ಭಾರತದ ಹಜ್ ಕೋಟಾ ಎರಡು ಲಕ್ಷಕ್ಕೆ ಏರಿಕೆ; ಅಧಿಕೃತ ಘೋಷಣೆ
ನವದೆಹಲಿ, ಏಪ್ರಿಲ್ 19: ಸೌದಿ ಅರೇಬಿಯಾವು ಭಾರತದ ಹಜ್ ಕೋಟಾವನ್ನು ಎರಡು ಲಕ್ಷಕ್ಕೆ ಏರಿಸಿದ್ದು, ಇದರಿಂದ ದೊಡ್ಡ ರಾಜ್ಯಗಳಾದ ಉತ್ತರಪ್ರದೇಶ, ಪಶ್ಚಿಮ ಬಂಗಾಲ ಮತ್ತು ಬಿಹಾರನಿಂದ ಯಾತ್ರೆ ಕೈಗೊಳ್ಳುವವರಿಗೆ ಅನುಕೂಲ ಆಗಲಿದೆ ಎಂದು ಅಲ್ಪಸಂಖ್ಯಾತ ಸಚಿವಾಲಯದ ಮೂಲಗಳು ತಿಳಿಸಿವೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಭಾರತ ಹಜ್ ಕೋಟಾ ಹೆಚ್ಚಿಸುವ ಬಗ್ಗೆ ಶುಕ್ರವಾರದಂದು ಸೌದಿ ಅರೇಬಿಯಾ ಸರಕಾರವು ಅಧಿಕೃತವಾದ ಆದೇಶ ಹೊರಡಿಸಿದೆ. ಕಳೆದ ಫೆಬ್ರವರಿಯಲ್ಲಿ ಸೌದಿಯ ರಾಜ ಮೊಹ್ಮದ್ ಬಿನ್ ಸಲ್ಮಾನ್ ಅವರು ಭಾರತಕ್ಕೆ ಭೇಟಿ ನೀಡಿದ್ದ ವೇಳೆ ಹಜ್ ಯಾತ್ರಿಕರ ಕೋಟಾವನ್ನು ಇಪ್ಪತ್ತೈದು ಸಾವಿರದಷ್ಟು ಏರಿಸುವ ಮೂಲಕ ಎರಡು ಲಕ್ಷ ಮಂದಿ ಯಾತ್ರೆ ಕೈಗೊಳ್ಳಲು ಅನುಕೂಲ ಮಾಡಿಕೊಡುವುದಾಗಿ ಹೇಳಲಾಗಿತ್ತು.
ಸಂಖ್ಯೆ ಏರಿಕೆ ಮಾಡಿರುವುದರಿಂದ ಉತ್ತರಪ್ರದೇಶ, ಪಶ್ಚಿಮ ಬಂಗಾಲ, ಅಂಡಮಾನ್ ಮತ್ತು ನಿಕೋಬಾರ್, ದಾದ್ರ ಮತ್ತು ನಗರ್ ಹವೇಲಿ, ಗೋವಾ, ಮಣಿಪುರ, ಲಕ್ಷದ್ವೀಪ, ಒಡಿಶಾ, ಪುದುಚೆರಿ, ಆಂಧ್ರಪ್ರದೇಶ, ಅಸ್ಸಾಮ್, ಬಿಹಾರ, ಚಂಡೀಗಧ, ಡಾಮನ್ ಮತ್ತು ಡಿಯು, ಹಿಮಾಚಲಪ್ರದೇಶ, ಜಾರ್ಖಂಡ್, ಪಂಜಾಬ್, ತ್ರಿಪುರಾದ ಎಲ್ಲ ಅರ್ಜಿದಾರರು ಹಜ್ ಗೆ ತೆರಳಬಹುದು ಎಂದು ಮೂಲಗಳು ತಿಳಿಸಿವೆ.

ಈ ವರ್ಷ ದಾಖಲೆಯ ಎರಡು ಲಕ್ಷ ಭಾರತೀಯರು ಯಾವುದೇ ಸಬ್ಸಿಡಿ ಇಲ್ಲದೆ ಹಜ್ ಯಾತ್ರೆ ಕೈಗೊಳ್ಳಲಿದ್ದಾರೆ. ಈ ವರ್ಷದ ಮತ್ತೊಂದು ಪ್ರಮುಖಾಂಶ ಅಂದರೆ ಎರಡು ಸಾವಿರದ ಮುನ್ನೂರಾ ನಲವತ್ತು ಮಹಿಳೆಯರು ಪುರುಷರ ಜತೆಗೂಡಿ ತೆರಳಲಿದ್ದಾರೆ. ಕೋಟಾ ಹೆಚ್ಚಳ ಮಾಡಿದ್ದರಿಂದ ಹಲವು ರಾಜ್ಯದವರಿಗೆ ಅನುಕೂಲ ಆಗಿದೆ.
2014ರಲ್ಲಿ ಭಾರತದ ಹಜ್ ಕೋಟಾ 1,36,000 ಇತ್ತು. ಕಳೆದ ಐದು ವರ್ಷದಲ್ಲಿ ಆ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗಿ, ಎರಡು ಲಕ್ಷ ತಲುಪಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications