7th Pay Commission: ತುಟ್ಟಿಭತ್ಯೆ ಬೆನ್ನಲ್ಲೆ ರಾಜ್ಯ ಸರ್ಕಾರಿ ನೌಕರರಿಗೆ 'ದೀಪಾವಳಿ ಬಂಪರ್' ಘೋಷಣೆ
ಬೆಂಗಳೂರು, ಅಕ್ಟೋಬರ್ 31: ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಪೂರ್ವದಲ್ಲಿಯೇ ತುಟ್ಟಿಭತ್ಯೆ (DA Hike) ಹಾಗೂ ತುಟ್ಟಿ ಪರಿಹಾರವನ್ನು (DR Hike) ಘೋಷಿಸಲಾಗಿತ್ತು. ಇದರ ಬೆನ್ನಲ್ಲೆ ರಾಜ್ಯ ಸರ್ಕಾರಗಳು ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್ ನೀಡಿವೆ. ಕೋಟ್ಯಾಂತರ ನೌಕರರು, ಪಿಂಚಣಿದಾರಿಗೆ ಡಿಎ ಜೊತೆಗೆ ದೀಪಾವಳಿ ಬೋನಸ್ (Diwali Bonus) ಸಹ ಘೋಷಣೆ ಆಗಿದೆ. ದೀಪಾವಳಿ ಹಬ್ಬಕ್ಕೆ ಸರ್ಕಾರಿ ನೌಕರರ ಖಷಿ ಡಬಲ್ ಆಗಿದೆ.
ಕೇಂದ್ರ ಸರ್ಕಾರವು ಈಗಾಗಲೇ ನೌಕರರಿಗೆ ತುಟ್ಟಿಭತ್ಯೆ ಹಾಗೂ ತುಟ್ಟಿ ಪರಿಹಾರವನ್ನು ಘೋಷಿಸಿದೆ. ದಿಪಾವಳಿಗೂ ಮೊದಲೇ ಶೇಕಡಾ 3ರಷ್ಟು ತುಟ್ಟಿಭತ್ಯೆ ಏರಿಕೆ ಮಾಡಿದೆ. ಅದರ ಪ್ರಮಾಣ ಸದ್ಯ 53ಕ್ಕೆ ತಲುಪಿದೆ. ಇದರ ಬೆನ್ನಲ್ಲೆ ಹಲವು ಭತ್ಯೆಗಳು ಸಹ ಪರಿಷ್ಕರಣೆಗೊಳ್ಳಲಿವೆ ಎನ್ನಲಾಗಿದೆ. ಈ ಮಧ್ಯೆ ಎದುರಾದ ದೀಪಾವಳಿಗೆ ವಿವಿಧ ರಾಜ್ಯ ಸರ್ಕಾರಗಳು ಸರ್ಕಾರಿ ನೌಕರರಿಗೆ ದೀಪಾವಳಿ ಬೋನಸ್ ಘೋಷಿಸುವ ಮೂಲಕ ಉದ್ಯೋಗಿಗಳ ಖಷಿ ಹೆಚ್ಚಿಸಿವೆ. ಹೆಚ್ಚುತ್ತಿರುವ ಬೆಲೆ ಏರಿಕೆ, ಹಣದುಬ್ಬರದಂತಹ ಸಂದರ್ಭದಲ್ಲಿ ನೌಕರರಿಗೆ ಸರ್ಕಾರಗಳು ಆಸರೆಯಾಗಿವೆ.

ಉತ್ತರ ಪ್ರದೇಶದ ರಾಜ್ಯ ಸರ್ಕಾರವು ದೀಪಾವಳಿ ಪ್ರಯುಕ್ತ ತನ್ನ ನೌಕರರಿಗೆ ಬೋನಸ್ ಘೋಷಿಸಿದೆ. ಇದರ ಪ್ರಕಾರ ನೌಕರರು ಈ ದೀಪಾವಳಿಗೆ ಒಂದು ತಿಂಗಳು ಹಣವನ್ನು ಹೆಚ್ಚುವರಿಯಾಗಿ ಪಡೆಯಲಿದ್ದಾರೆ. ಶೀಘ್ರವೇ ಈ ಹಣ ಲಕ್ಷಾಂತರ ನೌಕರರ ಬ್ಯಾಂಕ್ ಖಾತೆಗೆ ಜಮೆ ಆಗಲಿದೆ.
ಗುಜರಾತ್ ರಾಜ್ಯ ಸರ್ಕಾರ ಸಹ ಸರ್ಕಾರಿ ಉದ್ಯೋಗಿಗಳಿಗೆ ದೀಪಾವಳಿ ಬೋನಸ್ ಘೋಷಣೆ ಮಾಡಿದ್ದು, ಶೀಘ್ರವೇ ಬಿಡುಗಡೆ ಮಾಡಲಿದೆ. ಭೂಪೇಂದ್ರ ಪಟೇಲ್ ಅವರು ನೌಕರರಿಗೆ ಹಬ್ಬಕ್ಕೆ ಗಿಫ್ಟ್ ನೀಡುವ ಮೂಲಕ ಖುಷಿ ಹೆಚ್ಚಿಸಿದ್ದಾರೆ.

ಈ ಮೇಲಿನ ಎರಡು ರಾಜ್ಯಗಳು ಮಾತ್ರವಲ್ಲದೇ, ಅರುಣಾಚಲ ಪ್ರದೇಶ ರಾಜ್ಯ ಸರ್ಕಾರ ಸಹ ತನ್ನ ನೌಕರರಿಗೆ ದೀಪಾವಳಿ ವೇಳೆ ಸರ್ಕಾರಿ ನೌಕರರ ತುಟ್ಟಿಭತ್ಯೆ ಹಾಗೂ ತುಟ್ಟಿ ಪರಿಹಾರವನ್ನು ಶೇಕಡಾ 3ರಷ್ಟು ಹೆಚ್ಚಳ ಮಾಡಿ ನಿರ್ಧಾರ ಪ್ರಕಟಿಸಿದೆ. ಇದು ಜುಲೈ 1ರಿಂದಲೇ ಅನ್ವಯವಾಗಲಿದೆ. ನೌಕರರಿಗೆ ಖಾತೆಗೆ ಈ ಹಣ ಜಮೆ ಆಗಲಿದೆ.
ತಮಿಳುನಾಡು ರಾಜ್ಯ ಸರ್ಕಾರ ತನ್ನ 16ಲಕ್ಷಕ್ಕೂ ಹೆಚ್ಚು ನೌಕರರಿಗೆ ತುಟ್ಟಿಭತ್ಯ ನೀಡಲಿದೆ. ಇದು ಕಳೆದ ಜುಲೈ 1ರಿಂದ ಜಾರಿಗೆ ಬರುವಂತೆ ನೀಡಲಾಗುವುದು ಎಂದು ಹೇಳಿದೆ.
ಕೇಂದ್ರ ಸರ್ಕಾರ ಬೋನಸ್ ಘೋಷಣೆ ಜೊತೆಗೆ ಕೇಂದ್ರ ಹಣಕಾಸು ಇಲಾಖೆಯು ನೌಕರರ ಒಂದು ತಿಂಗಳ ವೇತನಷ್ಟು ನಾನ್ ಪ್ರೊಡಕ್ಟಿವಿಟಿ ಲಿಂಕ್ಡ್ ಬೋನಸ್ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದೆ. ಒಟ್ಟಾರೆ ನೌಕರರಿಗೆ ಈ ವರ್ಷ ಎರಡು ಭಾರಿ ವಿವಿಧ ಆರ್ಥಿಕ ಹೆಚ್ಚಳದ ಲಾಭ ಪಡೆದುಕೊಂಡಿದ್ದಾರೆ.
ಇತ್ತ ದೆಹಲಿ ರಾಜ್ಯ ಸರ್ಕಾರವು ನೈರ್ಮಲ್ಯ ಕೆಲಸಗಾರರಿಗೆ ದೀಪಾವಳಿ ಬೋನಸ್ ನೀಡುವುದಾಗಿ ಘೋಷಿಸಿದೆ. ಹಬ್ಬಕ್ಕೆ ಸ್ವಚ್ಛತಾ ಕಾರ್ಮಿಕರಿಗೂ ಸರ್ಕಾರ ಆದ್ಯತೆ ನೀಡಿದೆ..
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications