಕಡೆ ಮುಂದಿನ ವರ್ಷಗಳಲ್ಲಿ ಭಾರತೀಯ ಷೇರು ಪೇಟೆ ಮತ್ತಷ್ಟು ಮೇಲೆ ಅಂದರೆ ಉನ್ನತ ಹಂತಕ್ಕೆ ತಲುಪುವ ನಿರೀಕ್ಷೆ ಇದೆ. ಹೀಗಾಗಿಯೇ ಭಾರತೀಯ ಹೂಡಿಕೆದಾರರು ಈ ಬೆಳವಣಿಗೆಯಿಂದ ಖುಷಿಯಾಗಿದ್ದಾರೆ.
ಒಟ್ನಲ್ಲಿ ಜಗತ್ತಿನಲ್ಲಿ ಅಮೆರಿಕ, ಯುರೋಪ್ ಸೇರಿದಂತೆ ಹಲವು ದೇಶಗಳ ಷೇರು ಪೇಟೆಯ ಸೂಚ್ಯಂಕ ನೆಲಕಚ್ಚುವಾಗ, ಭಾರತದ ಷೇರು ಪೇಟೆ ಸದ್ದು ಮಾಡುತ್ತಿದೆ. ಅದರಲ್ಲೂ ಈ ಸಮಯದಲ್ಲಿ ಭಾರತೀಯ ಷೇರು ಮಾರುಕಟ್ಟೆ ರಾಕೆಟ್ ವೇಗದಲ್ಲಿ ಮುನ್ನುಗ್ಗುತ್ತಿದೆ. ಹೀಗೆ ಹೂಡಿಕೆದಾರರು ಕೂಡ ಇದರಿಂದ ಖುಷಿಯಾಗಿದ್ದಾರೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications