India Rain June Report: ದಕ್ಷಿಣ ಭಾರತಕ್ಕೆ ಶೇ.14ರಷ್ಟು ಅಧಿಕ ಮಳೆ, ಕೊರತೆ ಆಗಿದ್ದೆಲ್ಲಿ, ಎಷ್ಟು?
ಬೆಂಗಳೂರು, ಜುಲೈ 02: ಈ ವರ್ಷ ಮುಂಗಾರು ಮಳೆ ನಿಗದಿತ ಅವಧಿಗಿಂತಲೂ ಎರಡು ಮೂರು ದಿನ ಮೊದಲೇ ದೇಶವನ್ನು ಪ್ರವೇಶಿಸಿತ್ತು. ನಂತರ ಕ್ರಮೇಣ ಕರ್ನಾಟಕ ಮಾರ್ಗವಾಗಿ ಉತ್ತರ ಭಾರತದತ್ತ ವ್ಯಾಪಿಸಿತು. ಇದೀಗ ಮುಂಗಾರು ಮಳೆ ಆರಂಭವಾಗಿ ಒಂದು ತಿಂಗಳು ಪೂರ್ಣಗೊಂಡಿದ್ದು, ಜೂನ್ ನಲ್ಲಿ ದಕ್ಷಿಣ ಭಾರತಕ್ಕೆ ಮಾತ್ರವೇ ಅತ್ಯಧಿಕ ಮಳೆ ದಾಖಲಾಗಿದೆ ಎಂದು ಐಎಂಡಿ ವರದಿ ತಿಳಿಸಿದೆ.
ಹೌದು, ಮುಂಗಾರು ಆರಂಭದಲ್ಲೇ ಚಂಡಮಾರುತದ ಜೊತೆ ಜೊತೆಗೆ ಆರ್ಭಟ ಶುರುಮಾಡಿತ್ತು. ಜೂನ್ ತಿಂಗಳ 30ದಿನ ದೇಶಾದ್ಯಂತ ನಿರೀಕ್ಷಿತ ಮಟ್ಟದಲ್ಲಿ ಮಳೆ ಆಗಿಲ್ಲ. ಕೇವಲ ದಕ್ಷಿಣ ಭಾರತದಲ್ಲಿ ಮಾತ್ರವೇ ಉತ್ತಮ ಮಳೆ ಆಗಿದೆ.

ಜೂನ್ ತಿಂಗಳಲ್ಲಿ ದಕ್ಷಿಣ ಭಾರತದಲ್ಲಿ ವಾಡಿಕೆಗಿಂತಲೂ ಶೇಕಡಾ 14ರಷ್ಟು ಅಧಿಕ ಮಳೆ ದಾಖಲಾಗಿದೆ. ಇನ್ನೂ ಇಡೀ ದೇಶದ ಮಟ್ಟಿಗೆ ನೋಡಿದರೆ, ಜೂನ್ ತಿಂಗಳಲ್ಲಿ ಭಾರತದಲ್ಲಿ ವಾಡಿಕೆ 165,3 ಮಿಲಿ ಮೀಟರ್ ಆಗಬೇಕಿತ್ತು, ಆಗಿದ್ದ ಮಾತ್ರ ಕೇವಲ 147.2 ಮಿಲಿ ಮೀಟರ್. ಹೀಗಾಗಿ ಈ ಭಾರಿ ದೇಶದಲ್ಲಿ ಶೇಕಡಾ 11 ರಷ್ಟು ಮಳೆ ಕೊರತೆ ಆಗಿದೆ.
ಇನ್ನೂ ಕಳೆದ ಐದು ವರ್ಷಗಳಲ್ಲಿ ಜೂನ್ ನಲ್ಲಿ ಅತೀ ಕಡಿಮೆ ಮಳೆ ಆಗಿರುವುದು 2024ರ ಜೂನ್ನಲ್ಲೇ ಮೊದಲೂ ಅಂತಲೂ ಹವಾಮಾನ ಇಲಾಖೆ ವಿವರಿಸಿದೆ.

ಖುಷಿಯ ವಿಷಯವೆಂದರೆ ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ ಹಾಗೂ ಆಂಧ್ರಪ್ರದೇಶ ಇವೆಲ್ಲ ಒಳಗೊಂಡ ದಕ್ಷಿಣ ಭಾರತದಲ್ಲಿ ಈ ವರ್ಷ ಜೂನ್ ನಲ್ಲಿ ಮುಂಗಾರಿನ ಮೊದಲ ತಿಂಗಳೇ ಅತ್ಯಧಿಕ ಮಳೆ (ಶೇ.14) ದಾಖಲಾಗಿದೆ.
ಎಲ್ಲೆಲ್ಲಿ ಎಷ್ಟು ಮಳೆ ಕೊರತೆ ಆಗಿದೆ?
ಭಾರತದ ದಕ್ಷಿಣ ರಾಜ್ಯಗಳ ಹೊರತಾಗಿ ವಾಯುವ್ಯ ಭಾರತ ರಾಜ್ಯಗಳಲ್ಲಿ ಜೂನ್ ತಿಂಗಳಲ್ಲಿ ಶೇ.33ರಷ್ಟು ಮಳೆ ಕೊರತೆ ಆಗಿದೆ. ಮಧ್ಯ ಭಾರತದ ರಾಜ್ಯಗಳಲ್ಲಿ ಶೇಕಡಾ 14ರಷ್ಟು, ಈಶಾನ್ಯ ಭಾರತದ ರಾಜ್ಯಗಳಲ್ಲಿ ಶೇಕಡಾ 13ರಷ್ಟು ಮಳೆ ಕೊರತೆ ಉಂಟಾಗಿದೆ.
ಇನ್ನು ಭಾರತ ಈ ಭಾರಿ 546 ಬೇಸಿಗೆಯ ದಿನಗಳನ್ನು ಎದುರಿಸಿದೆ. ತೀವ್ರ ತಾಪಮಾನಕ್ಕೆ ಜನರು ಹೈರಾಣಾಗಿದ್ದಾರೆ. ಇಷ್ಟು ದಿನದ ತಾಪಮಾನ ಕಳೆದ ಹದಿನಾಲ್ಕು ವರ್ಷಗಳಲ್ಲಿ ಇದೇ ಗರಿಷ್ಠ ಎನ್ನಲಾಗಿದೆ. ಹವಾಮಾನ ಇಲಾಖೆ ಪ್ರಕಾರ, ಭಾರತವು 181 ಉಷ್ಣ ಮಾರುತದ ದಿನಗಳನ್ನು ಅನುಭವಿಸಿದೆ ಎಂದು ತಿಳಿಸಿದೆ.
-
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
ಇಸ್ರೇಲ್-ಯುಎಸ್ ಜಂಟಿ ದಾಳಿ ಅಬ್ಬರ: ಇರಾನ್ಗೆ ಉತ್ತರಾಧಿಕಾರಿ ನೇಮಕ, ಇಂದಿನ ಪ್ರಮುಖಾಂಶಗಳು ಇಲ್ಲಿವೆ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್











Click it and Unblock the Notifications