India's first underwater metro: ಭಾರತದ ಮೊದಲ ನೀರಿರೊಳಗಿನ ಮೆಟ್ರೋ ಮಾರ್ಗಕ್ಕೆ ಚಾಲನೆ, ಇದರ ವಿಶೇಷತೆಗಳೇನು?-ಮಾಹಿತಿ
ಕೋಲ್ಕತ್ತಾ, ಮಾರ್ಚ್, 06: ಕೋಲ್ಕತ್ತಾದಲ್ಲಿ ಭಾರತದ ಮೊದಲ ನೀರೊಳಗಿನ ಮೆಟ್ರೋ ಲೈನ್ ಸೇರಿದಂತೆ ದೇಶದಾದ್ಯಂತ ಬಹು ಮೆಟ್ರೋ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ (ಮಾರ್ಚ್ 06) ಅನಾವರಣಗೊಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೋಲ್ಕತ್ತಾದಲ್ಲಿ ಭಾರತದ ಮೊದಲ ನೀರೊಳಗಿನ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದರು. ಇದು ದೇಶದ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ಈ ನೀರೊಳಗಿನ ಸೇವೆಯು ಕೋಲ್ಕತ್ತಾ ಮೆಟ್ರೋದ ಪೂರ್ವ-ಪಶ್ಚಿಮ ಕಾರಿಡಾರ್ನ ಹೌರಾ ಮೈದಾನ-ಎಸ್ಪ್ಲೇನೇಡ್ ವಿಭಾಗದ ಭಾಗವಾಗಿದೆ. ಹೂಗ್ಲಿ ನದಿಯ ಕೆಳಗೆ 16.6 ಕಿಲೋ ಮೀಟರ್ ಇದು ವ್ಯಾಪಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮೊದಲ ನೀರೊಳಗಿನ ಮೆಟ್ರೋ ಸುರಂಗವನ್ನು ಉದ್ಘಾಟನೆ ಮಾಡಿದ್ದಾರೆ. ಕೋಲ್ಕತ್ತಾದ ಹೌರಾ ಮೈದಾನ ಮತ್ತು ಎಸ್ಪ್ಲೇನೇಡ್ ನಡುವೆ ಮೆಟ್ರೋ ರೈಲಿಗೆ ಹಸಿರು ನಿಶಾನೆ ತೋರುತ್ತಿದ್ದಂತೆ, ಭಾರತದ ನದಿಯ ಅಡಿಯಲ್ಲಿರುವ ಮೊದಲ ಸುರಂಗ ಸಂಚಾರಕ್ಕೆ ಮುಕ್ತ ಆಗಲಿದೆ. ಕೋಲ್ಕತ್ತಾದ ಹೂಗ್ಲಿ ನದಿಯಡಿಯಲ್ಲಿ ನಿರ್ಮಿಸಲಾದ ಈ ಸುರಂಗವು ಹೌರಾ ಮೈದಾನ್ ಮತ್ತು ಎಸ್ಪ್ಲಾನೇಡ್ ನಡುವಿನ ಎರಡು ನಿಲ್ದಾಣಗಳನ್ನು ಸಂಪರ್ಕ ಕಲ್ಪಿಸುತ್ತದೆ.
ನೀರೊಳಗಿನ ಸುರಂಗವು ಅದ್ಭುತ ಸಾಧನೆ ಎಂದೇ ಹೇಳಬಹುದು. ಇದು ಹೂಗ್ಲಿ ನದಿ ಕೆಳಗೆ 16.6 ಕಿಲೋ ಮೀಟರ್ನಷ್ಟು ವ್ಯಾಪಿಸಿದೆ. ಈ ಮೆಟ್ರೋ ಹೂಗ್ಲಿ ನದಿಯ ಪಶ್ಚಿಮ ದಂಡೆಯಲ್ಲಿರುವ ಪೂರ್ವ ಕರಾವಳಿಯ ಸಾಲ್ಟ್ ಲೇಕ್ ನಗರಕ್ಕೆ ಸಂಪರ್ಕ ಕಲ್ಪಿಸುತ್ತದೆ. ಇದು 6 ನಿಲ್ದಾಣಗಳನ್ನು ಒಳಗೊಂಡಿದೆ. ಈ ವಿಭಾಗವು 4.8 ಕಿಲೋ ಮೀಟರ್ಗಳಷ್ಟು ಉದ್ದ ಆಗಿವೆ. ಕೋಲ್ಕತ್ತಾ ಮೆಟ್ರೋ ಕಾಮಗಾರಿ ಹಲವು ಹಂತಗಳಲ್ಲಿ ನಡೆಯುತ್ತಿವೆ.
ಹೌರಾ ಮೆಟ್ರೋ ನಿಲ್ದಾಣವು ಭಾರತದ ಆಳವಾದ ಮೆಟ್ರೋ ನಿಲ್ದಾಣವಾಗಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ. ಇನ್ನು ಕೋಲ್ಕತ್ತಾ ಮೆಟ್ರೋ ಅದನ್ನು ತಯಾರಿಸಲು ಸಾಕಷ್ಟು ತೊಂದರೆಗಳನ್ನು ಎದುರಿಸಬೇಕಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. ಇದು ಕೇವಲ 45 ಸೆಕೆಂಡುಗಳಲ್ಲಿ 520-ಮೀಟರ್ ದೂರ ಕ್ರಮಿಸಬಲ್ಲದು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications