"ಭಾರತೀಯರೇ ನನ್ನ ಗುರು" ಎಂದ ದಲೈ ಲಾಮಾ
ಸೂರತ್, ಜ. 1: ಭಾರತದ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಪರಂಪರೆ ವಿಶ್ವದ ಹಲವು ದೇಶಗಳ ಗಮನ ಸೆಳೆಯುತ್ತಿದೆ. ನೊಬೆಲ್ ಪ್ರಶಸ್ತಿ ವಿಜೇತ ದಲೈ ಲಾಮಾ ಕೂಡ ಇದರಿಂದ ಹೊರತಾಗಿಲ್ಲ.
ಇದೇ ಮೊದಲ ಬಾರಿಗೆ ಗುಜರಾತ್ ಪ್ರವಾಸ ಕೈಗೊಂಡಿರುವ ದಲೈ ಲಾಮಾ "ಭಾರತೀಯರೇ ನನ್ನ ಗುರು" ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.
'ಸಂತೋಕ್ಬಾ ಪ್ರಶಸ್ತಿ' ಸ್ವೀಕರಿಸಲು ಸೂರತ್ ನಗರಕ್ಕೆ ಬಂದಿಳಿದ ದಲೈ ಲಾಮಾ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.

"ಭಾರತದ ಪುರಾತನ ವಿಶ್ವವಿದ್ಯಾಲಯವಾದ ನಳಂದಾ ಚಿಂತನೆಗಳಿಂದ ನಾನು ಪ್ರಭಾವಿತನಾಗಿದ್ದೇನೆ. ಆದ್ದರಿಂದ ನಾನು ಭಾರತೀಯರನ್ನು ಸಾಂಪ್ರದಾಯಿಕ ಹಾಗೂ ಐತಿಹಾಸಿಕ ಗುರುಗಳೆಂದು ಪರಿಗಣಿಸಿದ್ದೇನೆ" ಎಂದು ಹೇಳಿದ್ದಾರೆ. [ಶಿಕ್ಷಣ ಕೊಡಿಸಿ, ಆದ್ರೆ ಮತಾಂತರ ಮಾಡಬೇಡಿ]
"ನಾವು ಚೇಲಾಗಳು (ಶಿಷ್ಯರು). ಆದ್ದರಿಂದ ಓರ್ವ ಸರಳ ಚೇಲಾ ಆಗಿ ನಾನು ನನ್ನ ಗುರುಗಳನ್ನು ಅಭಿನಂದಿಸಲು ಬಯಸುತ್ತೇನೆ" ಎಂದು ಹೇಳಿದ್ದಾರೆ.
ಯಾವುದು ಈ ಸಂತೋಕ್ಬಾ ಪ್ರಶಸ್ತಿ? : ಸೂರತ್ ಮೂಲದ ಉದ್ಯಮಿ ಗೋವಿಂದ ಧೋಲಾಕಿಯಾ ಅವರು ತಮ್ಮ ತಾಯಿಯ ಸ್ಮರಣಾರ್ಥ ಶ್ರೀ ರಾಮಕೃಷ್ಣ ಫೌಂಡೇಶನ್ ಸ್ಥಾಪಿಸಿದ್ದಾರೆ. ಗಣನೀಯ ಸಾಮಾಜಿಕ ಸೇವೆ ಸಲ್ಲಿಸಿದವರಿಗೆ ಶ್ರೀ ರಾಮಕೃಷ್ಣ ಫೌಂಡೇಶನ್ ಮೂಲಕ ಸಂತೋಕ್ಬಾ ಪ್ರಶಸ್ತಿ ನೀಡಲಾಗುತ್ತದೆ. ಈ ಪ್ರಶಸ್ತಿಯು 25 ಲಕ್ಷ ರೂ. ನಗದು ಹಾಗೂ ವಜ್ರ ಖಚಿತವಾದ ಚಿನ್ನ ಲೇಪಿತ ಫಲಕವನ್ನು ಒಳಗೊಂಡಿದೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications