7th Pay Commission: ತುಟ್ಟಿಭತ್ಯೆ ಬೆನ್ನಲ್ಲೆ ರಾಜ್ಯ ಸರ್ಕಾರಿ ನೌಕರರಿಗೆ 'ದೀಪಾವಳಿ ಬಂಪರ್' ಘೋಷಣೆ
ಬೆಂಗಳೂರು, ಅಕ್ಟೋಬರ್ 31: ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಪೂರ್ವದಲ್ಲಿಯೇ ತುಟ್ಟಿಭತ್ಯೆ (DA Hike) ಹಾಗೂ ತುಟ್ಟಿ ಪರಿಹಾರವನ್ನು (DR Hike) ಘೋಷಿಸಲಾಗಿತ್ತು. ಇದರ ಬೆನ್ನಲ್ಲೆ ರಾಜ್ಯ ಸರ್ಕಾರಗಳು ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್ ನೀಡಿವೆ. ಕೋಟ್ಯಾಂತರ ನೌಕರರು, ಪಿಂಚಣಿದಾರಿಗೆ ಡಿಎ ಜೊತೆಗೆ ದೀಪಾವಳಿ ಬೋನಸ್ (Diwali Bonus) ಸಹ ಘೋಷಣೆ ಆಗಿದೆ. ದೀಪಾವಳಿ ಹಬ್ಬಕ್ಕೆ ಸರ್ಕಾರಿ ನೌಕರರ ಖಷಿ ಡಬಲ್ ಆಗಿದೆ.
ಕೇಂದ್ರ ಸರ್ಕಾರವು ಈಗಾಗಲೇ ನೌಕರರಿಗೆ ತುಟ್ಟಿಭತ್ಯೆ ಹಾಗೂ ತುಟ್ಟಿ ಪರಿಹಾರವನ್ನು ಘೋಷಿಸಿದೆ. ದಿಪಾವಳಿಗೂ ಮೊದಲೇ ಶೇಕಡಾ 3ರಷ್ಟು ತುಟ್ಟಿಭತ್ಯೆ ಏರಿಕೆ ಮಾಡಿದೆ. ಅದರ ಪ್ರಮಾಣ ಸದ್ಯ 53ಕ್ಕೆ ತಲುಪಿದೆ. ಇದರ ಬೆನ್ನಲ್ಲೆ ಹಲವು ಭತ್ಯೆಗಳು ಸಹ ಪರಿಷ್ಕರಣೆಗೊಳ್ಳಲಿವೆ ಎನ್ನಲಾಗಿದೆ. ಈ ಮಧ್ಯೆ ಎದುರಾದ ದೀಪಾವಳಿಗೆ ವಿವಿಧ ರಾಜ್ಯ ಸರ್ಕಾರಗಳು ಸರ್ಕಾರಿ ನೌಕರರಿಗೆ ದೀಪಾವಳಿ ಬೋನಸ್ ಘೋಷಿಸುವ ಮೂಲಕ ಉದ್ಯೋಗಿಗಳ ಖಷಿ ಹೆಚ್ಚಿಸಿವೆ. ಹೆಚ್ಚುತ್ತಿರುವ ಬೆಲೆ ಏರಿಕೆ, ಹಣದುಬ್ಬರದಂತಹ ಸಂದರ್ಭದಲ್ಲಿ ನೌಕರರಿಗೆ ಸರ್ಕಾರಗಳು ಆಸರೆಯಾಗಿವೆ.

ಉತ್ತರ ಪ್ರದೇಶದ ರಾಜ್ಯ ಸರ್ಕಾರವು ದೀಪಾವಳಿ ಪ್ರಯುಕ್ತ ತನ್ನ ನೌಕರರಿಗೆ ಬೋನಸ್ ಘೋಷಿಸಿದೆ. ಇದರ ಪ್ರಕಾರ ನೌಕರರು ಈ ದೀಪಾವಳಿಗೆ ಒಂದು ತಿಂಗಳು ಹಣವನ್ನು ಹೆಚ್ಚುವರಿಯಾಗಿ ಪಡೆಯಲಿದ್ದಾರೆ. ಶೀಘ್ರವೇ ಈ ಹಣ ಲಕ್ಷಾಂತರ ನೌಕರರ ಬ್ಯಾಂಕ್ ಖಾತೆಗೆ ಜಮೆ ಆಗಲಿದೆ.
ಗುಜರಾತ್ ರಾಜ್ಯ ಸರ್ಕಾರ ಸಹ ಸರ್ಕಾರಿ ಉದ್ಯೋಗಿಗಳಿಗೆ ದೀಪಾವಳಿ ಬೋನಸ್ ಘೋಷಣೆ ಮಾಡಿದ್ದು, ಶೀಘ್ರವೇ ಬಿಡುಗಡೆ ಮಾಡಲಿದೆ. ಭೂಪೇಂದ್ರ ಪಟೇಲ್ ಅವರು ನೌಕರರಿಗೆ ಹಬ್ಬಕ್ಕೆ ಗಿಫ್ಟ್ ನೀಡುವ ಮೂಲಕ ಖುಷಿ ಹೆಚ್ಚಿಸಿದ್ದಾರೆ.

ಈ ಮೇಲಿನ ಎರಡು ರಾಜ್ಯಗಳು ಮಾತ್ರವಲ್ಲದೇ, ಅರುಣಾಚಲ ಪ್ರದೇಶ ರಾಜ್ಯ ಸರ್ಕಾರ ಸಹ ತನ್ನ ನೌಕರರಿಗೆ ದೀಪಾವಳಿ ವೇಳೆ ಸರ್ಕಾರಿ ನೌಕರರ ತುಟ್ಟಿಭತ್ಯೆ ಹಾಗೂ ತುಟ್ಟಿ ಪರಿಹಾರವನ್ನು ಶೇಕಡಾ 3ರಷ್ಟು ಹೆಚ್ಚಳ ಮಾಡಿ ನಿರ್ಧಾರ ಪ್ರಕಟಿಸಿದೆ. ಇದು ಜುಲೈ 1ರಿಂದಲೇ ಅನ್ವಯವಾಗಲಿದೆ. ನೌಕರರಿಗೆ ಖಾತೆಗೆ ಈ ಹಣ ಜಮೆ ಆಗಲಿದೆ.
ತಮಿಳುನಾಡು ರಾಜ್ಯ ಸರ್ಕಾರ ತನ್ನ 16ಲಕ್ಷಕ್ಕೂ ಹೆಚ್ಚು ನೌಕರರಿಗೆ ತುಟ್ಟಿಭತ್ಯ ನೀಡಲಿದೆ. ಇದು ಕಳೆದ ಜುಲೈ 1ರಿಂದ ಜಾರಿಗೆ ಬರುವಂತೆ ನೀಡಲಾಗುವುದು ಎಂದು ಹೇಳಿದೆ.
ಕೇಂದ್ರ ಸರ್ಕಾರ ಬೋನಸ್ ಘೋಷಣೆ ಜೊತೆಗೆ ಕೇಂದ್ರ ಹಣಕಾಸು ಇಲಾಖೆಯು ನೌಕರರ ಒಂದು ತಿಂಗಳ ವೇತನಷ್ಟು ನಾನ್ ಪ್ರೊಡಕ್ಟಿವಿಟಿ ಲಿಂಕ್ಡ್ ಬೋನಸ್ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದೆ. ಒಟ್ಟಾರೆ ನೌಕರರಿಗೆ ಈ ವರ್ಷ ಎರಡು ಭಾರಿ ವಿವಿಧ ಆರ್ಥಿಕ ಹೆಚ್ಚಳದ ಲಾಭ ಪಡೆದುಕೊಂಡಿದ್ದಾರೆ.
ಇತ್ತ ದೆಹಲಿ ರಾಜ್ಯ ಸರ್ಕಾರವು ನೈರ್ಮಲ್ಯ ಕೆಲಸಗಾರರಿಗೆ ದೀಪಾವಳಿ ಬೋನಸ್ ನೀಡುವುದಾಗಿ ಘೋಷಿಸಿದೆ. ಹಬ್ಬಕ್ಕೆ ಸ್ವಚ್ಛತಾ ಕಾರ್ಮಿಕರಿಗೂ ಸರ್ಕಾರ ಆದ್ಯತೆ ನೀಡಿದೆ..
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications