ಯೇಸು ಕೋವಿಡ್ ತೊಡೆದು ಹಾಕಿದ್ದಾರೆ, ಕ್ರಿಶ್ಚಿಯಾನಿಟಿಯಿಂದ ಮಾತ್ರ ಭಾರತೀಯರು ಬದುಕುಳಿದಿದ್ದಾರೆ
ಹೈದರಾಬಾದ್, ಡಿಸೆಂಬರ್ 21: ಜೀಸಸ್ ಕೋವಿಡ್ ಅನ್ನು ತೊಡೆದು ಹಾಕಿದ್ದಾರೆ. ಅಲ್ಲದೆ ಕ್ರಿಶ್ಚಿಯನಿಟಿ ಇರುವುದರಿಂದಲೇ ಭಾರತೀಯರು ಬದುಕುಳಿದಿದ್ದಾರೆ ಎಂದು ತೆಲಂಗಾಣದ ಆರೋಗ್ಯ ನಿರ್ದೇಶಕ ಜಿ. ಶ್ರೀನಿವಾಸ್ ರಾವ್ ಅವರು ಹೇಳಿದ್ದಾರೆ.
ಪ್ರಪಂಚದಾದ್ಯಂತದ ಅನೇಕ ದೇಶಗಳಲ್ಲಿ ಮತ್ತೆ ಕೋವಿಡ್ 19 ಪ್ರಕರಣಗಳಲ್ಲಿ ಹಠಾತ್ ಏರಿಕೆಯಾಗುತ್ತಿದ್ದು, ಜಾಗತಿಕ ಸಾಂಕ್ರಮಿಕದ ಉಲ್ಬಣವು ದೇಶಕ್ಕೆ ದೊಡ್ಡ ಅಲೆಯನ್ನು ತರದಂತೆ ನೋಡಿಕೊಳ್ಳಲು ಭಾರತವೂ ಸಜ್ಜಾಗಿದೆ. ಈ ಎಲ್ಲದರ ನಡುವೆ, ತೆಲಂಗಾಣ ಆರೋಗ್ಯ ನಿರ್ದೇಶಕ ಜಿ ಶ್ರೀನಿವಾಸ್ ರಾವ್ ಅವರು ಕೊರೊನಾ ವೈರಸ್ ಪರಿಸ್ಥಿತಿ ಸಂಬಂಧ ತಮ್ಮ ಹೇಳಿಕೆಯ ಮೂಲಕ ವಿವಾದದಲ್ಲಿ ಸಿಲುಕಿದ್ದಾರೆ.
ಕೋವಿಡ್ -19 ಯೇಸುವಿನ ಕಾರಣದಿಂದಾಗಿ ಕಡಿಮೆಯಾಯಿತು. ಕ್ರಿಶ್ಚಿಯನ್ ಧರ್ಮದ ಕಾರಣದಿಂದ ಭಾರತೀಯರು ಬದುಕುಳಿದರು. ವೈದ್ಯರು ಒದಗಿಸಿದ ಚಿಕಿತ್ಸೆಯಿಂದ ಪರಿಸ್ಥಿತಿಯನ್ನು ನಿಭಾಯಿಸಲಾಗಿಲ್ಲ. ಆದರೆ ಯೇಸುವಿನ ದಯೆಯಿಂದಾಗಿ ಕೋವಿಡ್ ನಿಯಂತ್ರಣವಾಯಿತು. ಭಾರತದ ಅಭಿವೃದ್ಧಿಗೆ ಕ್ರಿಶ್ಚಿಯನ್ನರು ಕಾರಣ ಎಂದು ಕ್ರಿಸ್ಮಸ್ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಅವರು ಈ ಹೇಳಿಕೆ ನೀಡಿದ್ದಾರೆ.

ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಕೃಷ್ಣ ಸಾಗರ್ ರಾವ್, ಅವರು ಇಂತಹ ಹೇಳಿಕೆ ನೀಡಬಾರದಿತ್ತು. ಇದು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಮತ್ತು ಅವರು ತೆಲಂಗಾಣದಲ್ಲಿ ಆರೋಗ್ಯ ನಿರ್ದೇಶಕರಾಗಿ ತಮ್ಮ ವೃತ್ತಿಪರ ಗುರುತಿನ ಮೇಲೆ ಧಾರ್ಮಿಕ ಗುರುತನ್ನು ತೋರಿಸುತ್ತಾರೆ ಎಂದು ತಿಳಿಸಿದ್ದಾರೆ.
ಭಾರತವು ಇಂದು ಏನಾಗಿದೆ. ಕ್ರಿಶ್ಚಿಯನ್ ಧರ್ಮದ ಕಾರಣದಿಂದಾಗಿ ಅಭಿವೃದ್ಧಿಯಾಗುತ್ತಿದೆ. ಕೋವಿಡ್ 19 ಮತ್ತು ನಂತರದ ವ್ಯವಹಾರ ಕುಸಿತವನ್ನು ಯೇಸು ರಕ್ಷಿಸಿದರು. ಅವರು ಯೇಸುವಿನ ನಂಬಿಕೆಯನ್ನು ಹೊಂದಬಹುದು. ಆದರೆ ಅವರು ಈ ರೀತಿಯ ಸಾರ್ವಜನಿಕ ಹೇಳಿಕೆ ನೀಡಲು ಸಾಧ್ಯವಿಲ್ಲ. ಅವರೇಕೆ ಹೆಲ್ತ್ ಡೈರೆಕ್ಟರ್? ರಾಜೀನಾಮೆ ಕೊಟ್ಟು ಹೋಗಬೇಕು. ದೇವರೇ ಕಾಪಾಡಲಿ ಕೃಷ್ಣ ಸಾಗರ್ ರಾವ್ ಹೇಳಿದರು.
ಏತನ್ಮಧ್ಯೆ, ಕೋವಿಡ್-19 ಇನ್ನೂ ಮುಗಿದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಡಾ ಮನ್ಸುಖ್ ಮಾಂಡವಿಯಾ ಬುಧವಾರ ಹೇಳಿದ್ದಾರೆ. ಅಲ್ಲದೆ ಎಲ್ಲರೂ ಆದಷ್ಟು ಬೇಗ ಲಸಿಕೆ ಹಾಕಿಸಿಕೊಳ್ಳಬೇಕು. ಸಂಬಂಧಪಟ್ಟ ಎಲ್ಲರಿಗೂ ಎಚ್ಚರಿಕೆ ವಹಿಸಲು ಮತ್ತು ಕಣ್ಗಾವಲು ಬಲಪಡಿಸಲು ಸೂಚಿಸಿದ್ದಾರೆ ಎಂದು ಹೇಳಿದರು.
ಹೊಸ ರೂಪಾಂತರಗಳನ್ನು ಪತ್ತೆಹಚ್ಚಲು ಅನುಕೂಲವಾಗುವಂತೆ ಎಲ್ಲಾ ಕೋವಿಡ್ 19 ಧನಾತ್ಮಕ ಪ್ರಕರಣಗಳ ಮಾದರಿಗಳನ್ನು INSACOG ಲ್ಯಾಬ್ಗಳಿಗೆ ಕಳುಹಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಲಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications