ಅಬುಧಾಬಿಯಲ್ಲಿ ಮೊಳಗಿದ "ವಂದೇ ಮಾತರಂ" ಗೀತೆ ಸದ್ದು, ಭಾರೀ ವೈರಲ್
ನವದೆಹಲಿ, ಫೆಬ್ರವರಿ, 14: ಅಬುಧಾಬಿಯ ಜಾಯೆದ್ ಕ್ರೀಡಂಗಾಣದಲ್ಲಿ ಮಂಗಳವಾರ (ಫೆಬ್ರವರಿ 13) "ಅಹ್ಲಾನ್ ಮೋದಿ" ಕಾರ್ಯಕ್ರಮ ನಡೆದಿದ್ದು, ಈ ವೇಳೆ ಇಡೀ ಕ್ರೀಡಾಂಗಣದ ತುಂಬಾ "ವಂದೇ ಮಾತರಂ" ದೇಶಭಕ್ತಿಯ ಗೀತೆ ಮೊಳಗಿತ್ತು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ಅಬುಧಾಬಿಯ ಸ್ಟೇಡಿಯಂನಲ್ಲಿ ವಂದೇ ಮಾತರಂ ಗೀತೆಯನ್ನು ಹಾಡಿದ ಅದ್ಭುತ ಕ್ಷಣದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಆಹ್ಲಾನ್ ಮೋದಿ ಕಾರ್ಯಕ್ರಮದಲ್ಲಿ ಭಾರತೀಯ ಮೂಲದ ಸಮುದಾಯವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಭಾಷಣವು ಭಾರತ ಮತ್ತು ಯುಎಇ ನಡುವಿನ ಬಲವಾದ ಬಾಂಧವ್ಯವನ್ನು ಸೂಚಿಸುವಂತಿತ್ತು.
#WATCH | UAE: A large number of people present at Zayed Sports Stadium in Abu Dhabi for PM Narendra Modi's 'Ahlan Modi' event.
— ANI (@ANI) February 13, 2024
PM will address the Indian diaspora here, shortly. pic.twitter.com/USHsrZnjx8
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪ್ರೇರಣೆ ಮತ್ತು ಮಾರ್ಗದರ್ಶನದ ಮಾತುಗಳಿಗಾಗಿ ಸಾಕಷ್ಟು ಜನರು ಕಾತರದಿಂದ ಕಾದಿದ್ದರು. ಮೋದಿ ಕೂಡ ತಮ್ಮ ಮಾತಿನಲ್ಲಿ ಭಾರತೀಯ ಸಮುದಾಯವನ್ನು ಸೆಳೆಯುವ ನಿಟ್ಟಿನಲ್ಲಿ ಪ್ರಮುಖ ಅಂಶಗಳನ್ನು ಹೇಳಿದರು.

ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಯುಎಇಯ ಅಬುಧಾಬಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅವರನ್ನು ಯುಎಇ ಅಧ್ಯಕ್ಷ ಶೇಖ್ ಮೊಹಮದ್ ಜಿನ್ ಜಯೇದ್ ಅಲ್ ನಹ್ಯಾನ್ ಸ್ವಾಗತಿಸಿದ್ದರು. ಪ್ರಧಾನಿ ಮೋದಿ ಯುಎಇಗೆ ಆಗಮಿಸಿದ ನಂತರ ಉಭಯ ನಾಯಕರು ವ್ಯಾಪಕ ಮಾತುಕತೆ ನಡೆಸಿದರು.
ಪ್ರಧಾನಿ ಮೋದಿ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ಬೆಂಬಲಕ್ಕಾಗಿ ಮತ್ತು ಹಿಂದೂ ದೇವಾಲಯದ ನಿರ್ಮಾಣಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕಾಗಿ ಕೃತಜ್ಞತೆ ತಿಳಿಸಿದರು. ಅಲ್ಲದೆ ಇದೇ ವೇಳೆ ಅವರು ಇದು ಭಾರತದ ಬಗ್ಗೆ ಅವರ ಆಳವಾದ ಬಾಂಧವ್ಯವನ್ನು ಸಂಕೇತಿಸುತ್ತದೆ ಎಂದರು.
ಅಬುಧಾಬಿಯಲ್ಲಿ ಮೊಟ್ಟ ಮೊದಲ ಹಿಂದೂ ದೇವಾಲಯವು ಸಂಪೂರ್ಣ ಕಲ್ಲಿನಿಂದಲೇ ನಿರ್ಮಾಣ ಮಾಡಲಾಗಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ (ಫೆಬ್ರವರಿ 14) ಅಬುಧಾಬಿಯಲ್ಲಿ ಈ ಮೊಟ್ಟ ಮೊದಲ ಹಿಂದೂ ಕಲ್ಲಿನ ದೇವಾಲಯವನ್ನು ಉದ್ಘಾಟನೆ ಮಾಡಿದರು.
ಅಬುಧಾಬಿಯಲ್ಲಿ ಸುಮಾರು 27 ಎಕರೆ ಭೂಮಿಯಲ್ಲಿ ಈ ದೇವಾಲಯ ನಿರ್ಮಾಣ ಆಗಿದೆ. ದೇವಾಲಯದ ಭೂಮಿಯನ್ನು ಯುಎಇ ಸರ್ಕಾರವು ದಾನ ಮಾಡುವುದರೊಂದಿಗೆ 2019ರಿಂದ ನಿರ್ಮಾಣ ಕಾರ್ಯಗಳನ್ನು ನಡೆಸಿತ್ತು.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications