ಚೀನಿಯರಿಗಿಂತ ಭಾರತೀಯರು ಸೋಮಾರಿಗಳು: ದಲೈ ಲಾಮಾ
ಭಾರತೀಯರು ಚೀನಿಯರಿಗಿಂತ ಸೋಂಬೇರಿಗಳು. ಆದರೆ ಈ ದೇಶ ಹೆಚ್ಚು ಸ್ಥಿರವಾಗಿದೆ ಮತ್ತು ವಿಧ ಸಂಸ್ಕೃತಿಗಳಿಗೆ ಜೀವಂತ ಉದಾಹರಣೆಯಾಗಿದೆ ಎಂದು ಟಿಬೆಟನ್ ಧರ್ಮಗುರು ಆಧ್ಯಾತ್ಮಿಕ ನಾಯಕರಾದ ದಲೈ ಲಾಮಾ ಗುರುವಾರ ಅಭಿಪ್ರಾಯ ಪಟ್ಟಿದ್ದಾರೆ.
ಭಾರತೀಯ ವಾಣಿಜ್ಯ ಒಕ್ಕೂಟ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾರತ ಹಾಗೂ ಚೀನಾ ಜನರ ಮಧ್ಯೆ ಹೋಲಿಕೆ ಮಾಡಿದರು. ಚೀನಿಯರಿಗೆ ಹೋಲಿಸಿದರೆ ಭಾರತೀಯರು ಸೋಮಾರಿಗಳು ಎಂದು ಅವರು ಹೇಳಿದರು.
ಬಹುಶಃ ಆ ಗುಣಕ್ಕೆ ಇಲ್ಲಿನ ವಾತಾವರಣ ಕಾರಣ. ಆದರೆ ಭಾರತ ಸ್ಥಿರವಾಗಿದೆ. ಜಾಗತಿಕ ಮಟ್ಟದಲ್ಲಿ ಭಾರತ ತನ್ನ ಪಾತ್ರ ವಹಿಸಬಹುದು. ವಿವಿಧ ಧರ್ಮಗಳವರನ್ನು ವಿಶ್ವಾಸಕ್ಕೆ ತೆಗೆದುಕೊಂಡಿರುವ ಈ ದೇಶದಲ್ಲಿ ಸಹಿಷ್ಣುತೆ ಇದೆ ಎಂದು ಅವರು ಅಭಿಪ್ರಾಯ ಪಟ್ಟರು.

ಧಾರ್ಮಿಕ ಸಹಿಷ್ಣುತೆ ಬಹಳ ಮುಖ್ಯ. ಕೆಲ ಬಾರಿ ರಾಜಕಾರಣಿಗಳು ಆ ಧಾರ್ಮಿಕ ಸಾಮರಸ್ಯವನ್ನು ಕದಡಿ ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ. ಕಳೆದ ಕೆಲವು ಶತಮಾನಗಳಿಂದ ಹಿಂದೂ, ಬೌದ್ಧರು, ಸಿಖ್ಖರು, ಕ್ರೈಸ್ತರು ಮತ್ತು ಇಸ್ಲಾಮ್ ಸೇರಿದಂತೆ ಇತರ ಧರ್ಮೀಯರು ಇಲ್ಲಿ ಸಾಮರಸ್ಯದಿಂದ ಜೀವನ ನಡೆಸುತ್ತಿದ್ದಾರೆ ಎಂದರು.
ದೋಕ್ಲಾಂ ಸಮಸ್ಯೆ ಬಗ್ಗೆ ಮಾತನಾಡಿದ ಅವರು, ಅವೆಲ್ಲ ಸಣ್ಣ ಸಮಸ್ಯೆ. ಚೀನಾ ಸೇನೆ ಬರಬೇಕು. ಆಗ ಗುಂಡಿನ ಚಕಮಕಿ. ಆ ನಂತರ ಸೇನೆ ವಾಪಸ್ ಕರೆಸಬೇಕು. ಅದು ಸುಲಭವಲ್ಲ. ಹಿಂದಿ-ಚೀನಿ ಭಾಯಿ ಭಾಯಿ ಎಂಬ ಮನೋಭಾವ ಅಗತ್ಯವಿದೆ ಎಂದು ಹೇಳಿದರು.
ಭಾರತೀಯರ ನಗು ಸಾಚಾತನದಿಂದ ಕೂಡಿರುತ್ತದೆ. ಆದರೆ ಚೀನಾ ಅಧಿಕಾರಿಗಳ ನಗು ಕೃತಕವಾಗಿರುತ್ತದೆ ಎಂದು ಲಘು ಹಾಸ್ಯದ ಧಾಟಿಯಲ್ಲಿ ಹೇಳಿದರು.
-
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Viral Video: 'ಓಂಕಾರ' ಚಿತ್ರದ ಬೀಡಿ ಜಲೈಲೆ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಬ್ರೆಜಿಲ್ ಬೆಡಗಿಯರು -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ












Click it and Unblock the Notifications